ಎಎಸ್ಜಿ (ಹೆಚ್ಚುವರಿ ಸಾಲಿಸಿಟರ್ ಜನರಲ್) ಎಸ್. ವಿ ರಾಜು ಅವರು ತನಿಖಾ ಸಂಸ್ಥೆಯ ಪರವಾಗಿ ವಾದ ಮಂಡಿಸಲಿದ್ದಾರೆ ಎಂದು ಇ.ಡಿ ವಿಶೇಷ ವಕೀಲ ಜೊಹೆಬ್ ಹೊಸೈನ್ ತಿಳಿಸಿದ್ದಾರೆ. ಅರವಿಂದ ಕೇಜ್ರಿವಾಲ್ ಅವರ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ.
ನ್ಯಾಯಾಲಯದ ಆವರಣ ಮತ್ತು ಸುತ್ತಮುತ್ತ ಬಿಗಿ ಭದ್ರತೆಯೊಂದಿಗೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರ ಮುಂದೆ ಕೇಜ್ರಿವಾಲ್ ಅವರನ್ನು ಹಾಜರುಪಡಿಸಲಾಯಿತು.