ಇ.ಡಿ ಕಚೇರಿಯಿಂದ ಹೊರಬಂದ ಬಳಿಕ ಮಾತನಾಡಿದ ಬ್ಯಾನರ್ಜಿ,‘ ವಿರೋಧ ಪಕ್ಷಗಳ ಒಕ್ಕೂಟ ‘ಇಂಡಿಯಾ‘ ಸಭೆಗೆ ಹಾಜರಾಗುವುದನ್ನು ತಡೆಯುವ ಸಲುವಾಗಿ ವಿಚಾರಣೆಗೆ ಕರೆಯಲಾಗಿತ್ತು. ಇ.ಡಿ ಅಧಿಕಾರಿಗಳು ತಮ್ಮ ಸಮಯವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ. ಅದಕ್ಕಾಗಿ ನಾನು ಅವರನ್ನು ದೂರುವುದಿಲ್ಲ. ‘ರಾಜಕೀಯ ಗುರು’ಗಳಿಗಾಗಿ ಹಾಗೆ ಮಾಡುತ್ತಾರೆ. ಸತತ 72 ತಾಸು ವಿವಾರಣೆ ನಡೆಸಿದರೂ ಹೆದರುವುದಿಲ್ಲ’ ಎಂದು ಹೇಳಿದರು.