<p><strong>ನವದೆಹಲಿ</strong>: ಆಮ್ ಆದ್ಮಿ ಪಕ್ಷವು ಕೇಂದ್ರದ ಎನ್ಡಿಎ ಸರ್ಕಾರದ ವಿರುದ್ಧ ಗಟ್ಟಿ ಧ್ವನಿಯಾಗಿದೆ. ಹೀಗಾಗಿಯೇ ಎಎಪಿ ನಾಯಕ ಸೌರಭ್ ಭಾರದ್ವಾಜ್ ಮನೆ ಮೇಲೆ ಜಾರಿ ನಿರ್ದೇಶನಾಲಯದ(ಇ.ಡಿ) ದಾಳಿ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆರೋಪಿಸಿದ್ದಾರೆ.</p><p>ಸೌರಭ್ ಭಾರದ್ವಾಜ್ ಮನೆ ಮೇಲಿನ ಇ.ಡಿ ದಾಳಿಯು ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಯನ್ನು ದುರುಪಯೋಗಪಡಿಸಿಕೊಂಡ ಮತ್ತೊಂದು ಪ್ರಕರಣ ಎಂದು ದೂರಿದ್ದಾರೆ. ಈ ಹಿಂದೆ ಯಾವುದೇ ಪಕ್ಷ ಬಿಜೆಪಿ ರೀತಿ ಎಎಪಿಯನ್ನು ಟಾರ್ಗೆಟ್ ಮಾಡಿರಲಿಲ್ಲ ಎಂದಿದ್ದಾರೆ.</p>. <p>ಕೇಂದ್ರದ ಮೋದಿ ಸರ್ಕಾರದ ತಪ್ಪು ನೀತಿಗಳು ಮತ್ತು ಭ್ರಷ್ಟಾಚಾರದ ವಿರುದ್ಧ ಎಎಪಿ ಗಟ್ಟಿ ಧ್ವನಿಯಾಗಿದೆ. ನಮ್ಮ ಧ್ವನಿ ನಿಗ್ರಹಿಸಲು ಬಿಜೆಪಿ ಯತ್ನಿಸುತ್ತಿದೆ. ಆದರೆ, ಅದು ಸಾಧ್ಯವಿಲ್ಲ ಎಂದಿದ್ದಾರೆ.</p><p>ಬಿಜೆಪಿ ದಾಳಿಗಳಿಗೆ ಎಎಪಿ ಭಯಪಡುವುದಿಲ್ಲ. ಈ ಹಿಂದಿನಂತೆಯೇ ಕೇಂದ್ರದ ತಪ್ಪು ನೀತಿಗಳು ಮತ್ತು ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತುವುದನ್ನು ಮುಂದುವರಿಸುತ್ತೇವೆ ಎಂದು ಕೇಜ್ರಿವಾಲ್ ಗುಡುಗಿದ್ದಾರೆ.</p><p>ಪ್ರಧಾನಿ ನರೇಂದ್ರ ಮೋದಿಯವರ ಪದವಿ ನಕಲಿ ಎಂಬ ಕುರಿತು ಸೋಮವಾರ ದೊಡ್ಡ ಸುದ್ದಿ ಹೊರಬಂದ ಹಿನ್ನೆಲೆಯಲ್ಲಿ ಗಮನ ಬೇರೆಡೆ ಸೆಳೆಯಲು ಈ ದಾಳಿ ನಡೆಯುತ್ತಿದೆ. ಮೋದಿಯವರು ಪಡೆದಿದ್ದಾರೆನ್ನಲಾದ ಪದವಿ ನಕಲಿ. ಅವರು ದೇಶದ ಜನತೆಗೆ ಸುಳ್ಳು ಹೇಳಿದ್ದಾರೆ ಎಂದು ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಆರೋಪಿಸಿದ್ದಾರೆ.</p> .ಹಣ ಅಕ್ರಮ ವರ್ಗಾವಣೆ: ಮಾಜಿ ಸಚಿವ ಸೌರಭ್ಗೆ ಸಂಬಂಧಿಸಿದ ಸ್ಥಳಗಳ ಮೇಲೆ ED ದಾಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಆಮ್ ಆದ್ಮಿ ಪಕ್ಷವು ಕೇಂದ್ರದ ಎನ್ಡಿಎ ಸರ್ಕಾರದ ವಿರುದ್ಧ ಗಟ್ಟಿ ಧ್ವನಿಯಾಗಿದೆ. ಹೀಗಾಗಿಯೇ ಎಎಪಿ ನಾಯಕ ಸೌರಭ್ ಭಾರದ್ವಾಜ್ ಮನೆ ಮೇಲೆ ಜಾರಿ ನಿರ್ದೇಶನಾಲಯದ(ಇ.ಡಿ) ದಾಳಿ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆರೋಪಿಸಿದ್ದಾರೆ.</p><p>ಸೌರಭ್ ಭಾರದ್ವಾಜ್ ಮನೆ ಮೇಲಿನ ಇ.ಡಿ ದಾಳಿಯು ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಯನ್ನು ದುರುಪಯೋಗಪಡಿಸಿಕೊಂಡ ಮತ್ತೊಂದು ಪ್ರಕರಣ ಎಂದು ದೂರಿದ್ದಾರೆ. ಈ ಹಿಂದೆ ಯಾವುದೇ ಪಕ್ಷ ಬಿಜೆಪಿ ರೀತಿ ಎಎಪಿಯನ್ನು ಟಾರ್ಗೆಟ್ ಮಾಡಿರಲಿಲ್ಲ ಎಂದಿದ್ದಾರೆ.</p>. <p>ಕೇಂದ್ರದ ಮೋದಿ ಸರ್ಕಾರದ ತಪ್ಪು ನೀತಿಗಳು ಮತ್ತು ಭ್ರಷ್ಟಾಚಾರದ ವಿರುದ್ಧ ಎಎಪಿ ಗಟ್ಟಿ ಧ್ವನಿಯಾಗಿದೆ. ನಮ್ಮ ಧ್ವನಿ ನಿಗ್ರಹಿಸಲು ಬಿಜೆಪಿ ಯತ್ನಿಸುತ್ತಿದೆ. ಆದರೆ, ಅದು ಸಾಧ್ಯವಿಲ್ಲ ಎಂದಿದ್ದಾರೆ.</p><p>ಬಿಜೆಪಿ ದಾಳಿಗಳಿಗೆ ಎಎಪಿ ಭಯಪಡುವುದಿಲ್ಲ. ಈ ಹಿಂದಿನಂತೆಯೇ ಕೇಂದ್ರದ ತಪ್ಪು ನೀತಿಗಳು ಮತ್ತು ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತುವುದನ್ನು ಮುಂದುವರಿಸುತ್ತೇವೆ ಎಂದು ಕೇಜ್ರಿವಾಲ್ ಗುಡುಗಿದ್ದಾರೆ.</p><p>ಪ್ರಧಾನಿ ನರೇಂದ್ರ ಮೋದಿಯವರ ಪದವಿ ನಕಲಿ ಎಂಬ ಕುರಿತು ಸೋಮವಾರ ದೊಡ್ಡ ಸುದ್ದಿ ಹೊರಬಂದ ಹಿನ್ನೆಲೆಯಲ್ಲಿ ಗಮನ ಬೇರೆಡೆ ಸೆಳೆಯಲು ಈ ದಾಳಿ ನಡೆಯುತ್ತಿದೆ. ಮೋದಿಯವರು ಪಡೆದಿದ್ದಾರೆನ್ನಲಾದ ಪದವಿ ನಕಲಿ. ಅವರು ದೇಶದ ಜನತೆಗೆ ಸುಳ್ಳು ಹೇಳಿದ್ದಾರೆ ಎಂದು ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಆರೋಪಿಸಿದ್ದಾರೆ.</p> .ಹಣ ಅಕ್ರಮ ವರ್ಗಾವಣೆ: ಮಾಜಿ ಸಚಿವ ಸೌರಭ್ಗೆ ಸಂಬಂಧಿಸಿದ ಸ್ಥಳಗಳ ಮೇಲೆ ED ದಾಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>