<p><strong>ನವದೆಹಲಿ</strong>: ಸಮಾಜದಲ್ಲಿನ ದುರ್ಬಲ ಮತ್ತು ಬಡ ಜನರಿಗೆ ಹಣದ ಆಮಿಷವೊಡ್ಡಿ, ಮತಾಂತರ ದಂಧೆ ನಡೆಸುತ್ತಿರುವ ಜಾಲದ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಚುರುಕುಗೊಳಿಸಿದೆ. </p><p>ಮತಾಂತರ ದಂಧೆಯ ಸೂತ್ರಧಾರ ಜಮಾಲುದ್ದೀನ್ ಅಲಿಯಾಸ್ ಚಂಗೂರ್ ಬಾಬಾನ ಅಕ್ರಮ ಚಟುವಟಿಕೆಗಳು ಮತ್ತು ವಿದೇಶದಿಂದ ವರ್ಗಾವಣೆಯಾಗಿರುವ ಹಣಕಾಸಿನ ಕುರಿತು ತನಿಖೆ ನಡೆಸುತ್ತಿರುವ ಇ.ಡಿ ಅಧಿಕಾರಿಗಳು, ಉತ್ತರ ಪ್ರದೇಶ ಮತ್ತು ಮುಂಬೈನಲ್ಲಿ ದಾಳಿ ನಡೆಸಿದ್ದು, ಶೋಧ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. </p><p>ಉತ್ತರ ಪ್ರದೇಶದ ಬಲರಾಂಪುರ ಜಿಲ್ಲೆಯ ಉಟ್ರೌಲಾದಲ್ಲಿರುವ 12 ಸ್ಥಳಗಳು ಮತ್ತು ಮುಂಬೈನ ಎರಡು ಕಡೆ ಇ.ಡಿ ಅಧಿಕಾರಿಗಳು ಬೆಳಿಗ್ಗೆ 5 ಗಂಟೆಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. </p><p>ಜುಲೈ 9ರಂದು ಜಾರಿ ನಿರ್ದೇಶನಾಲಯದ ಲಖನೌ ಘಟಕವು ಚಂಗೂರ್ ಬಾಬಾ ವಿರುದ್ಧ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್ಎ) ಪ್ರಕರಣ ದಾಖಲಿಸಿತ್ತು. </p><p>ಮತಾಂತರ ಜಾಲ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಚಂಗೂರ್ ಬಾಬಾನನ್ನು ಉತ್ತರ ಪ್ರದೇಶದ ಭಯೋತ್ಪಾದಕ ನಿಗ್ರಹ ಪಡೆ (ಎಟಿಎಸ್) ಈಗಾಗಲೇ ಬಂಧಿಸಿದೆ. ದೇಶದಲ್ಲಿ ಈ ಕಾರ್ಯಕ್ಕಾಗಿ ವಿದೇಶಗಳಿಂದ ₹106 ಕೋಟಿಗೂ ಹೆಚ್ಚು ಹಣಕಾಸು ಪಡೆದಿರುವ ಆರೋಪ ಅವರ ಮೇಲಿದೆ.</p>.ಯುಪಿ | ಧಾರ್ಮಿಕ ಮತಾಂತರ ದಂಧೆ: ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿದ ED.ಮಹಾರಾಷ್ಟ್ರ| ‘ಮತಾಂತರ ವಿರೋಧಿ ಕಾಯ್ದೆ ಶೀಘ್ರ’: ಗೃಹ ಖಾತೆ ರಾಜ್ಯ ಸಚಿವ ಭೋಯಾರ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸಮಾಜದಲ್ಲಿನ ದುರ್ಬಲ ಮತ್ತು ಬಡ ಜನರಿಗೆ ಹಣದ ಆಮಿಷವೊಡ್ಡಿ, ಮತಾಂತರ ದಂಧೆ ನಡೆಸುತ್ತಿರುವ ಜಾಲದ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಚುರುಕುಗೊಳಿಸಿದೆ. </p><p>ಮತಾಂತರ ದಂಧೆಯ ಸೂತ್ರಧಾರ ಜಮಾಲುದ್ದೀನ್ ಅಲಿಯಾಸ್ ಚಂಗೂರ್ ಬಾಬಾನ ಅಕ್ರಮ ಚಟುವಟಿಕೆಗಳು ಮತ್ತು ವಿದೇಶದಿಂದ ವರ್ಗಾವಣೆಯಾಗಿರುವ ಹಣಕಾಸಿನ ಕುರಿತು ತನಿಖೆ ನಡೆಸುತ್ತಿರುವ ಇ.ಡಿ ಅಧಿಕಾರಿಗಳು, ಉತ್ತರ ಪ್ರದೇಶ ಮತ್ತು ಮುಂಬೈನಲ್ಲಿ ದಾಳಿ ನಡೆಸಿದ್ದು, ಶೋಧ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. </p><p>ಉತ್ತರ ಪ್ರದೇಶದ ಬಲರಾಂಪುರ ಜಿಲ್ಲೆಯ ಉಟ್ರೌಲಾದಲ್ಲಿರುವ 12 ಸ್ಥಳಗಳು ಮತ್ತು ಮುಂಬೈನ ಎರಡು ಕಡೆ ಇ.ಡಿ ಅಧಿಕಾರಿಗಳು ಬೆಳಿಗ್ಗೆ 5 ಗಂಟೆಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. </p><p>ಜುಲೈ 9ರಂದು ಜಾರಿ ನಿರ್ದೇಶನಾಲಯದ ಲಖನೌ ಘಟಕವು ಚಂಗೂರ್ ಬಾಬಾ ವಿರುದ್ಧ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್ಎ) ಪ್ರಕರಣ ದಾಖಲಿಸಿತ್ತು. </p><p>ಮತಾಂತರ ಜಾಲ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಚಂಗೂರ್ ಬಾಬಾನನ್ನು ಉತ್ತರ ಪ್ರದೇಶದ ಭಯೋತ್ಪಾದಕ ನಿಗ್ರಹ ಪಡೆ (ಎಟಿಎಸ್) ಈಗಾಗಲೇ ಬಂಧಿಸಿದೆ. ದೇಶದಲ್ಲಿ ಈ ಕಾರ್ಯಕ್ಕಾಗಿ ವಿದೇಶಗಳಿಂದ ₹106 ಕೋಟಿಗೂ ಹೆಚ್ಚು ಹಣಕಾಸು ಪಡೆದಿರುವ ಆರೋಪ ಅವರ ಮೇಲಿದೆ.</p>.ಯುಪಿ | ಧಾರ್ಮಿಕ ಮತಾಂತರ ದಂಧೆ: ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿದ ED.ಮಹಾರಾಷ್ಟ್ರ| ‘ಮತಾಂತರ ವಿರೋಧಿ ಕಾಯ್ದೆ ಶೀಘ್ರ’: ಗೃಹ ಖಾತೆ ರಾಜ್ಯ ಸಚಿವ ಭೋಯಾರ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>