<p><strong>ತಿರುವನಂತಪುರ</strong>: ಕೇರಳದ ಕಂಡಲ ಸೇವಾ ಸಹಕಾರಿ ಬ್ಯಾಂಕ್ ಮೇಲೆ ಬುಧವಾರ ದಾಳಿ ನಡೆಸಿದಿದ್ದ ಜಾರಿ ನಿರ್ದೇಶನಾಲಯ ಗುರುವಾರವೂ ಪರಿಶೀಲನೆ ಮುಂದುವರಿಸಿತು. </p>.<p>ಕಾಟ್ಟಕ್ಕಡದಲ್ಲಿರುವ ಬ್ಯಾಂಕ್ ಮತ್ತು ಅದಕ್ಕೆ ಸಂಬಂಧಿಸಿದ ಇತರ ಸ್ಥಳಗಳು, ಬ್ಯಾಂಕ್ನ ಮಾಜಿ ಅಧ್ಯಕ್ಷ, ಸಿಪಿಐ ನಾಯಕ ಎನ್. ಭಾಸುರಾಂಗನ್ ಅವರ ನಿವಾಸಗಳಲ್ಲಿ ಶೋಧ ನಡೆಯುತ್ತಿದೆ. </p>.<p>ಇ.ಡಿ ದಾಳಿಯ ಭಾಗವಾಗಿ ಭಾಸುರಾಂಗನ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಈ ವೇಳೆ ಅವರು ಅಸ್ವಸ್ಥರಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ದಾಳಿ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಿಪಿಐನ ಜಿಲ್ಲಾ ಘಟಕ, ‘ಭಾಸುರಾಂಗನ್ ಅವರ ವಿರುದ್ಧ ಹಿಂದೆಯೇ ಕ್ರಮ ಕೈಗೊಳ್ಳಲಾಗಿದೆ. ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೂ ಉಚ್ಚಾಟಿಸಲಾಗಿದೆ‘ ಎಂದು ತಿಳಿಸಿದೆ.</p>.<p>ಬ್ಯಾಂಕ್ನ ಅಧ್ಯಕ್ಷರಾಗಿದ್ದ ಭಾಸುರಾಂಗನ್ ಮತ್ತು ಇತರ ಅಧಿಕಾರಿಗಳು ಬ್ಯಾಂಕ್ನಲ್ಲಿ ಬಹುಕೋಟಿ ಮೊತ್ತದ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇ.ಡಿ ದಾಳಿ ನಡೆಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಕೇರಳದ ಕಂಡಲ ಸೇವಾ ಸಹಕಾರಿ ಬ್ಯಾಂಕ್ ಮೇಲೆ ಬುಧವಾರ ದಾಳಿ ನಡೆಸಿದಿದ್ದ ಜಾರಿ ನಿರ್ದೇಶನಾಲಯ ಗುರುವಾರವೂ ಪರಿಶೀಲನೆ ಮುಂದುವರಿಸಿತು. </p>.<p>ಕಾಟ್ಟಕ್ಕಡದಲ್ಲಿರುವ ಬ್ಯಾಂಕ್ ಮತ್ತು ಅದಕ್ಕೆ ಸಂಬಂಧಿಸಿದ ಇತರ ಸ್ಥಳಗಳು, ಬ್ಯಾಂಕ್ನ ಮಾಜಿ ಅಧ್ಯಕ್ಷ, ಸಿಪಿಐ ನಾಯಕ ಎನ್. ಭಾಸುರಾಂಗನ್ ಅವರ ನಿವಾಸಗಳಲ್ಲಿ ಶೋಧ ನಡೆಯುತ್ತಿದೆ. </p>.<p>ಇ.ಡಿ ದಾಳಿಯ ಭಾಗವಾಗಿ ಭಾಸುರಾಂಗನ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಈ ವೇಳೆ ಅವರು ಅಸ್ವಸ್ಥರಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ದಾಳಿ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಿಪಿಐನ ಜಿಲ್ಲಾ ಘಟಕ, ‘ಭಾಸುರಾಂಗನ್ ಅವರ ವಿರುದ್ಧ ಹಿಂದೆಯೇ ಕ್ರಮ ಕೈಗೊಳ್ಳಲಾಗಿದೆ. ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೂ ಉಚ್ಚಾಟಿಸಲಾಗಿದೆ‘ ಎಂದು ತಿಳಿಸಿದೆ.</p>.<p>ಬ್ಯಾಂಕ್ನ ಅಧ್ಯಕ್ಷರಾಗಿದ್ದ ಭಾಸುರಾಂಗನ್ ಮತ್ತು ಇತರ ಅಧಿಕಾರಿಗಳು ಬ್ಯಾಂಕ್ನಲ್ಲಿ ಬಹುಕೋಟಿ ಮೊತ್ತದ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇ.ಡಿ ದಾಳಿ ನಡೆಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>