<p><strong>ನವದೆಹಲಿ:</strong> ಅರಣ್ಯ ಇಲಾಖೆಯ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ನ ಇಬ್ಬರು ಮಾಜಿ ಅರಣ್ಯ ಸಚಿವರು ಮತ್ತು ಇತರರಿಗೆ ಸೇರಿದ ಸ್ಥಳಗಳಲ್ಲಿ ಶೋಧ ನಡೆಸಿರುವ ಜಾರಿ ನಿರ್ದೇಶನಾಲಯ (ಇ.ಡಿ), ದಾಖಲೆಗಳು, ಮೊಬೈಲ್ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳನ್ನು ವಶಪಡಿಸಿಕೊಂಡಿದೆ. </p><p>ಕಾಂಗ್ರೆಸ್ ನಾಯಕರಾದ ಸಾಧು ಸಿಂಗ್ ಧರ್ಮ್ಸೋತ್ ಮತ್ತು ಸಂಗತ್ ಸಿಂಗ್ ಗಿಲ್ಜಿಯಾ ವಿರುದ್ಧ ಇ.ಡಿ ಕಾರ್ಯಾಚರಣೆ ನಡೆಸಿದೆ. </p><p>ರಾಜ್ಯ ಅರಣ್ಯ ಇಲಾಖೆಯಲ್ಲಿ ಮರಗಳನ್ನು ಕಡಿಯಲು ಪರವಾನಿಗೆ ನೀಡುವುದು ಸೇರಿದಂತೆ ಇಲಾಖೆಯಲ್ಲಿ ವರ್ಗಾವಣೆ ಹಾಗೂ ಪೋಸ್ಟಿಂಗ್ನಲ್ಲಿ ಲಂಚ ಪಡೆದಿರುವುದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ ಎಂದು ಇ.ಡಿ ಹೇಳಿದೆ. </p><p>ನವೆಂಬರ್ 30ರಂದು ಪಂಜಾಬ್, ಹರಿಯಾಣ ಮತ್ತು ದೆಹಲಿಯಲ್ಲಿ ಧರ್ಮ್ಸೋತ್, ಗಿಲ್ಜಿಯಾ ಅವರ ಆಪ್ತರು, ಅರಣ್ಯ ಅಧಿಕಾರಿಗಳು ಮತ್ತು ಕೆಲವು ಖಾಸಗಿ ವ್ಯಕ್ತಿಗಳ ಮನೆ ಮೇಲೂ ಇ.ಡಿ ದಾಳಿ ನಡೆಸಿತ್ತು. </p><p>ಐದು ಬಾರಿ ಶಾಸಕ ಧರ್ಮ್ಸೋತ್ (63) ಅವರನ್ನು ಈ ವರ್ಷದ ಆರಂಭದಲ್ಲಿ ಅಕ್ರಮ ಅಸ್ತಿ ಪ್ರಕರಣದಲ್ಲಿ ವಿಜಿಲೆನ್ಸ್ ಬಂಧಿಸಿತ್ತು. ಗಿಲ್ಜಿಯಾ ಅವರು ಹೋಶಿಯಾಪುರದ ಶಾಸಕರಾಗಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅರಣ್ಯ ಇಲಾಖೆಯ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ನ ಇಬ್ಬರು ಮಾಜಿ ಅರಣ್ಯ ಸಚಿವರು ಮತ್ತು ಇತರರಿಗೆ ಸೇರಿದ ಸ್ಥಳಗಳಲ್ಲಿ ಶೋಧ ನಡೆಸಿರುವ ಜಾರಿ ನಿರ್ದೇಶನಾಲಯ (ಇ.ಡಿ), ದಾಖಲೆಗಳು, ಮೊಬೈಲ್ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳನ್ನು ವಶಪಡಿಸಿಕೊಂಡಿದೆ. </p><p>ಕಾಂಗ್ರೆಸ್ ನಾಯಕರಾದ ಸಾಧು ಸಿಂಗ್ ಧರ್ಮ್ಸೋತ್ ಮತ್ತು ಸಂಗತ್ ಸಿಂಗ್ ಗಿಲ್ಜಿಯಾ ವಿರುದ್ಧ ಇ.ಡಿ ಕಾರ್ಯಾಚರಣೆ ನಡೆಸಿದೆ. </p><p>ರಾಜ್ಯ ಅರಣ್ಯ ಇಲಾಖೆಯಲ್ಲಿ ಮರಗಳನ್ನು ಕಡಿಯಲು ಪರವಾನಿಗೆ ನೀಡುವುದು ಸೇರಿದಂತೆ ಇಲಾಖೆಯಲ್ಲಿ ವರ್ಗಾವಣೆ ಹಾಗೂ ಪೋಸ್ಟಿಂಗ್ನಲ್ಲಿ ಲಂಚ ಪಡೆದಿರುವುದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ ಎಂದು ಇ.ಡಿ ಹೇಳಿದೆ. </p><p>ನವೆಂಬರ್ 30ರಂದು ಪಂಜಾಬ್, ಹರಿಯಾಣ ಮತ್ತು ದೆಹಲಿಯಲ್ಲಿ ಧರ್ಮ್ಸೋತ್, ಗಿಲ್ಜಿಯಾ ಅವರ ಆಪ್ತರು, ಅರಣ್ಯ ಅಧಿಕಾರಿಗಳು ಮತ್ತು ಕೆಲವು ಖಾಸಗಿ ವ್ಯಕ್ತಿಗಳ ಮನೆ ಮೇಲೂ ಇ.ಡಿ ದಾಳಿ ನಡೆಸಿತ್ತು. </p><p>ಐದು ಬಾರಿ ಶಾಸಕ ಧರ್ಮ್ಸೋತ್ (63) ಅವರನ್ನು ಈ ವರ್ಷದ ಆರಂಭದಲ್ಲಿ ಅಕ್ರಮ ಅಸ್ತಿ ಪ್ರಕರಣದಲ್ಲಿ ವಿಜಿಲೆನ್ಸ್ ಬಂಧಿಸಿತ್ತು. ಗಿಲ್ಜಿಯಾ ಅವರು ಹೋಶಿಯಾಪುರದ ಶಾಸಕರಾಗಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>