<p><strong>ಗುವಹಾಟಿ:</strong> ಅಸ್ಸಾಂ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ತಿನಲ್ಲಿ (SCERT) ನಡೆದಿದೆ ಎನ್ನಲಾದ ₹105 ಕೋಟಿ ವಂಚನೆ ಪ್ರಕರಣದಲ್ಲಿ ಮಾಜಿ ಐಎಎಸ್ ಅಧಿಕಾರಿ ಸೆವಾಲಿ ದೇವಿ ಶರ್ಮಾ ಸಹಿತ ಇತರ ಅಧಿಕಾರಿಗಳ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.</p><p>ಹಣ ಅಕ್ರಮ ವರ್ಗಾವಣೆ ಕಾಯ್ದೆಯಡಿ SCERT ಮಾಜಿ ಕಾರ್ಯನಿರ್ವಾಹಕ ಅಧ್ಯಕ್ಷೆ ಹಾಗೂ ನಿರ್ದೇಶಕಿಯೂ ಆಗಿರುವ ಶರ್ಮಾ ಅವರಿಗೆ ಸೇರಿದ ಎಂಟು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶೋಧ ನಡೆಸಿದರು ಎಂದು ಮೂಲಗಳು ಹೇಳಿವೆ.</p><p>ಅಸ್ಸಾಂ ಮುಖ್ಯಮಂತ್ರಿ ಅವರ ವಿಶೇಷ ವಿಚಕ್ಷಣ ದಳದ ನಿರ್ದೇಶನದಂತೆ ರಾಜ್ಯ ಪೊಲೀಸರು 2023ರಲ್ಲಿ ಎಫ್ಐಆರ್ ದಾಖಲಿಸಿದ್ದರು.</p><p>1992ರ ತಂಡದ ರಾಜಸ್ಥಾನ ಕೇಡರ್ ಅಧಿಕಾರಿಯಾಗಿರುವ ಶರ್ಮಾ ಅವರು ಆದಾಯಕ್ಕಿಂತ ಹೆಚ್ಚಿನ ₹5.7 ಕೋಟಿ ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿದ್ದರು. ರಾಜಸ್ಥಾನ ಪೊಲೀಸರು ಶರ್ಮಾ ಅವರನ್ನು ಬಂಧಿಸಿದ್ದರು. ಇವರು 2017ರಿಂದ 2020ರವರೆಗೆ SCERT ನಿರ್ದೇಶಕಿಯಾಗಿದ್ದರು.</p><p>ಈ ಯೋಜನೆಯಡಿ 59 ಸಂಸ್ಥೆಗಳ 27 ಸಾವಿರ ಶಿಕ್ಷಕರಿಗೆ ತರಬೇತಿ ನೀಡುವ ಯೋಜನೆ ಇದಾಗಿದೆ. ಆದರೆ, ಅಕ್ರಮವಾಗಿ 347 ಕೇಂದ್ರಗಳನ್ನು ಶರ್ಮಾ ತೆರೆದಿದ್ದರು. ಇದರಲ್ಲಿ 1.06 ಲಕ್ಷ ಶಿಬಿರಾರ್ಥಿಗಳನ್ನು ದಾಖಲಿಸಿಕೊಂಡು ಅಕ್ರಮವಾಗಿ ಶುಲ್ಕ ಸಂಗ್ರಹಿಸಿದ್ದರು ಎಂಬ ಆರೋಪ ಇವರ ಮೇಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಹಾಟಿ:</strong> ಅಸ್ಸಾಂ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ತಿನಲ್ಲಿ (SCERT) ನಡೆದಿದೆ ಎನ್ನಲಾದ ₹105 ಕೋಟಿ ವಂಚನೆ ಪ್ರಕರಣದಲ್ಲಿ ಮಾಜಿ ಐಎಎಸ್ ಅಧಿಕಾರಿ ಸೆವಾಲಿ ದೇವಿ ಶರ್ಮಾ ಸಹಿತ ಇತರ ಅಧಿಕಾರಿಗಳ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.</p><p>ಹಣ ಅಕ್ರಮ ವರ್ಗಾವಣೆ ಕಾಯ್ದೆಯಡಿ SCERT ಮಾಜಿ ಕಾರ್ಯನಿರ್ವಾಹಕ ಅಧ್ಯಕ್ಷೆ ಹಾಗೂ ನಿರ್ದೇಶಕಿಯೂ ಆಗಿರುವ ಶರ್ಮಾ ಅವರಿಗೆ ಸೇರಿದ ಎಂಟು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶೋಧ ನಡೆಸಿದರು ಎಂದು ಮೂಲಗಳು ಹೇಳಿವೆ.</p><p>ಅಸ್ಸಾಂ ಮುಖ್ಯಮಂತ್ರಿ ಅವರ ವಿಶೇಷ ವಿಚಕ್ಷಣ ದಳದ ನಿರ್ದೇಶನದಂತೆ ರಾಜ್ಯ ಪೊಲೀಸರು 2023ರಲ್ಲಿ ಎಫ್ಐಆರ್ ದಾಖಲಿಸಿದ್ದರು.</p><p>1992ರ ತಂಡದ ರಾಜಸ್ಥಾನ ಕೇಡರ್ ಅಧಿಕಾರಿಯಾಗಿರುವ ಶರ್ಮಾ ಅವರು ಆದಾಯಕ್ಕಿಂತ ಹೆಚ್ಚಿನ ₹5.7 ಕೋಟಿ ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿದ್ದರು. ರಾಜಸ್ಥಾನ ಪೊಲೀಸರು ಶರ್ಮಾ ಅವರನ್ನು ಬಂಧಿಸಿದ್ದರು. ಇವರು 2017ರಿಂದ 2020ರವರೆಗೆ SCERT ನಿರ್ದೇಶಕಿಯಾಗಿದ್ದರು.</p><p>ಈ ಯೋಜನೆಯಡಿ 59 ಸಂಸ್ಥೆಗಳ 27 ಸಾವಿರ ಶಿಕ್ಷಕರಿಗೆ ತರಬೇತಿ ನೀಡುವ ಯೋಜನೆ ಇದಾಗಿದೆ. ಆದರೆ, ಅಕ್ರಮವಾಗಿ 347 ಕೇಂದ್ರಗಳನ್ನು ಶರ್ಮಾ ತೆರೆದಿದ್ದರು. ಇದರಲ್ಲಿ 1.06 ಲಕ್ಷ ಶಿಬಿರಾರ್ಥಿಗಳನ್ನು ದಾಖಲಿಸಿಕೊಂಡು ಅಕ್ರಮವಾಗಿ ಶುಲ್ಕ ಸಂಗ್ರಹಿಸಿದ್ದರು ಎಂಬ ಆರೋಪ ಇವರ ಮೇಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>