ನವದೆಹಲಿ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ(ಇ.ಡಿ), ಹರಿಯಾಣ ಮತ್ತು ರಾಜಸ್ಥಾನದ ಹಲವೆಡೆ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ನಿಬಂಧನೆಗಳಡಿಯಲ್ಲಿ ಎರಡು ರಾಜ್ಯಗಳ ಸುಮಾರು ಹನ್ನೆರಡು ಕಡೆಗಳಲ್ಲಿ ದಾಳಿ ನಡೆಸಿದೆ ಎಂದು ಹೇಳಿದ್ದಾರೆ.
ಸದ್ಯ ಜೈಲಿನಲ್ಲಿರುವ ಬಿಷ್ಣೋಯ್, ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿದ್ದಾರೆ. ಬಿಷ್ಣೋಯಿ ಗ್ಯಾಂಗ್ ವಿರುದ್ಧ ಎನ್ಐಎ ಈಗಾಗಲೇ ದೋಷಾರೋಪಪಟ್ಟಿ ಸಲ್ಲಿಸಿದೆ.