<p><strong>ಜೈಪುರ/ಮೊಹಾಲಿ:</strong> ಪಿಎಸಿಎಲ್ ನಕಲಿ ಕಂಪನಿಯ ₹48,000 ಕೋಟಿ ವಂಚನೆಗೆ ಸಂಬಂಧಿಸಿ ರಾಜಸ್ಥಾನ ಕಾಂಗ್ರೆಸ್ನ ಮಾಜಿ ನಾಯಕ ಪ್ರತಾಪ್ ಸಿಂಗ್ ಖಾಚರಿಯಾವಾಸ್ ಮತ್ತು ಪಂಜಾಬ್ ಎಎಪಿ ಶಾಸಕ ಕುಲ್ವಂತ್ ಸಿಂಗ್ಗೆ ಸೇರಿದ ಮನೆ, ಕಚೇರಿಗಳ ಮೇಲೆ ಮಂಗಳವಾರ ಜಾರಿ ನಿರ್ದೇಶನಾಲಯ(ಇ.ಡಿ.) ದಾಳಿ ಮಾಡಿದೆ.</p>.<p>ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿ ಇ.ಡಿ. ತನಿಖೆ ಮಾಡುತ್ತಿದೆ.</p>.<p>ಮಾಜಿ ಉಪರಾಷ್ಟ್ರಪತಿ ಭೈರೋನ್ ಸಿಂಗ್ ಶೆಖಾವತ್ ಅವರ ಸೋದರ ಸಂಬಂಧಿ ಖಾಚರಿಯಾವಾಸ್, ರಾಜಸ್ಥಾನದ ಅಶೋಕ್ ಗೆಹಲೋತ್ ಸಂಪುಟದಲ್ಲಿ ವಿವಿಧ ಇಲಾಖೆಗಳನ್ನು ನಿರ್ವಹಿಸಿದ್ದರು. ಅವರ ಮಾಲೀಕತ್ವದ ಜೈಪುರ ಮನೆ ಸೇರಿದಂತೆ 15 ಸ್ಥಳಗಳಲ್ಲಿ ದಾಳಿ ನಡೆದಿದೆ. </p>.<p>ಎಎಪಿ ಶಾಸಕ ಕುಲ್ವಂತ್ ಸಿಂಗ್ ಅವರು ಜನತಾ ಲ್ಯಾಂಡ್ ಪ್ರಮೋಟರ್ಸ್ ಲಿಮಿಟೆಡ್(ಜೆಎಲ್ಪಿಎಲ್) ಸಂಸ್ಥಾಪಕರಾಗಿದ್ದು, ₹1000 ಕೋಟಿ ಸಂಪತ್ತಿನೊಂದಿಗೆ ಪಂಜಾಬ್ನ ಅತಿ ಶ್ರೀಮಂತ ಶಾಸಕ ಎನಿಸಿದ್ದಾರೆ. ಅವರ ಮೊಹಾಲಿ ನಿವಾಸ ಸೇರಿ ಹಲವೆಡೆ ಇ.ಡಿ. ಅಧಿಕಾರಿಗಳು ಶೋಧ ನಡೆಸಿದರು. </p>.<p>ಇ.ಡಿ. ದಾಳಿಯು ರಾಜಕೀಯ ಪ್ರೇರಿತವಾಗಿದೆ. ಬಿಜೆಪಿ ಸರ್ಕಾರದ ವಿರುದ್ಧ ಮಾತನಾಡಿದ್ದಕ್ಕೆ ಈ ಕುತಂತ್ರ ಎಂದು ರಾಜಸ್ಥಾನ ಕಾಂಗ್ರೆಸ್ ಆರೋಪ ಮಾಡಿದೆ.</p>.<p>ಏನಿದು ಪ್ರಕರಣ: 2015ರಲ್ಲಿ ನಿರ್ಮಲ್ ಸಿಂಗ್ ಭಾಂಗೋ ಮತ್ತಿತರರ ಒಡೆತನದ ಪಿಎಸಿಎಲ್ ಇಂಡಿಯಾ ಲಿಮಿಟೆಡ್ ವಿರುದ್ಧ ಸಿಬಿಐ ಹಣ ಅಕ್ರಮ ವರ್ಗಾವಣೆ ಪ್ರಕರಣದಡಿ ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿತ್ತು. </p>.<p>ಪಿಎಸಿಎಲ್ ಮತ್ತು ಅದರ ನಿರ್ದೇಶಕರು ಹೂಡಿಕೆದಾರರಿಂದ ₹48,000 ಕೋಟಿ ಸಂಗ್ರಹಿಸಿ ಹಣವನ್ನು ಖಾಚರಿಯಾವಾಸ್ ಅವರಿಗೆ ಸಂಬಂಧಿಸಿದ ಸಂಸ್ಥೆಗಳಲ್ಲಿ ಅಕ್ರಮ ಹೂಡಿಕೆ ಮಾಡಿದ್ದಾರೆ ಎಂದು ಇ.ಡಿ. ಹೇಳಿದೆ.</p>.<p>ಕಳೆದ ವರ್ಷ ಆಗಸ್ಟ್ನಲ್ಲಿ ಭಾಂಗೋ ನಿಧನರಾಗಿದ್ದರು. ಅವರಿಗೆ ಸೇರಿದ 706 ಕೋಟಿ ಮೌಲ್ಯದ ಸಂಪತ್ತನ್ನು ಇ.ಡಿ.ಈಗಾಗಲೇ ಜಪ್ತಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ/ಮೊಹಾಲಿ:</strong> ಪಿಎಸಿಎಲ್ ನಕಲಿ ಕಂಪನಿಯ ₹48,000 ಕೋಟಿ ವಂಚನೆಗೆ ಸಂಬಂಧಿಸಿ ರಾಜಸ್ಥಾನ ಕಾಂಗ್ರೆಸ್ನ ಮಾಜಿ ನಾಯಕ ಪ್ರತಾಪ್ ಸಿಂಗ್ ಖಾಚರಿಯಾವಾಸ್ ಮತ್ತು ಪಂಜಾಬ್ ಎಎಪಿ ಶಾಸಕ ಕುಲ್ವಂತ್ ಸಿಂಗ್ಗೆ ಸೇರಿದ ಮನೆ, ಕಚೇರಿಗಳ ಮೇಲೆ ಮಂಗಳವಾರ ಜಾರಿ ನಿರ್ದೇಶನಾಲಯ(ಇ.ಡಿ.) ದಾಳಿ ಮಾಡಿದೆ.</p>.<p>ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿ ಇ.ಡಿ. ತನಿಖೆ ಮಾಡುತ್ತಿದೆ.</p>.<p>ಮಾಜಿ ಉಪರಾಷ್ಟ್ರಪತಿ ಭೈರೋನ್ ಸಿಂಗ್ ಶೆಖಾವತ್ ಅವರ ಸೋದರ ಸಂಬಂಧಿ ಖಾಚರಿಯಾವಾಸ್, ರಾಜಸ್ಥಾನದ ಅಶೋಕ್ ಗೆಹಲೋತ್ ಸಂಪುಟದಲ್ಲಿ ವಿವಿಧ ಇಲಾಖೆಗಳನ್ನು ನಿರ್ವಹಿಸಿದ್ದರು. ಅವರ ಮಾಲೀಕತ್ವದ ಜೈಪುರ ಮನೆ ಸೇರಿದಂತೆ 15 ಸ್ಥಳಗಳಲ್ಲಿ ದಾಳಿ ನಡೆದಿದೆ. </p>.<p>ಎಎಪಿ ಶಾಸಕ ಕುಲ್ವಂತ್ ಸಿಂಗ್ ಅವರು ಜನತಾ ಲ್ಯಾಂಡ್ ಪ್ರಮೋಟರ್ಸ್ ಲಿಮಿಟೆಡ್(ಜೆಎಲ್ಪಿಎಲ್) ಸಂಸ್ಥಾಪಕರಾಗಿದ್ದು, ₹1000 ಕೋಟಿ ಸಂಪತ್ತಿನೊಂದಿಗೆ ಪಂಜಾಬ್ನ ಅತಿ ಶ್ರೀಮಂತ ಶಾಸಕ ಎನಿಸಿದ್ದಾರೆ. ಅವರ ಮೊಹಾಲಿ ನಿವಾಸ ಸೇರಿ ಹಲವೆಡೆ ಇ.ಡಿ. ಅಧಿಕಾರಿಗಳು ಶೋಧ ನಡೆಸಿದರು. </p>.<p>ಇ.ಡಿ. ದಾಳಿಯು ರಾಜಕೀಯ ಪ್ರೇರಿತವಾಗಿದೆ. ಬಿಜೆಪಿ ಸರ್ಕಾರದ ವಿರುದ್ಧ ಮಾತನಾಡಿದ್ದಕ್ಕೆ ಈ ಕುತಂತ್ರ ಎಂದು ರಾಜಸ್ಥಾನ ಕಾಂಗ್ರೆಸ್ ಆರೋಪ ಮಾಡಿದೆ.</p>.<p>ಏನಿದು ಪ್ರಕರಣ: 2015ರಲ್ಲಿ ನಿರ್ಮಲ್ ಸಿಂಗ್ ಭಾಂಗೋ ಮತ್ತಿತರರ ಒಡೆತನದ ಪಿಎಸಿಎಲ್ ಇಂಡಿಯಾ ಲಿಮಿಟೆಡ್ ವಿರುದ್ಧ ಸಿಬಿಐ ಹಣ ಅಕ್ರಮ ವರ್ಗಾವಣೆ ಪ್ರಕರಣದಡಿ ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿತ್ತು. </p>.<p>ಪಿಎಸಿಎಲ್ ಮತ್ತು ಅದರ ನಿರ್ದೇಶಕರು ಹೂಡಿಕೆದಾರರಿಂದ ₹48,000 ಕೋಟಿ ಸಂಗ್ರಹಿಸಿ ಹಣವನ್ನು ಖಾಚರಿಯಾವಾಸ್ ಅವರಿಗೆ ಸಂಬಂಧಿಸಿದ ಸಂಸ್ಥೆಗಳಲ್ಲಿ ಅಕ್ರಮ ಹೂಡಿಕೆ ಮಾಡಿದ್ದಾರೆ ಎಂದು ಇ.ಡಿ. ಹೇಳಿದೆ.</p>.<p>ಕಳೆದ ವರ್ಷ ಆಗಸ್ಟ್ನಲ್ಲಿ ಭಾಂಗೋ ನಿಧನರಾಗಿದ್ದರು. ಅವರಿಗೆ ಸೇರಿದ 706 ಕೋಟಿ ಮೌಲ್ಯದ ಸಂಪತ್ತನ್ನು ಇ.ಡಿ.ಈಗಾಗಲೇ ಜಪ್ತಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>