<p><strong>ಕೋಲ್ಕತ್ತ</strong>: ಸಂಘಟಿತ ಮಾನವ ಕಳ್ಳಸಾಗಣೆ ಮತ್ತು ವೇಶ್ಯಾವಾಟಿಕೆಗೆ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ವಿವಿಧೆಡೆ ಹಲವು ಬಾರ್ ಮತ್ತು ರೆಸ್ಟೋರೆಂಟ್ಗಳ ಮೇಲೆ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.</p><p>ಬಿಧಾನ್ನಗರ(ಉತ್ತರ 24 ಪರಗಣ ಜಿಲ್ಲೆ), ಕೋಲ್ಕತ್ತ ಮತ್ತು ಸಿಲಿಗುರಿಯಲ್ಲಿ ಕನಿಷ್ಠ ಎಂಟು ಸ್ಥಳಗಳ ಮೇಲೆ ತನಿಖಾ ಸಂಸ್ಥೆಯು ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ) ನಿಬಂಧನೆಗಳ ಅಡಿಯಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಜಗ್ಜಿತ್ ಸಿಂಗ್, ಅಜ್ಮಲ್ ಸಿದ್ದಿಕಿ, ಬಿಷ್ಣು ಮುಂದ್ರಾ ಮತ್ತು ಇತರ ಆರೋಪಿಗಳ ವಿರುದ್ಧ ರಾಜ್ಯ ಪೊಲೀಸರು ದಾಖಲಿಸಿದ್ದ ಎಫ್ಐಆರ್ಗಳು ಮತ್ತು ಚಾರ್ಜ್ಶೀಟ್ಗಳನ್ನು ಆಧರಿಸಿ ಇ.ಡಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದೆ.</p><p>ಆರೋಪಿಗಳು ದುರ್ಬಲ ಮಹಿಳೆಯರಿಗೆ ಉದ್ಯೋಗ ಕೊಡಿಸುವ ಸುಳ್ಳು ಭರವಸೆಗಳನ್ನು ನೀಡಿ ಕರೆದೊಯ್ದು ಶೋಷಿಸಿದ್ದಾರೆ. ವೇಶ್ಯಾವಾಟಿಕೆಗೆ ಅವರನ್ನು ದೂಡಿ ಹಣ ಸಂಪಾದಿಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.</p><p>ಈ ದಂಧೆ ಮೂಲಕ ಕೋಟ್ಯಂತರ ರೂಪಾಯಿ ಹಣವನ್ನು ನಗದು ರೂಪದಲ್ಲಿ ಸಂಪಾದಿಸಿದ ಅವರು, ಈ ಅವರ ನಿಯಂತ್ರಣದಲ್ಲಿರುವ ಬಹು ಕಂಪನಿಗಳ ಮೂಲಕ ಅಕ್ರಮ ವರ್ಗಾವಣೆ ಮಾಡಿದ್ದಾರೆ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಸಂಘಟಿತ ಮಾನವ ಕಳ್ಳಸಾಗಣೆ ಮತ್ತು ವೇಶ್ಯಾವಾಟಿಕೆಗೆ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ವಿವಿಧೆಡೆ ಹಲವು ಬಾರ್ ಮತ್ತು ರೆಸ್ಟೋರೆಂಟ್ಗಳ ಮೇಲೆ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.</p><p>ಬಿಧಾನ್ನಗರ(ಉತ್ತರ 24 ಪರಗಣ ಜಿಲ್ಲೆ), ಕೋಲ್ಕತ್ತ ಮತ್ತು ಸಿಲಿಗುರಿಯಲ್ಲಿ ಕನಿಷ್ಠ ಎಂಟು ಸ್ಥಳಗಳ ಮೇಲೆ ತನಿಖಾ ಸಂಸ್ಥೆಯು ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ) ನಿಬಂಧನೆಗಳ ಅಡಿಯಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಜಗ್ಜಿತ್ ಸಿಂಗ್, ಅಜ್ಮಲ್ ಸಿದ್ದಿಕಿ, ಬಿಷ್ಣು ಮುಂದ್ರಾ ಮತ್ತು ಇತರ ಆರೋಪಿಗಳ ವಿರುದ್ಧ ರಾಜ್ಯ ಪೊಲೀಸರು ದಾಖಲಿಸಿದ್ದ ಎಫ್ಐಆರ್ಗಳು ಮತ್ತು ಚಾರ್ಜ್ಶೀಟ್ಗಳನ್ನು ಆಧರಿಸಿ ಇ.ಡಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದೆ.</p><p>ಆರೋಪಿಗಳು ದುರ್ಬಲ ಮಹಿಳೆಯರಿಗೆ ಉದ್ಯೋಗ ಕೊಡಿಸುವ ಸುಳ್ಳು ಭರವಸೆಗಳನ್ನು ನೀಡಿ ಕರೆದೊಯ್ದು ಶೋಷಿಸಿದ್ದಾರೆ. ವೇಶ್ಯಾವಾಟಿಕೆಗೆ ಅವರನ್ನು ದೂಡಿ ಹಣ ಸಂಪಾದಿಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.</p><p>ಈ ದಂಧೆ ಮೂಲಕ ಕೋಟ್ಯಂತರ ರೂಪಾಯಿ ಹಣವನ್ನು ನಗದು ರೂಪದಲ್ಲಿ ಸಂಪಾದಿಸಿದ ಅವರು, ಈ ಅವರ ನಿಯಂತ್ರಣದಲ್ಲಿರುವ ಬಹು ಕಂಪನಿಗಳ ಮೂಲಕ ಅಕ್ರಮ ವರ್ಗಾವಣೆ ಮಾಡಿದ್ದಾರೆ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>