<p><strong>ಅಮರಾವತಿ/ನವದೆಹಲಿ</strong>: ತಿರುಮಲ ತಿರುಪತಿ ದೇಗುಲದ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಕಲಬೆರಕೆ ತುಪ್ಪ ಬಳಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು(ಇ.ಡಿ) ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ದಾಖಲಿಸಿಕೊಂಡಿದೆ.</p>.<p>ಆರೋಪಿಗಳು ಹಣ ಅಕ್ರಮ ವರ್ಗಾವಣೆ ನಡೆಸಿದ್ದಾರೆಯೇ ಮತ್ತು ಕಲಬೆರಕೆ ತುಪ್ಪದ ಮೂಲಕ ಅಕ್ರಮವಾಗಿ ಹಣ ಗಳಿಸಿದ್ದಾರೆಯೇ ಎಂಬ ಬಗ್ಗೆ ಇ.ಡಿಯು ಹಣ ಅಕ್ರಮ ವರ್ಗಾವಣೆ ನಿಯಂತ್ರಣ ಕಾಯ್ದೆ(ಪಿಎಂಎಲ್ಎ) ಅಡಿ ತನಿಖೆ ನಡೆಸುತ್ತಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.</p>.<p>ಆರೋಪಿಗಳು ಹವಾಲ ವ್ಯವಹಾರದಲ್ಲಿ ತೊಡಗಿದ್ದಾರೆ ಮತ್ತು ಹಣವನ್ನು ಬೇರೆ ಮಾರ್ಗಗಳ ಮೂಲಕ ಬಳಸಿಕೊಳ್ಳುತ್ತಿದ್ದಾರೆ ಎಂಬ ಶಂಕೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ನೇತೃತ್ವದ ವಿಶೇಷ ತನಿಖಾ ತಂಡ(ಎಸ್ಐಟಿ) ದಾಖಲಿಸಿಕೊಂಡಿರುವ ಎಫ್ಐಆರ್, ಸಂಗ್ರಹಿಸಿರುವ ದಾಖಲೆ ಮತ್ತು ಸಲ್ಲಿಸಿರುವ ದೋಷಾರೋಪ ಪಟ್ಟಿಯನ್ನು ಇ.ಡಿ ಪರಿಶೀಲಿಸುತ್ತಿದೆ.</p>.<p>ತಿರುಪತಿ ದೇಗುಲದ ಒಂಬತ್ತು ಅಧಿಕಾರಿಗಳು ಸೇರಿದಂತೆ 36 ಮಂದಿಯನ್ನು ಪ್ರಕರಣದ ಆರೋಪಿಗಳು ಎಂದು ಎಸ್ಐಟಿ ಪರಿಗಣಿಸಿದೆ. ದೇಗುಲಕ್ಕೆ ತುಪ್ಪದ ರೂಪದಲ್ಲಿ ನೀಡಲಾದ ವಸ್ತುವು ರಾಸಾಯನಿಕ ವಸ್ತುಗಳಿಂದ ತಯಾರಾಗಿತ್ತು ಎಂದು ಎಸ್ಐಟಿ ದೃಢಪಡಿಸಿತ್ತು.</p>.<p>ಮಾಜಿ ಮುಖ್ಯಮಂತ್ರಿ ವೈ.ಎಸ್ ಜಗನ್ಮೋಹನ್ ರೆಡ್ಡಿ ಆಡಳಿತ ಅವಧಿಯಲ್ಲಿ ತಿರುಪತಿ ದೇಗುಲದ ಲಡ್ಡು ಪ್ರಸಾದ ತಯಾರಿಕೆಗೆ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು 2024ರ ಸೆಪ್ಟೆಂಬರ್ನಲ್ಲಿ ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ/ನವದೆಹಲಿ</strong>: ತಿರುಮಲ ತಿರುಪತಿ ದೇಗುಲದ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಕಲಬೆರಕೆ ತುಪ್ಪ ಬಳಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು(ಇ.ಡಿ) ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ದಾಖಲಿಸಿಕೊಂಡಿದೆ.</p>.<p>ಆರೋಪಿಗಳು ಹಣ ಅಕ್ರಮ ವರ್ಗಾವಣೆ ನಡೆಸಿದ್ದಾರೆಯೇ ಮತ್ತು ಕಲಬೆರಕೆ ತುಪ್ಪದ ಮೂಲಕ ಅಕ್ರಮವಾಗಿ ಹಣ ಗಳಿಸಿದ್ದಾರೆಯೇ ಎಂಬ ಬಗ್ಗೆ ಇ.ಡಿಯು ಹಣ ಅಕ್ರಮ ವರ್ಗಾವಣೆ ನಿಯಂತ್ರಣ ಕಾಯ್ದೆ(ಪಿಎಂಎಲ್ಎ) ಅಡಿ ತನಿಖೆ ನಡೆಸುತ್ತಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.</p>.<p>ಆರೋಪಿಗಳು ಹವಾಲ ವ್ಯವಹಾರದಲ್ಲಿ ತೊಡಗಿದ್ದಾರೆ ಮತ್ತು ಹಣವನ್ನು ಬೇರೆ ಮಾರ್ಗಗಳ ಮೂಲಕ ಬಳಸಿಕೊಳ್ಳುತ್ತಿದ್ದಾರೆ ಎಂಬ ಶಂಕೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ನೇತೃತ್ವದ ವಿಶೇಷ ತನಿಖಾ ತಂಡ(ಎಸ್ಐಟಿ) ದಾಖಲಿಸಿಕೊಂಡಿರುವ ಎಫ್ಐಆರ್, ಸಂಗ್ರಹಿಸಿರುವ ದಾಖಲೆ ಮತ್ತು ಸಲ್ಲಿಸಿರುವ ದೋಷಾರೋಪ ಪಟ್ಟಿಯನ್ನು ಇ.ಡಿ ಪರಿಶೀಲಿಸುತ್ತಿದೆ.</p>.<p>ತಿರುಪತಿ ದೇಗುಲದ ಒಂಬತ್ತು ಅಧಿಕಾರಿಗಳು ಸೇರಿದಂತೆ 36 ಮಂದಿಯನ್ನು ಪ್ರಕರಣದ ಆರೋಪಿಗಳು ಎಂದು ಎಸ್ಐಟಿ ಪರಿಗಣಿಸಿದೆ. ದೇಗುಲಕ್ಕೆ ತುಪ್ಪದ ರೂಪದಲ್ಲಿ ನೀಡಲಾದ ವಸ್ತುವು ರಾಸಾಯನಿಕ ವಸ್ತುಗಳಿಂದ ತಯಾರಾಗಿತ್ತು ಎಂದು ಎಸ್ಐಟಿ ದೃಢಪಡಿಸಿತ್ತು.</p>.<p>ಮಾಜಿ ಮುಖ್ಯಮಂತ್ರಿ ವೈ.ಎಸ್ ಜಗನ್ಮೋಹನ್ ರೆಡ್ಡಿ ಆಡಳಿತ ಅವಧಿಯಲ್ಲಿ ತಿರುಪತಿ ದೇಗುಲದ ಲಡ್ಡು ಪ್ರಸಾದ ತಯಾರಿಕೆಗೆ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು 2024ರ ಸೆಪ್ಟೆಂಬರ್ನಲ್ಲಿ ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>