<p><strong>ನವದೆಹಲಿ:</strong> ಯಾವುದೇ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿದ ಸಂದರ್ಭದಲ್ಲಿ, ಬಂಧನಕ್ಕೆ ಕಾರಣವಾದ ಅಂಶಗಳನ್ನು ಜಾರಿ ನಿರ್ದೇಶನಾಲಯ (ಇ.ಡಿ) ಆರೋಪಿಗೆ ಲಿಖಿತವಾಗಿ ತಿಳಿಸಬೇಕು. ಈ ವಿಷಯದಲ್ಲಿ ಯಾವುದೇ ವಿನಾಯಿತಿ ಇಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<p>ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ, ಜಾರಿ ನಿರ್ದೇಶನಾಲಯ (ಇ.ಡಿ), ಗುರುಗ್ರಾಮ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆ ‘ಎಂ3ಎಂ’ ಸಮೂಹದ ನಿರ್ದೇಶಕರಾದ ಬಸಂತ್ ಬನ್ಸಲ್ ಹಾಗೂ ಪಂಕಜ್ ಬನ್ಸಲ್ ಅವರನ್ನು ಬಂಧಿಸಿತ್ತು. </p>.<p>ಈ ಇಬ್ಬರನ್ನು ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿದ್ದ ಸುಪ್ರೀಂ ಕೋರ್ಟ್, ಇವರ ಬಂಧನಕ್ಕೆ ಸಂಬಂಧಿಸಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನೀಡಿದ್ದ ಆದೇಶವನ್ನು ರದ್ದುಗೊಳಿಸಿ ಕಳೆದ ಅಕ್ಟೋಬರ್ 3ರಂದು ಆದೇಶಿಸಿತ್ತು.</p>.<p>ಅಕ್ಟೋಬರ್ 3ರ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಈ ಮಾತನ್ನು ಹೇಳಿರುವ ಸುಪ್ರೀಂ ಕೋರ್ಟ್, ತನ್ನ ತೀರ್ಪಿನಲ್ಲಿ ಯಾವುದೇ ದೋಷ ಇಲ್ಲ. ಹೀಗಾಗಿ, ಮರುಪರಿಶೀಲನೆ ಅಗತ್ಯ ಇಲ್ಲ ಎಂದು ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ಸಂಜಯಕುಮಾರ್ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿದ್ದು, ಮಾರ್ಚ್ 20ರಂದು ಆದೇಶ ಪ್ರಕಟಿಸಿದೆ. </p>.<p>ಅಲ್ಲದೇ, ತೆರೆದ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಸುವಂತೆ ಕೋರಿ ಕೇಂದ್ರ ಸಲ್ಲಿಸಿದ್ದ ಮತ್ತೊಂದು ಅರ್ಜಿಯನ್ನು ಸಹ ನ್ಯಾಯಪೀಠ ವಜಾಗೊಳಿಸಿದೆ.</p>.<p>ಅರ್ಜಿ ವಿಚಾರಣೆ ವೇಳೆ ಜಾರಿ ನಿರ್ದೇಶನಾಲಯ ಕಾರ್ಯವೈಖರಿ ಕುರಿತು ಕಟು ಟೀಕೆ ಮಾಡಿದ ನ್ಯಾಯಪೀಠ, ‘ಜಾರಿ ನಿರ್ದೇಶನಾಲಯ ಪ್ರತೀಕಾರ ತೀರಿಸಿಕೊಳ್ಳುವ ರೀತಿಯಲ್ಲಿ ವರ್ತಿಸಬಾರದು. ಅತ್ಯಂತ ನ್ಯಾಯಸಮ್ಮತ ಹಾಗೂ ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸಬೇಕು’ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಯಾವುದೇ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿದ ಸಂದರ್ಭದಲ್ಲಿ, ಬಂಧನಕ್ಕೆ ಕಾರಣವಾದ ಅಂಶಗಳನ್ನು ಜಾರಿ ನಿರ್ದೇಶನಾಲಯ (ಇ.ಡಿ) ಆರೋಪಿಗೆ ಲಿಖಿತವಾಗಿ ತಿಳಿಸಬೇಕು. ಈ ವಿಷಯದಲ್ಲಿ ಯಾವುದೇ ವಿನಾಯಿತಿ ಇಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<p>ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ, ಜಾರಿ ನಿರ್ದೇಶನಾಲಯ (ಇ.ಡಿ), ಗುರುಗ್ರಾಮ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆ ‘ಎಂ3ಎಂ’ ಸಮೂಹದ ನಿರ್ದೇಶಕರಾದ ಬಸಂತ್ ಬನ್ಸಲ್ ಹಾಗೂ ಪಂಕಜ್ ಬನ್ಸಲ್ ಅವರನ್ನು ಬಂಧಿಸಿತ್ತು. </p>.<p>ಈ ಇಬ್ಬರನ್ನು ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿದ್ದ ಸುಪ್ರೀಂ ಕೋರ್ಟ್, ಇವರ ಬಂಧನಕ್ಕೆ ಸಂಬಂಧಿಸಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನೀಡಿದ್ದ ಆದೇಶವನ್ನು ರದ್ದುಗೊಳಿಸಿ ಕಳೆದ ಅಕ್ಟೋಬರ್ 3ರಂದು ಆದೇಶಿಸಿತ್ತು.</p>.<p>ಅಕ್ಟೋಬರ್ 3ರ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಈ ಮಾತನ್ನು ಹೇಳಿರುವ ಸುಪ್ರೀಂ ಕೋರ್ಟ್, ತನ್ನ ತೀರ್ಪಿನಲ್ಲಿ ಯಾವುದೇ ದೋಷ ಇಲ್ಲ. ಹೀಗಾಗಿ, ಮರುಪರಿಶೀಲನೆ ಅಗತ್ಯ ಇಲ್ಲ ಎಂದು ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ಸಂಜಯಕುಮಾರ್ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿದ್ದು, ಮಾರ್ಚ್ 20ರಂದು ಆದೇಶ ಪ್ರಕಟಿಸಿದೆ. </p>.<p>ಅಲ್ಲದೇ, ತೆರೆದ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಸುವಂತೆ ಕೋರಿ ಕೇಂದ್ರ ಸಲ್ಲಿಸಿದ್ದ ಮತ್ತೊಂದು ಅರ್ಜಿಯನ್ನು ಸಹ ನ್ಯಾಯಪೀಠ ವಜಾಗೊಳಿಸಿದೆ.</p>.<p>ಅರ್ಜಿ ವಿಚಾರಣೆ ವೇಳೆ ಜಾರಿ ನಿರ್ದೇಶನಾಲಯ ಕಾರ್ಯವೈಖರಿ ಕುರಿತು ಕಟು ಟೀಕೆ ಮಾಡಿದ ನ್ಯಾಯಪೀಠ, ‘ಜಾರಿ ನಿರ್ದೇಶನಾಲಯ ಪ್ರತೀಕಾರ ತೀರಿಸಿಕೊಳ್ಳುವ ರೀತಿಯಲ್ಲಿ ವರ್ತಿಸಬಾರದು. ಅತ್ಯಂತ ನ್ಯಾಯಸಮ್ಮತ ಹಾಗೂ ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸಬೇಕು’ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>