<p><strong>ನವದೆಹಲಿ:</strong> ಸುಪ್ರೀಂ ಕೋರ್ಟ್ನ ಅನುಮತಿಯಂತೆ ಭೂಷಣ್ ಸ್ಟೀಲ್ ಮತ್ತು ಪವರ್ ಕಂಪನಿಗೆ ಸೇರಿದ ₹4,025 ಕೋಟಿ ಮೌಲ್ಯದ ಆಸ್ತಿಯನ್ನು ಜೆಎಸ್ಡಬ್ಲೂ ಸ್ಟೀಲ್ಗೆ ಜಾರಿ ನಿರ್ದೇಶನಾಲಯ ಹಸ್ತಾಂತರಿಸಿದೆ.</p><p>ದಿವಾಳಿಯಾದ ಕಂಪನಿಯೊಂದರ ಆಸ್ತಿಯನ್ನು ಖರೀದಿಸಲು ಜೆಎಸ್ಡಬ್ಲೂ ಆಸಕ್ತಿ ಹೊಂದಿತ್ತು. ಕಾರ್ಪೊರೇಟ್ ದಿವಾಳಿತನ ಪರಿಹಾರ ಪ್ರಕ್ರಿಯೆಯ ನಿಯಮದಡಿ ಭೂಷಣ್ ಸ್ಟೀಲ್ನ ಆಸ್ತಿ ಖರೀದಿಗೆ ಜೆಎಸ್ಡಬ್ಲೂ ಅರ್ಜಿ ಸಲ್ಲಿಸಿತ್ತು. ಆದರೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಈ ಆಸ್ತಿಯನ್ನು ಮುಟುಗೋಲು ಹಾಕಿಕೊಂಡಿತ್ತು. ಇದರಲ್ಲಿ ಬ್ಯಾಂಕ್ ಸಾಲ ವಂಚನೆ, ಹಣವನ್ನು ಬೇರೆಡೆ ವರ್ಗಾಯಿಸಿದ ಆರೋಪವನ್ನು ಕಂಪನಿ ಎದುರಿಸುತ್ತಿತ್ತು.</p><p>ಭೂಷಣ್ ಸ್ಟೀಲ್ಗೆ ಸಂಬಂಧಿಸಿದ ಆಸ್ತಿಯನ್ನು ಪಡೆಯಲು ಅವಕಾಶ ನೀಡಬೇಕು ಎಂಬ ಜೆಎಸ್ಡಬ್ಲೂ ಕಂಪನಿಯ ಮನವಿಯನ್ನು ಮಾನ್ಯ ಮಾಡಿದ ಸುಪ್ರೀಂ ಕೋರ್ಟ್, ಅದನ್ನು ಹಸ್ತಾಂತರಿಸುವಂತೆ ಜಾರಿ ನಿರ್ದೇಶನಾಲಯಕ್ಕೆ ನಿರ್ದೇಶಿಸಿತ್ತು.</p><p>ಈ ಹಿಂದೆ ವಜ್ರ ವ್ಯಾಪಾರಿ ನೀರವ್ ಮೋದಿ ಹಾಗೂ ಮೇಹುಲ್ ಚೋಕ್ಸಿ ಬ್ಯಾಂಕ್ ವಂಚನೆ ಪ್ರಕರಣ ಹಾಗೂ ಶಾರದಾ ಪೋಂಜಿ ವಂಚನೆ ಪ್ರಕರಣದಲ್ಲೂ ಅವರ ಆಸ್ತಿ ಖರೀದಿದಾರರಿಗೆ ಅದನ್ನು ಹಸ್ತಾಂತರಿಸುವ ಪ್ರಕ್ರಿಯೆಯನ್ನು ಜಾರಿ ನಿರ್ದೇಶನಾಲಯ ತಡವಾಗಿ ಆರಂಭಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸುಪ್ರೀಂ ಕೋರ್ಟ್ನ ಅನುಮತಿಯಂತೆ ಭೂಷಣ್ ಸ್ಟೀಲ್ ಮತ್ತು ಪವರ್ ಕಂಪನಿಗೆ ಸೇರಿದ ₹4,025 ಕೋಟಿ ಮೌಲ್ಯದ ಆಸ್ತಿಯನ್ನು ಜೆಎಸ್ಡಬ್ಲೂ ಸ್ಟೀಲ್ಗೆ ಜಾರಿ ನಿರ್ದೇಶನಾಲಯ ಹಸ್ತಾಂತರಿಸಿದೆ.</p><p>ದಿವಾಳಿಯಾದ ಕಂಪನಿಯೊಂದರ ಆಸ್ತಿಯನ್ನು ಖರೀದಿಸಲು ಜೆಎಸ್ಡಬ್ಲೂ ಆಸಕ್ತಿ ಹೊಂದಿತ್ತು. ಕಾರ್ಪೊರೇಟ್ ದಿವಾಳಿತನ ಪರಿಹಾರ ಪ್ರಕ್ರಿಯೆಯ ನಿಯಮದಡಿ ಭೂಷಣ್ ಸ್ಟೀಲ್ನ ಆಸ್ತಿ ಖರೀದಿಗೆ ಜೆಎಸ್ಡಬ್ಲೂ ಅರ್ಜಿ ಸಲ್ಲಿಸಿತ್ತು. ಆದರೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಈ ಆಸ್ತಿಯನ್ನು ಮುಟುಗೋಲು ಹಾಕಿಕೊಂಡಿತ್ತು. ಇದರಲ್ಲಿ ಬ್ಯಾಂಕ್ ಸಾಲ ವಂಚನೆ, ಹಣವನ್ನು ಬೇರೆಡೆ ವರ್ಗಾಯಿಸಿದ ಆರೋಪವನ್ನು ಕಂಪನಿ ಎದುರಿಸುತ್ತಿತ್ತು.</p><p>ಭೂಷಣ್ ಸ್ಟೀಲ್ಗೆ ಸಂಬಂಧಿಸಿದ ಆಸ್ತಿಯನ್ನು ಪಡೆಯಲು ಅವಕಾಶ ನೀಡಬೇಕು ಎಂಬ ಜೆಎಸ್ಡಬ್ಲೂ ಕಂಪನಿಯ ಮನವಿಯನ್ನು ಮಾನ್ಯ ಮಾಡಿದ ಸುಪ್ರೀಂ ಕೋರ್ಟ್, ಅದನ್ನು ಹಸ್ತಾಂತರಿಸುವಂತೆ ಜಾರಿ ನಿರ್ದೇಶನಾಲಯಕ್ಕೆ ನಿರ್ದೇಶಿಸಿತ್ತು.</p><p>ಈ ಹಿಂದೆ ವಜ್ರ ವ್ಯಾಪಾರಿ ನೀರವ್ ಮೋದಿ ಹಾಗೂ ಮೇಹುಲ್ ಚೋಕ್ಸಿ ಬ್ಯಾಂಕ್ ವಂಚನೆ ಪ್ರಕರಣ ಹಾಗೂ ಶಾರದಾ ಪೋಂಜಿ ವಂಚನೆ ಪ್ರಕರಣದಲ್ಲೂ ಅವರ ಆಸ್ತಿ ಖರೀದಿದಾರರಿಗೆ ಅದನ್ನು ಹಸ್ತಾಂತರಿಸುವ ಪ್ರಕ್ರಿಯೆಯನ್ನು ಜಾರಿ ನಿರ್ದೇಶನಾಲಯ ತಡವಾಗಿ ಆರಂಭಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>