<p><strong>ನವದೆಹಲಿ</strong>: ಚಂಡೀಗಢದ ಪರ್ಲ್ಸ್ ಆಗ್ರೋಟೆಕ್ ಕಾರ್ಪೊರೇಷನ್ ಲಿಮಿಟೆಡ್ (ಪಿಎಸಿಎಲ್) ವಿರುದ್ಧದ ಹಣ ಅಕ್ರಮ ವರ್ಗಾವಣೆ ತನಿಖೆ ಭಾಗವಾಗಿ ಪಂಜಾಬ್ನ ಜಲಂಧರ್ನಲ್ಲಿ ₹3,436.56 ಕೋಟಿ ಮೌಲ್ಯದ 169 ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.</p>.<p>ಪಿಎಸಿಎಲ್ ಸಾಮೂಹಿಕ ಹೂಡಿಕೆ ಯೋಜನೆಗಳ ಮೂಲಕ ವಂಚನೆ ಎಸಗಿದೆ. ಕಂಪನಿ ಮತ್ತು ಅದರ ಸಹವರ್ತಿಗಳು ದೇಶದಾದ್ಯಂತ ಹೂಡಿಕೆದಾರರಿಂದ ಸುಮಾರು ₹48 ಸಾವಿರ ಕೋಟಿ ಸಂಗ್ರಹಿಸಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಣದ ಒಂದು ಭಾಗವನ್ನು 169 ಸ್ವತ್ತುಗಳ ಖರೀದಿಗೆ ಬಳಸಲಾಗಿದೆ ಎಂದು ಇ.ಡಿ ಗುರುವಾರ ತಿಳಿಸಿದೆ.</p>.<p>ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಮುಟ್ಟುಗೋಲು ಹಾಕಿಕೊಳ್ಳಲಾದ ಒಟ್ಟು ಚರ ಮತ್ತು ಸ್ಥಿರಾಸ್ತಿಗಳ ಮೌಲ್ಯ ಸುಮಾರು ₹5,602 ಕೋಟಿಗಳಾಗಿದೆ. ಇದರಲ್ಲಿ ದೇಶ ಮತ್ತು ವಿದೇಶದಲ್ಲಿರುವ ಆಸ್ತಿಗಳು ಸೇರಿವೆ. ಇದುವರೆಗೆ ಮೂರು ಆರೋಪಪಟ್ಟಿಗಳನ್ನು ಸಲ್ಲಿಸಲಾಗಿದೆ ಎಂದು ಹೇಳಿದೆ.</p>.<p>ಪಿಎಸಿಎಲ್ನ ಪ್ರವರ್ತಕ ದಿವಂಗತ ನಿರ್ಮಲ್ ಸಿಂಗ್ ಭಂಗೂ ಮತ್ತು ಇತರರ ವಿರುದ್ಧ ಸಿಬಿಐ ದಾಖಲಿಸಿದ್ದ ಪ್ರಕರಣದ ಆಧಾರದ ಮೇಲೆ ಇ.ಡಿ ತನಿಖೆ ನಡೆಸುತ್ತಿದೆ. ಭಂಗೂ ಕಳೆದ ವರ್ಷ ಆಗಸ್ಟ್ನಲ್ಲಿ ನಿಧನರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಚಂಡೀಗಢದ ಪರ್ಲ್ಸ್ ಆಗ್ರೋಟೆಕ್ ಕಾರ್ಪೊರೇಷನ್ ಲಿಮಿಟೆಡ್ (ಪಿಎಸಿಎಲ್) ವಿರುದ್ಧದ ಹಣ ಅಕ್ರಮ ವರ್ಗಾವಣೆ ತನಿಖೆ ಭಾಗವಾಗಿ ಪಂಜಾಬ್ನ ಜಲಂಧರ್ನಲ್ಲಿ ₹3,436.56 ಕೋಟಿ ಮೌಲ್ಯದ 169 ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.</p>.<p>ಪಿಎಸಿಎಲ್ ಸಾಮೂಹಿಕ ಹೂಡಿಕೆ ಯೋಜನೆಗಳ ಮೂಲಕ ವಂಚನೆ ಎಸಗಿದೆ. ಕಂಪನಿ ಮತ್ತು ಅದರ ಸಹವರ್ತಿಗಳು ದೇಶದಾದ್ಯಂತ ಹೂಡಿಕೆದಾರರಿಂದ ಸುಮಾರು ₹48 ಸಾವಿರ ಕೋಟಿ ಸಂಗ್ರಹಿಸಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಣದ ಒಂದು ಭಾಗವನ್ನು 169 ಸ್ವತ್ತುಗಳ ಖರೀದಿಗೆ ಬಳಸಲಾಗಿದೆ ಎಂದು ಇ.ಡಿ ಗುರುವಾರ ತಿಳಿಸಿದೆ.</p>.<p>ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಮುಟ್ಟುಗೋಲು ಹಾಕಿಕೊಳ್ಳಲಾದ ಒಟ್ಟು ಚರ ಮತ್ತು ಸ್ಥಿರಾಸ್ತಿಗಳ ಮೌಲ್ಯ ಸುಮಾರು ₹5,602 ಕೋಟಿಗಳಾಗಿದೆ. ಇದರಲ್ಲಿ ದೇಶ ಮತ್ತು ವಿದೇಶದಲ್ಲಿರುವ ಆಸ್ತಿಗಳು ಸೇರಿವೆ. ಇದುವರೆಗೆ ಮೂರು ಆರೋಪಪಟ್ಟಿಗಳನ್ನು ಸಲ್ಲಿಸಲಾಗಿದೆ ಎಂದು ಹೇಳಿದೆ.</p>.<p>ಪಿಎಸಿಎಲ್ನ ಪ್ರವರ್ತಕ ದಿವಂಗತ ನಿರ್ಮಲ್ ಸಿಂಗ್ ಭಂಗೂ ಮತ್ತು ಇತರರ ವಿರುದ್ಧ ಸಿಬಿಐ ದಾಖಲಿಸಿದ್ದ ಪ್ರಕರಣದ ಆಧಾರದ ಮೇಲೆ ಇ.ಡಿ ತನಿಖೆ ನಡೆಸುತ್ತಿದೆ. ಭಂಗೂ ಕಳೆದ ವರ್ಷ ಆಗಸ್ಟ್ನಲ್ಲಿ ನಿಧನರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>