<p><strong>ನವದೆಹಲಿ</strong>: ಬೆಂಗಳೂರು ವಿಮಾನ ನಿಲ್ದಾಣದಿಂದ ಕೊಲಂಬೊಗೆ ಕಳ್ಳಸಾಗಣೆ ಮಾಡುತ್ತಿದ್ದ ₹2.12 ಕೋಟಿ ಮೌಲ್ಯದ ವಿದೇಶಿ ಕರೆನ್ಸಿಗಳನ್ನು ಶ್ರೀಲಂಕಾ ಪ್ರಜೆಯಿಂದ ವಶಪಡಿಸಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ (ಇ.ಡಿ) ಬುಧವಾರ ತಿಳಿಸಿದೆ.</p>.<p>ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆ ವೇಳೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬ್ಬಂದಿ ನೋಟುಗಳನ್ನು ಪತ್ತೆಹಚ್ಚಿ, ಕಳ್ಳಸಾಗಣೆ ಪ್ರಕರಣದ ಬಗ್ಗೆ ಮಾಹಿತಿ ನೀಡಿದ್ದರು ಎಂದು ಕೇಂದ್ರೀಯ ತನಿಖಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.</p>.<p>ಶ್ರೀಲಂಕಾ ಪ್ರಜೆ ವಿಮಲ್ರಾಜ್ ತುರೈಸಿಂಗಂ ಅವರಿಂದ ಡಾಲರ್, ಯೂರೊ ಮತ್ತು ರಿಯಾಲ್ ಕರೆನ್ಸಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವರ ಜೊತೆ ಥಿಲೀಪನ್ ಜಯಂತಿಕುಮಾರ್ ಎಂಬ ಮತ್ತೊಬ್ಬ ಶ್ರೀಲಂಕಾದ ವ್ಯಕ್ತಿ ಮತ್ತು ಭಾರತೀಯ ವೀರ ಕುಮಾರ್ ಇದ್ದರು. ಈ ಮೂವರು ಪ್ರಯಾಣಿಕರು ಶ್ರೀಲಂಕಾ ಏರ್ಲೈನ್ಸ್ ವಿಮಾನದ ಮೂಲಕ ಕೊಲಂಬೊ ತಲುಪಲು ಪ್ರಯತ್ನಿಸುತ್ತಿದ್ದರು. ತುರೈಸಿಂಗಂ ಈ ಕರೆನ್ಸಿಗಳನ್ನು ಚೆನ್ನೈನಲ್ಲಿ ನಗದು ಪಾವತಿಸಿ ಖರೀದಿಸಿರುವುದು ಗೊತ್ತಾಗಿದೆ ಎಂದು ಇಡಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬೆಂಗಳೂರು ವಿಮಾನ ನಿಲ್ದಾಣದಿಂದ ಕೊಲಂಬೊಗೆ ಕಳ್ಳಸಾಗಣೆ ಮಾಡುತ್ತಿದ್ದ ₹2.12 ಕೋಟಿ ಮೌಲ್ಯದ ವಿದೇಶಿ ಕರೆನ್ಸಿಗಳನ್ನು ಶ್ರೀಲಂಕಾ ಪ್ರಜೆಯಿಂದ ವಶಪಡಿಸಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ (ಇ.ಡಿ) ಬುಧವಾರ ತಿಳಿಸಿದೆ.</p>.<p>ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆ ವೇಳೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬ್ಬಂದಿ ನೋಟುಗಳನ್ನು ಪತ್ತೆಹಚ್ಚಿ, ಕಳ್ಳಸಾಗಣೆ ಪ್ರಕರಣದ ಬಗ್ಗೆ ಮಾಹಿತಿ ನೀಡಿದ್ದರು ಎಂದು ಕೇಂದ್ರೀಯ ತನಿಖಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.</p>.<p>ಶ್ರೀಲಂಕಾ ಪ್ರಜೆ ವಿಮಲ್ರಾಜ್ ತುರೈಸಿಂಗಂ ಅವರಿಂದ ಡಾಲರ್, ಯೂರೊ ಮತ್ತು ರಿಯಾಲ್ ಕರೆನ್ಸಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವರ ಜೊತೆ ಥಿಲೀಪನ್ ಜಯಂತಿಕುಮಾರ್ ಎಂಬ ಮತ್ತೊಬ್ಬ ಶ್ರೀಲಂಕಾದ ವ್ಯಕ್ತಿ ಮತ್ತು ಭಾರತೀಯ ವೀರ ಕುಮಾರ್ ಇದ್ದರು. ಈ ಮೂವರು ಪ್ರಯಾಣಿಕರು ಶ್ರೀಲಂಕಾ ಏರ್ಲೈನ್ಸ್ ವಿಮಾನದ ಮೂಲಕ ಕೊಲಂಬೊ ತಲುಪಲು ಪ್ರಯತ್ನಿಸುತ್ತಿದ್ದರು. ತುರೈಸಿಂಗಂ ಈ ಕರೆನ್ಸಿಗಳನ್ನು ಚೆನ್ನೈನಲ್ಲಿ ನಗದು ಪಾವತಿಸಿ ಖರೀದಿಸಿರುವುದು ಗೊತ್ತಾಗಿದೆ ಎಂದು ಇಡಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>