ದೆಹಲಿ ಅಬಕಾರಿ ಹಗರಣದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಬೇಕು ಎಂದು ಕೇಜ್ರಿವಾಲ್ಗೆ ಇ.ಡಿ. ಇದುವರೆಗೆ 8 ನೋಟಿಸ್ ಜಾರಿ ಮಾಡಿದೆ. ನೋಟಿಸ್ಗಳೆಲ್ಲವೂ ಕಾನೂನು ಬಾಹಿರ ಎಂದು ಹೇಳಿ ಎಂಟು ಬಾರಿಯೂ ವಿಚಾರಣೆಗೆ ಗೈರಾಗಿದ್ದರು.
ಒಂಬತ್ತನೇ ನೋಟಿಸ್ ಜಾರಿ ಮಾಡಿದ್ದಾಗಿ ಅಧಿಕಾರಿಗಳು ಭಾನುವಾರ ತಿಳಿಸಿದ್ದು, ಮಾರ್ಚ್ 22ಕ್ಕೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.