<p><strong>ನವದೆಹಲಿ</strong>: ಭೂಮಿ ಖರೀದಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲವು ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಅವರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.</p><p>ಈ ಮೊದಲು ಏಪ್ರಿಲ್ 8ರಂದು ಸಮನ್ಸ್ ನೀಡಲಾಗಿತ್ತು. ಆದರೆ, ಅವರು ವಿಚಾರಣೆಗೆ ಹಾಜರಾಗಲಿಲ್ಲ.</p><p>ಹರಿಯಾಣದ ಶಿಕೊಪುರದಲ್ಲಿ ನಡೆದಿರುವ ಭೂ ಖರೀದಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.</p><p>ವಾದ್ರಾ ಅವರಿಗೆ ಸೇರಿದ ಸ್ಕೈ ಲೈಟ್ ಹಾಸ್ಪಿಟಾಲಿಟಿ ಕಂಪನಿ ಗುರುಗ್ರಾಮ ಸೆಕ್ಟರ್ 83, ಶಿಕೊಪುರ, ಸಿಕಂದರ್ಪುರ, ಖೇದಿ ದೌಲಾ ಮತ್ತು ಸಿಹಿಯಲ್ಲಿ ₹7.5 ಕೋಟಿಗೆ ಭೂಮಿ ಖರೀದಿಸಿ, ಅದನ್ನು ₹55 ಕೋಟಿಗೆ ಮಾರಾಟ ಮಾಡಿದೆ ಎಂದು ದೂರು ನೀಡಲಾಗಿತ್ತು.</p><p>ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿ, ಹೇಳಿಕೆ ದಾಖಲಿಸುವಂತೆ ಇ.ಡಿ ಸಮನ್ಸ್ ಜಾರಿ ಮಾಡಿದೆ.</p>.ಯುವ ಕ್ರೀಡಾಪಟುಗಳಿಗೆ ಮಾರ್ಗದರ್ಶನ: ಕರ್ಣಂ ಮಲ್ಲೇಶ್ವರಿ ಪ್ರಯತ್ನ ಶ್ಲಾಘಿಸಿದ ಪಿಎಂ.ಅಭಿಮಾನಿಯ ಕಾಲಿಗೆ ಶೂ ತೊಡಿಸಿ 14 ವರ್ಷದ ಪ್ರತಿಜ್ಞೆ ಈಡೇರಿಸಿದ ಪ್ರಧಾನಿ ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭೂಮಿ ಖರೀದಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲವು ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಅವರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.</p><p>ಈ ಮೊದಲು ಏಪ್ರಿಲ್ 8ರಂದು ಸಮನ್ಸ್ ನೀಡಲಾಗಿತ್ತು. ಆದರೆ, ಅವರು ವಿಚಾರಣೆಗೆ ಹಾಜರಾಗಲಿಲ್ಲ.</p><p>ಹರಿಯಾಣದ ಶಿಕೊಪುರದಲ್ಲಿ ನಡೆದಿರುವ ಭೂ ಖರೀದಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.</p><p>ವಾದ್ರಾ ಅವರಿಗೆ ಸೇರಿದ ಸ್ಕೈ ಲೈಟ್ ಹಾಸ್ಪಿಟಾಲಿಟಿ ಕಂಪನಿ ಗುರುಗ್ರಾಮ ಸೆಕ್ಟರ್ 83, ಶಿಕೊಪುರ, ಸಿಕಂದರ್ಪುರ, ಖೇದಿ ದೌಲಾ ಮತ್ತು ಸಿಹಿಯಲ್ಲಿ ₹7.5 ಕೋಟಿಗೆ ಭೂಮಿ ಖರೀದಿಸಿ, ಅದನ್ನು ₹55 ಕೋಟಿಗೆ ಮಾರಾಟ ಮಾಡಿದೆ ಎಂದು ದೂರು ನೀಡಲಾಗಿತ್ತು.</p><p>ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿ, ಹೇಳಿಕೆ ದಾಖಲಿಸುವಂತೆ ಇ.ಡಿ ಸಮನ್ಸ್ ಜಾರಿ ಮಾಡಿದೆ.</p>.ಯುವ ಕ್ರೀಡಾಪಟುಗಳಿಗೆ ಮಾರ್ಗದರ್ಶನ: ಕರ್ಣಂ ಮಲ್ಲೇಶ್ವರಿ ಪ್ರಯತ್ನ ಶ್ಲಾಘಿಸಿದ ಪಿಎಂ.ಅಭಿಮಾನಿಯ ಕಾಲಿಗೆ ಶೂ ತೊಡಿಸಿ 14 ವರ್ಷದ ಪ್ರತಿಜ್ಞೆ ಈಡೇರಿಸಿದ ಪ್ರಧಾನಿ ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>