<p><strong>ಕೋಲ್ಕತ್ತ:</strong> ಕಲ್ಲಿದ್ದಲು ಹಗರಣದ ತನಿಖೆಗೆ ಸಂಬಂಧಿಸಿದ ವಿಚಾರಣೆಗಾಗಿ ತೃಣಮೂಲ ಕಾಂಗ್ರೆಸ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರಿಗೆ ಜಾರಿ ನಿರ್ದೇಶನಾಲಯ ಮಂಗಳವಾರ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಅವರನ್ನು ಶುಕ್ರವಾರ ಬೆಳಿಗ್ಗೆ ಕೋಲ್ಕತ್ತದ ಕಚೇರಿಗೆ ಹಾಜರಾಗುವಂತೆ ಕೇಂದ್ರೀಯ ಸಂಸ್ಥೆ ಹೇಳಿದೆ.</p>.<p>‘ವಿಚಾರಣೆಗೆ ಹಾಜರಾಗಲು ನಾವು ಅಭಿಷೇಕ್ ಬ್ಯಾನರ್ಜಿ ಅವರಿಗೆ ತಿಳಿಸಿದ್ದೇವೆ. ಅವರನ್ನು ವಿಚಾರಣೆ ಮಾಡಲು ನವದೆಹಲಿಯಿಂದ ನಮ್ಮ ಅಧಿಕಾರಿಗಳು ಬರುತ್ತಾರೆ‘ ಎಂದು ಇ.ಡಿ ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.</p>.<p>ಕಾರ್ಯಕ್ರಮವೊಂದರಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದ ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಅವರು, ‘ಸೋದರಳಿಯ ಅಭಿಷೇಕ್ ಮತ್ತು ಇತರ ಹಿರಿಯ ನಾಯಕರಿಗೆ ಕೇಂದ್ರೀಯ ಸಂಸ್ಥೆಗಳು ನೋಟಿಸ್ ಕಳುಹಿಸುವ ಸಾಧ್ಯತೆಗಳಿವೆ’ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.</p>.<p><strong>ಇದನ್ನೂ ಓದಿ</strong></p>.<p><a href="https://www.prajavani.net/india-news/ed-quizzes-abhishek-banerjee-wife-in-coal-pilferage-scam-948207.html" itemprop="url">ಮಗುವನ್ನು ಕಂಕುಳಲ್ಲೇ ಹೊತ್ತು ಇ.ಡಿ ವಿಚಾರಣೆಗೆ ಬಂದ ಅಭಿಷೇಕ್ ಬ್ಯಾನರ್ಜಿ ಪತ್ನಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಕಲ್ಲಿದ್ದಲು ಹಗರಣದ ತನಿಖೆಗೆ ಸಂಬಂಧಿಸಿದ ವಿಚಾರಣೆಗಾಗಿ ತೃಣಮೂಲ ಕಾಂಗ್ರೆಸ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರಿಗೆ ಜಾರಿ ನಿರ್ದೇಶನಾಲಯ ಮಂಗಳವಾರ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಅವರನ್ನು ಶುಕ್ರವಾರ ಬೆಳಿಗ್ಗೆ ಕೋಲ್ಕತ್ತದ ಕಚೇರಿಗೆ ಹಾಜರಾಗುವಂತೆ ಕೇಂದ್ರೀಯ ಸಂಸ್ಥೆ ಹೇಳಿದೆ.</p>.<p>‘ವಿಚಾರಣೆಗೆ ಹಾಜರಾಗಲು ನಾವು ಅಭಿಷೇಕ್ ಬ್ಯಾನರ್ಜಿ ಅವರಿಗೆ ತಿಳಿಸಿದ್ದೇವೆ. ಅವರನ್ನು ವಿಚಾರಣೆ ಮಾಡಲು ನವದೆಹಲಿಯಿಂದ ನಮ್ಮ ಅಧಿಕಾರಿಗಳು ಬರುತ್ತಾರೆ‘ ಎಂದು ಇ.ಡಿ ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.</p>.<p>ಕಾರ್ಯಕ್ರಮವೊಂದರಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದ ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಅವರು, ‘ಸೋದರಳಿಯ ಅಭಿಷೇಕ್ ಮತ್ತು ಇತರ ಹಿರಿಯ ನಾಯಕರಿಗೆ ಕೇಂದ್ರೀಯ ಸಂಸ್ಥೆಗಳು ನೋಟಿಸ್ ಕಳುಹಿಸುವ ಸಾಧ್ಯತೆಗಳಿವೆ’ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.</p>.<p><strong>ಇದನ್ನೂ ಓದಿ</strong></p>.<p><a href="https://www.prajavani.net/india-news/ed-quizzes-abhishek-banerjee-wife-in-coal-pilferage-scam-948207.html" itemprop="url">ಮಗುವನ್ನು ಕಂಕುಳಲ್ಲೇ ಹೊತ್ತು ಇ.ಡಿ ವಿಚಾರಣೆಗೆ ಬಂದ ಅಭಿಷೇಕ್ ಬ್ಯಾನರ್ಜಿ ಪತ್ನಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>