ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿಷೇಕ್‌ ಬ್ಯಾನರ್ಜಿಗೆ ಇ.ಡಿ ಸಮನ್ಸ್‌

Published 9 ಜೂನ್ 2023, 7:28 IST
Last Updated 9 ಜೂನ್ 2023, 7:28 IST
ಅಕ್ಷರ ಗಾತ್ರ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪ್ರಾಥಮಿಕ ಶಾಲೆಗಳ ಸಿಬ್ಬಂದಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು (ಇ.ಡಿ) ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ನಾಯಕ ಅಭಿಷೇಕ್‌ ಬ್ಯಾನರ್ಜಿ ಅವರಿಗೆ ಸಮನ್ಸ್‌ ನೀಡಿದೆ. ಜೂನ್‌ 13ರಂದು ಇ.ಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸೂಚಿಸಿದೆ.

ಕಲ್ಲಿದ್ದಲು ಕಳವು ಪ್ರಕರಣದಲ್ಲಿ ಅಭಿಷೇಕ್‌ ಅವರ ಪತ್ನಿ ರುಜಿರಾ ಅವರನ್ನು ಗುರುವಾರ 4 ತಾಸು ವಿಚಾರಣೆಗೆ ಒಳಪಡಿಸಲಾಗಿತ್ತು. ಇದರ ಬೆನ್ನಲ್ಲೇ ಅಭಿಷೇಕ್‌ ಅವರಿಗೆ ಇ.ಡಿ ಸಮನ್ಸ್‌ ನೀಡಿದೆ. 

ವಿಚಾರಣೆಗೆ ಹಾಜರಾಗುವುದಿಲ್ಲ: ಟಿಎಂಸಿಯ ಬೃಹತ್‌ ಪ್ರಚಾರ ಸಭೆಯಲ್ಲಿ ತೊಡಗಿರುವ ಕಾರಣ ಜೂನ್‌ 13ರಂದು ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಅಭಿಷೇಕ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT