ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಬಿಜೆಪಿ ಘಟಕ ಅಧ್ಯಕ್ಷ ಸುಕಾಂತ ಮಜುಂದರ್, ‘ದೂರು ಅಥವಾ ಭ್ರಷ್ಟಾಚಾರದ ಆರೋಪ ಇರುವವರ ಮೇಲೆ ಇ.ಡಿ ದಾಳಿ ನಡೆಸುವುದು ಸ್ವಾಭಾವಿಕ. ಆದರೆ ಸಂದೇಶ್ಖಲಿಯಲ್ಲಿ ಇ.ಡಿ ಅಧಿಕಾರಿಗಳ ಮೇಲೆ ನಡೆದ ದಾಳಿಯು, ರಾಜ್ಯದ ಕಾನೂನು ಸುವ್ಯವಸ್ಥೆಗೆ ರೋಹಿಂಗ್ಯಾಗಳು ಏನು ಮಾಡುತ್ತಿದ್ದಾರೆ ಎನ್ನುವುದನ್ನು ತೋರಿಸಿದೆ’ ಎಂದು ಹೇಳಿದ್ದಾರೆ.