<p><strong>ನವದೆಹಲಿ:</strong> ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಪತ್ನಿ ಟೀನಾ ಅಂಬಾನಿ ಅವರ ವಿರುದ್ಧ ಹೊಸದಾಗಿ ಸಮನ್ಸ್ ನೀಡಲು ಮಾಡಲು ಜಾರಿ ನಿರ್ದೇಶನಾಲಯ (ಇಡಿ) ಸಜ್ಜಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.</p><p>ಸೋಮವಾರ ದೆಹಲಿಯ ಇಡಿ ಕಚೇರಿಗೆ ಹಾಜರಾಗಲು ಟೀನಾ ಅವರಿಗೆ ಸೂಚನೆ ನೀಡಲಾಗಿತ್ತು. ಆದರೆ, ಅವರು ಹಾಜರಾಗಿಲ್ಲ. ಹಾಗಾಗಿ, ಶೀಘ್ರದಲ್ಲೇ ಮತ್ತೆ ಸಮನ್ಸ್ ನೀಡುವುದಾಗಿ ಇಡಿ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.</p><p>ವರದಿಗಳ ಪ್ರಕಾರ, ನ್ಯೂಯಾರ್ಕ್ನ ಮ್ಯಾನ್ಹ್ಯಾಟನ್ನಲ್ಲಿ ಐಷಾರಾಮಿ ಕಾಂಡೋಮಿನಿಯಂ ಖರೀದಿಗೆ ಸಂಬಂಧಿಸಿದ ಹಣದ ಮೂಲದ ಕುರಿತು ವಿಚಾರಣೆ ನಡೆಸಲು ಟಿನಾ ಅವರನ್ನು ಕರೆಯಲಾಗಿತ್ತು.</p><p>ಇತ್ತೀಚೆಗೆ ಇಡಿ ಇದೇ ಪ್ರಕರಣದಲ್ಲಿ ಮಾಜಿ ಆರ್ಕಾಮ್ (ರಿಲಯನ್ಸ್ ಕಮ್ಯುನಿಕೇಷನ್) ಅಧ್ಯಕ್ಷ ಪುನೀತ್ ಗರ್ಗ್ ಅವರನ್ನು ವಿಚಾರಣೆ ನಡೆಸಿತ್ತು.</p><p>ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಅನಿಲ್ ಧೀರೂಭಾಯಿ ಅಂಬಾನಿ ಗ್ರೂಪ್ (ADAG) ವಿರುದ್ಧದ ಬ್ಯಾಂಕ್ ವಂಚನೆ ಮತ್ತು ಸಂಬಂಧಿತ ಆರ್ಥಿಕ ಅಕ್ರಮಗಳಿಗೆ ಸಂಬಂಧಿಸಿ ಹಲವು ಪ್ರಕರಣಗಳ ತನಿಖೆಗಾಗಿ ಎಸ್ಐಟಿ ರಚನೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಪತ್ನಿ ಟೀನಾ ಅಂಬಾನಿ ಅವರ ವಿರುದ್ಧ ಹೊಸದಾಗಿ ಸಮನ್ಸ್ ನೀಡಲು ಮಾಡಲು ಜಾರಿ ನಿರ್ದೇಶನಾಲಯ (ಇಡಿ) ಸಜ್ಜಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.</p><p>ಸೋಮವಾರ ದೆಹಲಿಯ ಇಡಿ ಕಚೇರಿಗೆ ಹಾಜರಾಗಲು ಟೀನಾ ಅವರಿಗೆ ಸೂಚನೆ ನೀಡಲಾಗಿತ್ತು. ಆದರೆ, ಅವರು ಹಾಜರಾಗಿಲ್ಲ. ಹಾಗಾಗಿ, ಶೀಘ್ರದಲ್ಲೇ ಮತ್ತೆ ಸಮನ್ಸ್ ನೀಡುವುದಾಗಿ ಇಡಿ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.</p><p>ವರದಿಗಳ ಪ್ರಕಾರ, ನ್ಯೂಯಾರ್ಕ್ನ ಮ್ಯಾನ್ಹ್ಯಾಟನ್ನಲ್ಲಿ ಐಷಾರಾಮಿ ಕಾಂಡೋಮಿನಿಯಂ ಖರೀದಿಗೆ ಸಂಬಂಧಿಸಿದ ಹಣದ ಮೂಲದ ಕುರಿತು ವಿಚಾರಣೆ ನಡೆಸಲು ಟಿನಾ ಅವರನ್ನು ಕರೆಯಲಾಗಿತ್ತು.</p><p>ಇತ್ತೀಚೆಗೆ ಇಡಿ ಇದೇ ಪ್ರಕರಣದಲ್ಲಿ ಮಾಜಿ ಆರ್ಕಾಮ್ (ರಿಲಯನ್ಸ್ ಕಮ್ಯುನಿಕೇಷನ್) ಅಧ್ಯಕ್ಷ ಪುನೀತ್ ಗರ್ಗ್ ಅವರನ್ನು ವಿಚಾರಣೆ ನಡೆಸಿತ್ತು.</p><p>ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಅನಿಲ್ ಧೀರೂಭಾಯಿ ಅಂಬಾನಿ ಗ್ರೂಪ್ (ADAG) ವಿರುದ್ಧದ ಬ್ಯಾಂಕ್ ವಂಚನೆ ಮತ್ತು ಸಂಬಂಧಿತ ಆರ್ಥಿಕ ಅಕ್ರಮಗಳಿಗೆ ಸಂಬಂಧಿಸಿ ಹಲವು ಪ್ರಕರಣಗಳ ತನಿಖೆಗಾಗಿ ಎಸ್ಐಟಿ ರಚನೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>