<p><strong>ನವದೆಹಲಿ:</strong> ‘ದೇಶದ ಭವಿಷ್ಯದ ಯುವಜನತೆಯನ್ನು ಸಿದ್ಧಪಡಿಸಲು ಶಿಕ್ಷಣ ವ್ಯವಸ್ಥೆ ಪರಿಣಾಮಕಾರಿ ಮಾರ್ಗವಾಗಿದೆ. ಅದನ್ನು ಆಧುನೀಕರಣಗೊಳಿಸುವತ್ತ ಸರ್ಕಾರ ಕೆಲಸ ಮಾಡುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದ್ದಾರೆ.</p><p>YUGM ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಅವರು, ‘ಕೃತಕ ಬುದ್ಧಿಮತ್ತೆಯನ್ನು ಭಾರತಕ್ಕಾಗಿ ಸಿದ್ಧಪಡಿಸುವುದು ನಮ್ಮ ಗುರಿ’ ಎಂದಿದ್ದಾರೆ.</p><p>‘ಭವಿಷ್ಯದ ತಂತ್ರಜ್ಞಾನ ಕ್ಷೇತ್ರದಲ್ಲಿ ಇಡೀ ಜಗತ್ತಿನಲ್ಲೇ ಭಾರತ ಮುಂಚೂಣಿಯಲ್ಲಿರುವಂತೆ ಕಲಸ ಮಾಡಬೇಕು. 21ನೇ ಶತಮಾನದ ಅಗತ್ಯಗಳನ್ನು ಪೂರೈಸಲು ದೇಶದ ಶಿಕ್ಷಣ ವ್ಯವಸ್ಥೆಗೆ ಆಧುನಿಕ ಸ್ಪರ್ಶ ನೀಡುವ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.</p><p>‘2013–14ರಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ₹60 ಸಾವಿರ ಕೋಟಿ ನೀಡಲಾಗುತ್ತಿತ್ತು. ಅದು ಈಗ ₹1.25 ಲಕ್ಷ ಕೋಟಿಗೆ ಹೆಚ್ಚಿಸಲಾಗಿದೆ. ಕಡಿಮೆ ಸಮಯದಲ್ಲಿ ಹೊಸ ಉತ್ಪನ್ನಗಳ ಆಲೋಚನೆ, ಮಾದರಿ ವಿನ್ಯಾಸ ಮತ್ತು ಉತ್ಪನ್ನಗಳ ಅಭಿವೃದ್ಧಿಯಾಗುವ ಕಡೆ ಹೆಜ್ಜೆ ಹಾಕಬೇಕಿದೆ. ಪ್ರತಿಭೆ, ಉತ್ಸಾಹ ಮತ್ತು ತಂತ್ರಜ್ಞಾನದಿಂದ ಭಾರತದ ಭವಿಷ್ಯ ಪರಿವರ್ತನೆಯ ಹಾದಿಯ ಕಡೆ ಹೊರಳಿದೆ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.</p><p>‘ಭಾರತದ ವಿಶ್ವವಿದ್ಯಾಲಯಗಳ ಕ್ಯಾಂಪಸ್ಗಳು ಯುವಶಕ್ತಿಯ ಹೊಸ ಆವಿಷ್ಕಾರಗಳ ತಾಣಗಳಾಗಿ ಅಭಿವೃದ್ಧಿ ಹೊಂದುತ್ತಿವೆ’ ಎಂದು ಆಶಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ದೇಶದ ಭವಿಷ್ಯದ ಯುವಜನತೆಯನ್ನು ಸಿದ್ಧಪಡಿಸಲು ಶಿಕ್ಷಣ ವ್ಯವಸ್ಥೆ ಪರಿಣಾಮಕಾರಿ ಮಾರ್ಗವಾಗಿದೆ. ಅದನ್ನು ಆಧುನೀಕರಣಗೊಳಿಸುವತ್ತ ಸರ್ಕಾರ ಕೆಲಸ ಮಾಡುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದ್ದಾರೆ.</p><p>YUGM ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಅವರು, ‘ಕೃತಕ ಬುದ್ಧಿಮತ್ತೆಯನ್ನು ಭಾರತಕ್ಕಾಗಿ ಸಿದ್ಧಪಡಿಸುವುದು ನಮ್ಮ ಗುರಿ’ ಎಂದಿದ್ದಾರೆ.</p><p>‘ಭವಿಷ್ಯದ ತಂತ್ರಜ್ಞಾನ ಕ್ಷೇತ್ರದಲ್ಲಿ ಇಡೀ ಜಗತ್ತಿನಲ್ಲೇ ಭಾರತ ಮುಂಚೂಣಿಯಲ್ಲಿರುವಂತೆ ಕಲಸ ಮಾಡಬೇಕು. 21ನೇ ಶತಮಾನದ ಅಗತ್ಯಗಳನ್ನು ಪೂರೈಸಲು ದೇಶದ ಶಿಕ್ಷಣ ವ್ಯವಸ್ಥೆಗೆ ಆಧುನಿಕ ಸ್ಪರ್ಶ ನೀಡುವ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.</p><p>‘2013–14ರಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ₹60 ಸಾವಿರ ಕೋಟಿ ನೀಡಲಾಗುತ್ತಿತ್ತು. ಅದು ಈಗ ₹1.25 ಲಕ್ಷ ಕೋಟಿಗೆ ಹೆಚ್ಚಿಸಲಾಗಿದೆ. ಕಡಿಮೆ ಸಮಯದಲ್ಲಿ ಹೊಸ ಉತ್ಪನ್ನಗಳ ಆಲೋಚನೆ, ಮಾದರಿ ವಿನ್ಯಾಸ ಮತ್ತು ಉತ್ಪನ್ನಗಳ ಅಭಿವೃದ್ಧಿಯಾಗುವ ಕಡೆ ಹೆಜ್ಜೆ ಹಾಕಬೇಕಿದೆ. ಪ್ರತಿಭೆ, ಉತ್ಸಾಹ ಮತ್ತು ತಂತ್ರಜ್ಞಾನದಿಂದ ಭಾರತದ ಭವಿಷ್ಯ ಪರಿವರ್ತನೆಯ ಹಾದಿಯ ಕಡೆ ಹೊರಳಿದೆ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.</p><p>‘ಭಾರತದ ವಿಶ್ವವಿದ್ಯಾಲಯಗಳ ಕ್ಯಾಂಪಸ್ಗಳು ಯುವಶಕ್ತಿಯ ಹೊಸ ಆವಿಷ್ಕಾರಗಳ ತಾಣಗಳಾಗಿ ಅಭಿವೃದ್ಧಿ ಹೊಂದುತ್ತಿವೆ’ ಎಂದು ಆಶಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>