‘ಸಾಕ್ಷಿ’ ಪತ್ರಿಕೆಯನ್ನು ಖರೀದಿಸಲು ಗ್ರಾಮ ಹಾಗೂ ವಾರ್ಡ್ ಹಂತದ ಕಾರ್ಯಕರ್ತರಿಗೆ ಸರ್ಕಾರಿ ನಿಧಿಯಿಂದ ₹200 ಭತ್ಯೆ ನೀಡುವ ಸಲುವಾಗಿ ಆಂಧ್ರ ಪ್ರದೇಶ ಸರ್ಕಾರವು ಆದೇಶ ಹೊರಡಿಸಿತ್ತು. ಈ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿ ಉಶೋದಯ ಪಬ್ಲಿಕೇಷನ್ ಆಂಧ್ರ ಪ್ರದೇಶ ಹೈಕೋರ್ಟ್ ಅರ್ಜಿ ಸಲ್ಲಿಸಿತ್ತು. ಆದರೆ, ಈ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿತು. ನಂತರ, ಉಶೋದಯ ಪಬ್ಲಿಕೇಷನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.