<p><strong>ಜೈಪುರ:</strong> ರಾಜಸ್ಥಾನದಲ್ಲಿ ಡಿಸೆಂಬರ್ 23ರಂದು ಕೊಳವೆ ಬಾವಿಗೆ ಬಿದ್ದ ಮೂರು ವರ್ಷದ ಬಾಲಕಿಯ ರಕ್ಷಣೆಗೆ ಕಾರ್ಯಾಚರಣೆಯನ್ನು ಚುರುಕುಗೊಳಿಸಲಾಗಿದೆ. </p><p>ಒಂದು ವಾರ ಕಳೆದರೂ ಹೊರತೆಗೆಯಲು ಸಾಧ್ಯವಾಗದೇ ಇರುವುದು ಬಾಲಕಿ ಚೇತನ ಜೀವಂತವಾಗಿ ಇರಬಹುದೇ ಎಂಬ ಅನುಮಾನ ಮೂಡಿದೆ. </p><p>ರಾಜಸ್ಥಾನದ ಕೋಟಪುತಲಿ-ಬಹರೋಡ್ ಜಿಲ್ಲೆಯಲ್ಲಿ ಸುಮಾರು 150 ಅಡಿ ಆಳದ ಕೊಳವೆ ಬಾವಿಗೆ ಬಾಲಕಿ ಆಕಸ್ಮಿಕವಾಗಿ ಬಿದ್ದಿದ್ದಳು. </p><p>'ತಜ್ಞರ ಮಾರ್ಗದರ್ಶನ ಪಡೆದು ಎನ್ಡಿಆರ್ಎಫ್ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಐವರು ತಜ್ಞರಿಂದ ನಮ್ಮ ಕಾರ್ಯಾಚರಣೆ ವಿಧಾನ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿದೆಯೇ ಎಂಬುದನ್ನು ಪರಿಶೀಲಿಸಿದ್ದೇವೆ' ಎಂದು ಎನ್ಡಿಆರ್ಎಫ್ ಅಧಿಕಾರಿಗಳು ತಿಳಿಸಿದ್ದಾರೆ. </p><p>ಕೋಟಪುತಲಿ-ಬಹರೋಡ್ ಜಿಲ್ಲಾಧಿಕಾರಿ ಕಲ್ಪನಾ ಅಗರವಾಲ್ ಸಹ ಪ್ರತಿಕ್ರಿಯಿಸಿದ್ದು, 'ಎನ್ಡಿಆರ್ಎಫ್ನ ರಕ್ಷಣಾ ಕಾರ್ಯಾಚರಣೆ ಸರಿಯಾದ ದಿಕ್ಕಿನಲ್ಲಿದೆ ಎಂಬುದನ್ನು ಪರಿಶೀಲಿಸಲು ಮೂರು ವಿಭಿನ್ನ ತಂಡಗಳನ್ನು ಕರೆದಿದ್ದೇವೆ. ಗಣಿಗಾರಿಕೆ ತಜ್ಞರೂ ಸ್ಥಳದಲ್ಲಿದ್ದಾರೆ. ತಜ್ಞರ ನಿರ್ದೇಶನದಂತೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ' ಎಂದು ಹೇಳಿದ್ದಾರೆ. </p><p>'ಕೊಳವೆ ಬಾವಿಗೆ ಸಮಾನಂತರವಾಗಿ ಅಗೆಯುವ ಕಾರ್ಯ ಮುಂದುವರಿದಿದೆ. ಈ ನಡುವೆ ಸುರಿದ ಮಳೆಯು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿ ಪರಿಣಮಿಸಿತು. ಬಂಡೆಯನ್ನು ಒಡೆಯುವುದು ಸವಾಲಾಗಿದೆ. ಇದು ರಾಜ್ಯದಲ್ಲಿ ಎದುರಾದ ಅತ್ಯಂತ ಕಠಿಣ ರಕ್ಷಣಾ ಕಾರ್ಯಾಚರಣೆಗಳಲ್ಲಿ ಒಂದಾಗಿದೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಮತ್ತೊಂದೆಡೆ ರಕ್ಷಣಾ ಕಾರ್ಯಾಚರಣೆ ವಿಳಂಬವಾಗುತ್ತಿದೆ ಎಂದು ಬಾಲಕಿಯ ಕುಟುಂಬದವರು ಆರೋಪಿಸಿದ್ದಾರೆ. </p>.ಭೋಪಾಲ್: ಕೊಳವೆ ಬಾವಿಗೆ ಬಿದ್ದಿದ್ದ ಬಾಲಕ ಸಾವು.ರಾಜಸ್ಥಾನ | ಕೊಳವೆ ಬಾವಿಗೆ ಬಿದ್ದ ಬಾಲಕಿ; ರಕ್ಷಣಾ ಕಾರ್ಯಾಚರಣೆ ಚುರುಕು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ರಾಜಸ್ಥಾನದಲ್ಲಿ ಡಿಸೆಂಬರ್ 23ರಂದು ಕೊಳವೆ ಬಾವಿಗೆ ಬಿದ್ದ ಮೂರು ವರ್ಷದ ಬಾಲಕಿಯ ರಕ್ಷಣೆಗೆ ಕಾರ್ಯಾಚರಣೆಯನ್ನು ಚುರುಕುಗೊಳಿಸಲಾಗಿದೆ. </p><p>ಒಂದು ವಾರ ಕಳೆದರೂ ಹೊರತೆಗೆಯಲು ಸಾಧ್ಯವಾಗದೇ ಇರುವುದು ಬಾಲಕಿ ಚೇತನ ಜೀವಂತವಾಗಿ ಇರಬಹುದೇ ಎಂಬ ಅನುಮಾನ ಮೂಡಿದೆ. </p><p>ರಾಜಸ್ಥಾನದ ಕೋಟಪುತಲಿ-ಬಹರೋಡ್ ಜಿಲ್ಲೆಯಲ್ಲಿ ಸುಮಾರು 150 ಅಡಿ ಆಳದ ಕೊಳವೆ ಬಾವಿಗೆ ಬಾಲಕಿ ಆಕಸ್ಮಿಕವಾಗಿ ಬಿದ್ದಿದ್ದಳು. </p><p>'ತಜ್ಞರ ಮಾರ್ಗದರ್ಶನ ಪಡೆದು ಎನ್ಡಿಆರ್ಎಫ್ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಐವರು ತಜ್ಞರಿಂದ ನಮ್ಮ ಕಾರ್ಯಾಚರಣೆ ವಿಧಾನ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿದೆಯೇ ಎಂಬುದನ್ನು ಪರಿಶೀಲಿಸಿದ್ದೇವೆ' ಎಂದು ಎನ್ಡಿಆರ್ಎಫ್ ಅಧಿಕಾರಿಗಳು ತಿಳಿಸಿದ್ದಾರೆ. </p><p>ಕೋಟಪುತಲಿ-ಬಹರೋಡ್ ಜಿಲ್ಲಾಧಿಕಾರಿ ಕಲ್ಪನಾ ಅಗರವಾಲ್ ಸಹ ಪ್ರತಿಕ್ರಿಯಿಸಿದ್ದು, 'ಎನ್ಡಿಆರ್ಎಫ್ನ ರಕ್ಷಣಾ ಕಾರ್ಯಾಚರಣೆ ಸರಿಯಾದ ದಿಕ್ಕಿನಲ್ಲಿದೆ ಎಂಬುದನ್ನು ಪರಿಶೀಲಿಸಲು ಮೂರು ವಿಭಿನ್ನ ತಂಡಗಳನ್ನು ಕರೆದಿದ್ದೇವೆ. ಗಣಿಗಾರಿಕೆ ತಜ್ಞರೂ ಸ್ಥಳದಲ್ಲಿದ್ದಾರೆ. ತಜ್ಞರ ನಿರ್ದೇಶನದಂತೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ' ಎಂದು ಹೇಳಿದ್ದಾರೆ. </p><p>'ಕೊಳವೆ ಬಾವಿಗೆ ಸಮಾನಂತರವಾಗಿ ಅಗೆಯುವ ಕಾರ್ಯ ಮುಂದುವರಿದಿದೆ. ಈ ನಡುವೆ ಸುರಿದ ಮಳೆಯು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿ ಪರಿಣಮಿಸಿತು. ಬಂಡೆಯನ್ನು ಒಡೆಯುವುದು ಸವಾಲಾಗಿದೆ. ಇದು ರಾಜ್ಯದಲ್ಲಿ ಎದುರಾದ ಅತ್ಯಂತ ಕಠಿಣ ರಕ್ಷಣಾ ಕಾರ್ಯಾಚರಣೆಗಳಲ್ಲಿ ಒಂದಾಗಿದೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಮತ್ತೊಂದೆಡೆ ರಕ್ಷಣಾ ಕಾರ್ಯಾಚರಣೆ ವಿಳಂಬವಾಗುತ್ತಿದೆ ಎಂದು ಬಾಲಕಿಯ ಕುಟುಂಬದವರು ಆರೋಪಿಸಿದ್ದಾರೆ. </p>.ಭೋಪಾಲ್: ಕೊಳವೆ ಬಾವಿಗೆ ಬಿದ್ದಿದ್ದ ಬಾಲಕ ಸಾವು.ರಾಜಸ್ಥಾನ | ಕೊಳವೆ ಬಾವಿಗೆ ಬಿದ್ದ ಬಾಲಕಿ; ರಕ್ಷಣಾ ಕಾರ್ಯಾಚರಣೆ ಚುರುಕು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>