<p><strong>ಕಾಸರಗೋಡು:</strong> ಕೇರಳದ ಕಾಸರಗೋಡಿನಲ್ಲಿ ಮುಸ್ಲಿಂ ಸಮುದಾಯದವರು ಈದ್ ಮಿಲಾದ್ ಮೆರವಣಿಗೆ ವೇಳೆ ದೇವಾಲಯಕ್ಕೆ ವಿಶೇಷ ಗೌರವ ಸಲ್ಲಿಸಿದ್ದು ಸದ್ಯ ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. </p><p>ಪಾಲಕುನ್ನುವಿನಲ್ಲಿರುವ ಕೊಟ್ಟಿಕುಲಂ ನೂರುಲ್ ಹುದಾ ಮದರಸಾ ಆಯೋಜಿಸಿದ್ದ ಈದ್ ಮಿಲಾದ್ ಮೆರವಣಿಗೆ ವೇಳೆ ಕಜಕಂ ಭಗವತಿ ದೇವಸ್ಥಾನಕ್ಕೆ ವಿಶೇಷ ಗೌರವ ಸಲ್ಲಿಸಲಾಗಿದೆ. ಅನಿಶಿತ್ ಎಂಬವರು ಗೌರವ ಸಲ್ಲಿಸುವ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.</p>.<p>ಇದು ಕೇರಳ, ಇಲ್ಲಿ ವೈವಿಧ್ಯತೆಯಲ್ಲಿ ಏಕತೆ ಇದೆ. ಮುಸ್ಲಿಮರು ಹಿಂದೂ ದೇವಾಲಯಕ್ಕೆ ವಂದನೆ ಸಲ್ಲಿಸುವುದು, ಧರ್ಮಗಳ ನಡುವೆ ಗೌರವ ಮತ್ತು ಸಾಮರಸ್ಯ ತೋರಿಸುತ್ತದೆ ಎಂದು ಹೇಳಿದ್ದಾರೆ.</p><p>ಓಣಂ ಹಬ್ಬ ಮತ್ತು ಈದ್ ಮಿಲಾದ್ ಜೊತೆಜೊತೆಯಲ್ಲೇ ಬಂದಿದ್ದು, ಕೇರಳದ ಹಲವಾರು ಭಾಗಗಳು ಕೋಮು ಸೌಹಾರ್ದತೆಯ ನಿದರ್ಶನಗಳು ಕಂಡುಬಂದಿವೆ. </p><p>ಇಂತಹ ಘಟನೆಗಳ ಕುರಿತು, ಇದು ನಿಜವಾದ ಕೇರಳ ಸ್ಟೋರಿ, ಇದು ನಿಜವಾದ ಭಾರತ ಎಂದು ನೆಟ್ಟಿಗರು ಸಾಮಾಜಿಕ ಮಾಧ್ಯಮಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. </p>.ಈದ್ ಮಿಲಾದ್: ಪೈಗಂಬರರ ಸಂದೇಶ ಜಪ.ಓಣಂ ಪೂಕ್ಕಳಂ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಸರಗೋಡು:</strong> ಕೇರಳದ ಕಾಸರಗೋಡಿನಲ್ಲಿ ಮುಸ್ಲಿಂ ಸಮುದಾಯದವರು ಈದ್ ಮಿಲಾದ್ ಮೆರವಣಿಗೆ ವೇಳೆ ದೇವಾಲಯಕ್ಕೆ ವಿಶೇಷ ಗೌರವ ಸಲ್ಲಿಸಿದ್ದು ಸದ್ಯ ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. </p><p>ಪಾಲಕುನ್ನುವಿನಲ್ಲಿರುವ ಕೊಟ್ಟಿಕುಲಂ ನೂರುಲ್ ಹುದಾ ಮದರಸಾ ಆಯೋಜಿಸಿದ್ದ ಈದ್ ಮಿಲಾದ್ ಮೆರವಣಿಗೆ ವೇಳೆ ಕಜಕಂ ಭಗವತಿ ದೇವಸ್ಥಾನಕ್ಕೆ ವಿಶೇಷ ಗೌರವ ಸಲ್ಲಿಸಲಾಗಿದೆ. ಅನಿಶಿತ್ ಎಂಬವರು ಗೌರವ ಸಲ್ಲಿಸುವ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.</p>.<p>ಇದು ಕೇರಳ, ಇಲ್ಲಿ ವೈವಿಧ್ಯತೆಯಲ್ಲಿ ಏಕತೆ ಇದೆ. ಮುಸ್ಲಿಮರು ಹಿಂದೂ ದೇವಾಲಯಕ್ಕೆ ವಂದನೆ ಸಲ್ಲಿಸುವುದು, ಧರ್ಮಗಳ ನಡುವೆ ಗೌರವ ಮತ್ತು ಸಾಮರಸ್ಯ ತೋರಿಸುತ್ತದೆ ಎಂದು ಹೇಳಿದ್ದಾರೆ.</p><p>ಓಣಂ ಹಬ್ಬ ಮತ್ತು ಈದ್ ಮಿಲಾದ್ ಜೊತೆಜೊತೆಯಲ್ಲೇ ಬಂದಿದ್ದು, ಕೇರಳದ ಹಲವಾರು ಭಾಗಗಳು ಕೋಮು ಸೌಹಾರ್ದತೆಯ ನಿದರ್ಶನಗಳು ಕಂಡುಬಂದಿವೆ. </p><p>ಇಂತಹ ಘಟನೆಗಳ ಕುರಿತು, ಇದು ನಿಜವಾದ ಕೇರಳ ಸ್ಟೋರಿ, ಇದು ನಿಜವಾದ ಭಾರತ ಎಂದು ನೆಟ್ಟಿಗರು ಸಾಮಾಜಿಕ ಮಾಧ್ಯಮಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. </p>.ಈದ್ ಮಿಲಾದ್: ಪೈಗಂಬರರ ಸಂದೇಶ ಜಪ.ಓಣಂ ಪೂಕ್ಕಳಂ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>