<p><strong>ನವದೆಹಲಿ</strong>: ಬಕ್ರೀದ್ ಹಬ್ಬದ ಅಂಗವಾಗಿ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ. ಈ ಹಬ್ಬವು ಸಮಾಜದಲ್ಲಿ ಸಹೋದರತ್ವ ಮನೋಭಾವವನ್ನು ಮತ್ತಷ್ಟು ಗಟ್ಟಿಗೊಳಿಸಲಿ ಎಂದು ಹಾರೈಸಿದ್ದಾರೆ.</p><p>ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಶುಭಾಶಯದ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ಮೋದಿ, ‘ಈದ್ ಉಲ್-ಅದಾ ಶುಭಾಶಯಗಳು. ಎಲ್ಲರಿಗೂ ಯಶಸ್ಸು ಮತ್ತು ಉತ್ತಮ ಆರೋಗ್ಯ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಸಮಾಜದಲ್ಲಿ ಸಹೋದರತ್ವ ಮತ್ತು ಸಂತೋಷದ ಮನೋಭಾವ ಮತ್ತಷ್ಟು ಗಟ್ಟಿಗೊಳ್ಳಲಿ’ ಎಂದು ಹೇಳಿದ್ದಾರೆ.</p><p>ಬಕ್ರೀದ್ ಶುಭಾಶಯ ತಿಳಿಸಿರುವ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ‘ಎಲ್ಲರಿಗೂ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯಗಳು. ಇಂದಿನ ಈ ದಿನ ನಿಮ್ಮ ಮನೆಯಲ್ಲಿ ಪ್ರೀತಿ, ಸೌಹಾರ್ದತೆ ಮತ್ತು ಸಂತೋಷ ತುಂಬಿರಲಿ’ ಎಂದು ಹಾರೈಸಿದ್ದಾರೆ.</p>.<p>‘ಬಕ್ರೀದ್ ಹಬ್ಬವು ತ್ಯಾಗ, ನಂಬಿಕೆ, ಕರುಣೆ ಮತ್ತು ಕ್ಷಮಾಗುಣದ ಸಾರ್ವಕಾಲಿಕ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಈ ಪವಿತ್ರ ಹಬ್ಬವು ನಮ್ಮಲ್ಲಿ ಸಹೋದರತ್ವದ ಮನೋಭಾವವನ್ನು ಮತ್ತಷ್ಟು ಗಟ್ಟಿಗೊಳಿಸಲು, ಏಕತೆಯ ಬಾಂಧವ್ಯವನ್ನು ಬಲಪಡಿಸಲು ಹಾಗೂ ಶಾಂತಿ, ಸೌಹಾರ್ದ ಸಮಾಜದ ನಿರ್ಮಾಣಕ್ಕಾಗಿ ಒಟ್ಟಾಗಿ ಕೆಲಸ ಮಾಡಲು ಸ್ಫೂರ್ತಿ ನೀಡಲಿ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.</p><p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಬಕ್ರೀದ್ ಹಬ್ಬದ ಶುಭಾಶಯ ತಿಳಿಸಿದ್ದಾರೆ. ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ತ್ಯಾಗ, ಬಲಿದಾನದ ಸಂಕೇತವಾದ ಈ ಪವಿತ್ರ ಹಬ್ಬವು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಹೋದರತ್ವವು ನೆಲೆಗೊಳ್ಳಲು ಪ್ರೇರಣೆಯಾಗಲಿ’ ಎಂದು ಬರೆದುಕೊಂಡಿದ್ದಾರೆ.</p><p>ಮಾಜಿ ಪ್ರಧಾನಿ ದೇವೇಗೌಡ ಅವರು ಶುಭಾಶಯದ ಸಂದೇಶ ಹಂಚಿಕೊಂಡಿದ್ದು, ‘ಸಮಸ್ತ ಮುಸ್ಲಿಂ ಸಹೋದರ ಸಹೋದರಿಯರಿಗೆ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯಗಳು. ತ್ಯಾಗ, ಬಲಿದಾನ ಮತ್ತು ಭ್ರಾತೃತ್ವದ ಸಂಕೇತವಾದ ಈ ಪವಿತ್ರ ಹಬ್ಬವು ಎಲ್ಲರ ಬಾಳಿನಲ್ಲಿ ಸುಖ, ಶಾಂತಿ, ನೆಮ್ಮದಿ, ಮತ್ತು ಸಮೃದ್ಧಿಯನ್ನು ತರಲಿ ಎಂದು ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಕ್ರೀದ್ ಹಬ್ಬದ ಅಂಗವಾಗಿ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ. ಈ ಹಬ್ಬವು ಸಮಾಜದಲ್ಲಿ ಸಹೋದರತ್ವ ಮನೋಭಾವವನ್ನು ಮತ್ತಷ್ಟು ಗಟ್ಟಿಗೊಳಿಸಲಿ ಎಂದು ಹಾರೈಸಿದ್ದಾರೆ.</p><p>ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಶುಭಾಶಯದ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ಮೋದಿ, ‘ಈದ್ ಉಲ್-ಅದಾ ಶುಭಾಶಯಗಳು. ಎಲ್ಲರಿಗೂ ಯಶಸ್ಸು ಮತ್ತು ಉತ್ತಮ ಆರೋಗ್ಯ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಸಮಾಜದಲ್ಲಿ ಸಹೋದರತ್ವ ಮತ್ತು ಸಂತೋಷದ ಮನೋಭಾವ ಮತ್ತಷ್ಟು ಗಟ್ಟಿಗೊಳ್ಳಲಿ’ ಎಂದು ಹೇಳಿದ್ದಾರೆ.</p><p>ಬಕ್ರೀದ್ ಶುಭಾಶಯ ತಿಳಿಸಿರುವ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ‘ಎಲ್ಲರಿಗೂ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯಗಳು. ಇಂದಿನ ಈ ದಿನ ನಿಮ್ಮ ಮನೆಯಲ್ಲಿ ಪ್ರೀತಿ, ಸೌಹಾರ್ದತೆ ಮತ್ತು ಸಂತೋಷ ತುಂಬಿರಲಿ’ ಎಂದು ಹಾರೈಸಿದ್ದಾರೆ.</p>.<p>‘ಬಕ್ರೀದ್ ಹಬ್ಬವು ತ್ಯಾಗ, ನಂಬಿಕೆ, ಕರುಣೆ ಮತ್ತು ಕ್ಷಮಾಗುಣದ ಸಾರ್ವಕಾಲಿಕ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಈ ಪವಿತ್ರ ಹಬ್ಬವು ನಮ್ಮಲ್ಲಿ ಸಹೋದರತ್ವದ ಮನೋಭಾವವನ್ನು ಮತ್ತಷ್ಟು ಗಟ್ಟಿಗೊಳಿಸಲು, ಏಕತೆಯ ಬಾಂಧವ್ಯವನ್ನು ಬಲಪಡಿಸಲು ಹಾಗೂ ಶಾಂತಿ, ಸೌಹಾರ್ದ ಸಮಾಜದ ನಿರ್ಮಾಣಕ್ಕಾಗಿ ಒಟ್ಟಾಗಿ ಕೆಲಸ ಮಾಡಲು ಸ್ಫೂರ್ತಿ ನೀಡಲಿ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.</p><p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಬಕ್ರೀದ್ ಹಬ್ಬದ ಶುಭಾಶಯ ತಿಳಿಸಿದ್ದಾರೆ. ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ತ್ಯಾಗ, ಬಲಿದಾನದ ಸಂಕೇತವಾದ ಈ ಪವಿತ್ರ ಹಬ್ಬವು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಹೋದರತ್ವವು ನೆಲೆಗೊಳ್ಳಲು ಪ್ರೇರಣೆಯಾಗಲಿ’ ಎಂದು ಬರೆದುಕೊಂಡಿದ್ದಾರೆ.</p><p>ಮಾಜಿ ಪ್ರಧಾನಿ ದೇವೇಗೌಡ ಅವರು ಶುಭಾಶಯದ ಸಂದೇಶ ಹಂಚಿಕೊಂಡಿದ್ದು, ‘ಸಮಸ್ತ ಮುಸ್ಲಿಂ ಸಹೋದರ ಸಹೋದರಿಯರಿಗೆ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯಗಳು. ತ್ಯಾಗ, ಬಲಿದಾನ ಮತ್ತು ಭ್ರಾತೃತ್ವದ ಸಂಕೇತವಾದ ಈ ಪವಿತ್ರ ಹಬ್ಬವು ಎಲ್ಲರ ಬಾಳಿನಲ್ಲಿ ಸುಖ, ಶಾಂತಿ, ನೆಮ್ಮದಿ, ಮತ್ತು ಸಮೃದ್ಧಿಯನ್ನು ತರಲಿ ಎಂದು ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>