<p><strong>ಮುಂಬೈ:</strong> ಮಹಾರಾಷ್ಟ್ರದಲ್ಲಿ ಕಳೆದ 56 ತಿಂಗಳಲ್ಲಿ ದಿನಕ್ಕೆ ಸರಾಸರಿ 8 ಮಂದಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವುದು ಭಾಗಶಃ ಸತ್ಯ ಎಂದು ಮಹಾರಾಷ್ಟ್ರದ ಪರಿಹಾರ ಮತ್ತು ಪುನರ್ವಸತಿ ಸಚಿವ ಮಕರಂದ್ ಜಾಧವ್ ಪಾಟೀಲ್ ಸೋಮವಾರ ತಿಳಿಸಿದ್ದಾರೆ.</p><p>ವಿಧಾನ ಪರಿಷತ್ ಪ್ರಶ್ನೋತ್ತರ ವೇಳೆಯಲ್ಲಿ ಎನ್ಸಿಪಿ ಎಂಎಲ್ಸಿ ಶಿವಾಜಿರಾವ್ ಗರ್ಜೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಛತ್ರಪತಿ ಸಂಭಾಜಿನಗರ ಮತ್ತು ಅಮರಾವತಿ ವಿಭಾಗದಲ್ಲಿ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.</p><p>ಈ ವಿಚಾರಕ್ಕೆ ಸಂಬಂಧಿಸಿ ಅಂಕಿ ಅಂಶಗಳ ವಿವರ ನೀಡಿದ ಸಚಿವರು, ಕಳೆದ ವರ್ಷ ಮರಾಠಾವಾಡ ವಿಭಾಗದಲ್ಲಿ 952 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಕೋಲಾದಲ್ಲಿ 168, ವಾರ್ಧಾದಲ್ಲಿ 112, ಬೀಡ್ನಲ್ಲಿ 205, ಅಮರಾವತಿಯಲ್ಲಿ 1,069 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p><p>2024ರ ಜ.1 ರಿಂದ ಡಿ.31ರವರೆಗೆ ಛತ್ರಪತಿ ಸಂಭಾಜಿನಗರ ವಿಭಾಗದಲ್ಲಿ 952 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಲ್ಲಿ 707 ರೈತರು ಪರಿಹಾರಕ್ಕೆ ಅರ್ಹರಾಗಿದ್ದರು, 433 ಮೃತ ರೈತರ ಕುಟುಂಬ ಪರಿಹಾರವನ್ನು ಸ್ವೀಕರಿಸಿದೆ ಎಂದರು.</p><p>ಬೀಡ್ ಜಿಲ್ಲೆಯಲ್ಲಿ 167 ಪ್ರಕರಣಗಳ ಪೈಕಿ 108 ಕುಟುಂಬ ಪರಿಹಾರವನ್ನು ಸ್ವೀಕರಿಸಿದೆ, ಅಮರಾವತಿಯಲ್ಲಿ 441 ಪ್ರಕರಣಗಳಲ್ಲಿ 332 ಕುಟುಂಬ ಪರಿಹಾರವನ್ನು ಪಡೆದಿದೆ ಎಂದು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮಹಾರಾಷ್ಟ್ರದಲ್ಲಿ ಕಳೆದ 56 ತಿಂಗಳಲ್ಲಿ ದಿನಕ್ಕೆ ಸರಾಸರಿ 8 ಮಂದಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವುದು ಭಾಗಶಃ ಸತ್ಯ ಎಂದು ಮಹಾರಾಷ್ಟ್ರದ ಪರಿಹಾರ ಮತ್ತು ಪುನರ್ವಸತಿ ಸಚಿವ ಮಕರಂದ್ ಜಾಧವ್ ಪಾಟೀಲ್ ಸೋಮವಾರ ತಿಳಿಸಿದ್ದಾರೆ.</p><p>ವಿಧಾನ ಪರಿಷತ್ ಪ್ರಶ್ನೋತ್ತರ ವೇಳೆಯಲ್ಲಿ ಎನ್ಸಿಪಿ ಎಂಎಲ್ಸಿ ಶಿವಾಜಿರಾವ್ ಗರ್ಜೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಛತ್ರಪತಿ ಸಂಭಾಜಿನಗರ ಮತ್ತು ಅಮರಾವತಿ ವಿಭಾಗದಲ್ಲಿ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.</p><p>ಈ ವಿಚಾರಕ್ಕೆ ಸಂಬಂಧಿಸಿ ಅಂಕಿ ಅಂಶಗಳ ವಿವರ ನೀಡಿದ ಸಚಿವರು, ಕಳೆದ ವರ್ಷ ಮರಾಠಾವಾಡ ವಿಭಾಗದಲ್ಲಿ 952 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಕೋಲಾದಲ್ಲಿ 168, ವಾರ್ಧಾದಲ್ಲಿ 112, ಬೀಡ್ನಲ್ಲಿ 205, ಅಮರಾವತಿಯಲ್ಲಿ 1,069 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p><p>2024ರ ಜ.1 ರಿಂದ ಡಿ.31ರವರೆಗೆ ಛತ್ರಪತಿ ಸಂಭಾಜಿನಗರ ವಿಭಾಗದಲ್ಲಿ 952 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಲ್ಲಿ 707 ರೈತರು ಪರಿಹಾರಕ್ಕೆ ಅರ್ಹರಾಗಿದ್ದರು, 433 ಮೃತ ರೈತರ ಕುಟುಂಬ ಪರಿಹಾರವನ್ನು ಸ್ವೀಕರಿಸಿದೆ ಎಂದರು.</p><p>ಬೀಡ್ ಜಿಲ್ಲೆಯಲ್ಲಿ 167 ಪ್ರಕರಣಗಳ ಪೈಕಿ 108 ಕುಟುಂಬ ಪರಿಹಾರವನ್ನು ಸ್ವೀಕರಿಸಿದೆ, ಅಮರಾವತಿಯಲ್ಲಿ 441 ಪ್ರಕರಣಗಳಲ್ಲಿ 332 ಕುಟುಂಬ ಪರಿಹಾರವನ್ನು ಪಡೆದಿದೆ ಎಂದು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>