ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಊಟಿ ಬಳಿ ಕಣಿವೆಗೆ ಉರುಳಿದ ಪ್ರವಾಸಿಗರ ಬಸ್: 8 ಜನ ಸಾವು

ಊಟಿ–ಮೆಟ್ಟುಪಾಳ್ಯಂ ರಸ್ತೆಯಲ್ಲಿ ಘಟನೆ
Published 1 ಅಕ್ಟೋಬರ್ 2023, 3:24 IST
Last Updated 1 ಅಕ್ಟೋಬರ್ 2023, 3:24 IST
ಅಕ್ಷರ ಗಾತ್ರ

ಉದಕಮಂಡಲಂ: ಪ್ರವಾಸಿಗರ ಬಸ್‌ ಒಂದು ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಣಿವೆಗೆ ಬಿದ್ದಿದ್ದರಿಂದ 8 ಪ್ರವಾಸಿಗರು ಮೃತಪಟ್ಟು 42 ಜನ ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ಊಟಿ–ಮೆಟ್ಟುಪಾಳ್ಯಂ ರಸ್ತೆಯಲ್ಲಿ ನಡೆದಿದೆ.

ಮೃತರಲ್ಲಿ ಬಹುತೇಕರು ತಮಿಳುನಾಡಿನ ತೆಂಕಾಸಿಯ ಮೂಲದವರಾಗಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಕೂನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಊಟಿಯಿಂದ ಮೆಟ್ಟುಪಾಳ್ಯಂಗೆ ತೆರಳುತ್ತಿದ್ದ ಬಸ್, 9 ನೇ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು 50 ಅಡಿ ಆಳವಾದ ಕಣಿವೆಗೆ ಉರುಳಿ ಬಿದ್ದಿದೆ. ಘಟನೆಗೆ ಸಂಬಂಧಿಸಿದ ವಿಡಿಯೊ ಮತ್ತು ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ.

ಬಸ್‌ನಲ್ಲಿ 57 ಪ್ರವಾಸಿಗರು ಇದ್ದರು, ಇವರೆಲ್ಲ ಮೆಟ್ಟುಪಾಳ್ಯಂ ಸುತ್ತಮುತ್ತಲಿನ ಪ್ರವಾಸಿ ತಾಣಗಳನ್ನು ನೋಡಿಕೊಂಡು ವಾಪಸ್ ಊಟಿಗೆ ಬರುವಾಗ ಈ ಘಟನೆ ನಡೆದಿದೆ. ಗಾಯಾಳುಗಳಲ್ಲಿ ನಾಲ್ವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಸ್‌ನ ಬ್ರೇಕ್ ಫೇಲಾಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರಿಗೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರು ಸಂತಾಪ ಸೂಚಿಸಿ ತಲಾ ₹ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT