<p><strong>ನವದೆಹಲಿ:</strong> ಉತ್ತರಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆ ಸಂಬಂಧಿ ಅನಾಹುತಗಳಿಂದ ಎರಡು ದಿನಗಳಲ್ಲಿ 18 ಮಂದಿ ಮೃತಪಟ್ಟಿದ್ದಾರೆ.</p>.<p>ಕೇರಳ, ಉತ್ತರಾಖಂಡ, ಹಿಮಾಚಲಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ಎಚ್ಚರಿಕೆ ನೀಡಿದೆ.</p>.<p>ರಾಜಸ್ಥಾನದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ತಲೆದೋರಿದೆ. ಅರುಣಾಚಲಪ್ರದೇಶ ಹಾಗೂ ಸಿಕ್ಕಿಂನಲ್ಲಿ ಮಳೆಯಿಂದ ಭೂಕುಸಿತ ಸಂಭವಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.</p>.<p>ಜುಲೈ 18ರಿಂದ 19ರವರೆಗೆ ಉತ್ತರಪ್ರದೇಶದಲ್ಲಿ ಮಳೆಯಿಂದ ಸಂಭವಿಸಿದ ಅನಾಹುತದಲ್ಲಿ 18 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ 8 ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಇಬ್ಬರು ಹಾವು ಕಚ್ಚಿ ಸತ್ತಿದ್ದಾರೆ.</p>.<p>ನಿರಂತರ ಮಳೆಯಿಂದ ರಾಜಸ್ಥಾನದ ಅಜ್ಮೇರ್, ಪುಷ್ಕರ್, ಬುಂಡಿ, ಸವಾಯಿ ಮಾಧೋಪುರ ಹಾಗೂ ಪಾಲಿ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ.</p>.<p>ಅಜ್ಮೇರ್ ದರ್ಗಾದ ಸುತ್ತಲೂ ನೀರು ತುಂಬಿದ್ದು, ಹಲವಾರು ಮಂದಿ ನೀರಿನಲ್ಲಿ ಕೊಚ್ಚಿಹೋಗುವ ವೇಳೆ ಸ್ಥಳೀಯರು ರಕ್ಷಿಸಿದರು.</p>.<p>ಜುಲೈ 27ರಿಂದ 28ರವರೆಗೆ ರಾಜಸ್ಥಾನದ ಪೂರ್ವ ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ. ಉತ್ತರಾಖಂಡದ ಕುಮಾಂವ್ ಭಾಗದಲ್ಲಿ ಭಾನುವಾರದವರೆಗೂ ಧಾರಾಕಾರ ಮಳೆಯಾಗಲಿದ್ದು, ‘ರೆಡ್ ಅಲರ್ಟ್’ ಘೋಷಿಸಲಾಗಿದೆ.</p>.<p>ಮಳೆ ಕಾರಣದಿಂದ ಹಿಮಾಲಯದ ಮೇಲ್ಭಾಗದ ಪ್ರದೇಶಗಳಿಗೆ ತೆರಳದಂತೆ ಪ್ರವಾಸಿಗರಿಗೆ ಸೂಚನೆ ನೀಡಲಾಗಿದೆ.</p>.<p><strong>ರಸ್ತೆಗಳು ಬಂದ್:</strong> ಹಿಮಾಚಲ ಪ್ರದೇಶದ ಬಿಲಾಸ್ಪುರ್, ಹಮೀರ್ಪುರ್, ಕಾಂಗ್ರಾ, ಕುಲ್ಲು, ಮಂಡಿ, ಶಿಮ್ಲಾ ಹಾಗೂ ಸೋಲಾನ್ ಜಿಲ್ಲೆಗಳಲ್ಲಿ ಶುಕ್ರವಾರದಿಂದಲೂ ವ್ಯಾಪಕ ಮಳೆಯಾಗುತ್ತಿದೆ. </p>.<p>‘ಮಳೆ ಅನಾಹುತದಿಂದ ರಾಜ್ಯದಲ್ಲಿ 141 ರಸ್ತೆಗಳು ಮುಚ್ಚಿದ್ದು, 58 ನೀರು ಪೂರೈಕೆ ಯೋಜನೆ ಹಾಗೂ 28 ವಿದ್ಯುತ್ ವಿತರಣಾ ಘಟಕಗಳಿಗೆ ತೀವ್ರ ಹಾನಿಯುಂಟಾಗಿದೆ’ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉತ್ತರಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆ ಸಂಬಂಧಿ ಅನಾಹುತಗಳಿಂದ ಎರಡು ದಿನಗಳಲ್ಲಿ 18 ಮಂದಿ ಮೃತಪಟ್ಟಿದ್ದಾರೆ.</p>.<p>ಕೇರಳ, ಉತ್ತರಾಖಂಡ, ಹಿಮಾಚಲಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ಎಚ್ಚರಿಕೆ ನೀಡಿದೆ.</p>.<p>ರಾಜಸ್ಥಾನದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ತಲೆದೋರಿದೆ. ಅರುಣಾಚಲಪ್ರದೇಶ ಹಾಗೂ ಸಿಕ್ಕಿಂನಲ್ಲಿ ಮಳೆಯಿಂದ ಭೂಕುಸಿತ ಸಂಭವಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.</p>.<p>ಜುಲೈ 18ರಿಂದ 19ರವರೆಗೆ ಉತ್ತರಪ್ರದೇಶದಲ್ಲಿ ಮಳೆಯಿಂದ ಸಂಭವಿಸಿದ ಅನಾಹುತದಲ್ಲಿ 18 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ 8 ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಇಬ್ಬರು ಹಾವು ಕಚ್ಚಿ ಸತ್ತಿದ್ದಾರೆ.</p>.<p>ನಿರಂತರ ಮಳೆಯಿಂದ ರಾಜಸ್ಥಾನದ ಅಜ್ಮೇರ್, ಪುಷ್ಕರ್, ಬುಂಡಿ, ಸವಾಯಿ ಮಾಧೋಪುರ ಹಾಗೂ ಪಾಲಿ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ.</p>.<p>ಅಜ್ಮೇರ್ ದರ್ಗಾದ ಸುತ್ತಲೂ ನೀರು ತುಂಬಿದ್ದು, ಹಲವಾರು ಮಂದಿ ನೀರಿನಲ್ಲಿ ಕೊಚ್ಚಿಹೋಗುವ ವೇಳೆ ಸ್ಥಳೀಯರು ರಕ್ಷಿಸಿದರು.</p>.<p>ಜುಲೈ 27ರಿಂದ 28ರವರೆಗೆ ರಾಜಸ್ಥಾನದ ಪೂರ್ವ ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ. ಉತ್ತರಾಖಂಡದ ಕುಮಾಂವ್ ಭಾಗದಲ್ಲಿ ಭಾನುವಾರದವರೆಗೂ ಧಾರಾಕಾರ ಮಳೆಯಾಗಲಿದ್ದು, ‘ರೆಡ್ ಅಲರ್ಟ್’ ಘೋಷಿಸಲಾಗಿದೆ.</p>.<p>ಮಳೆ ಕಾರಣದಿಂದ ಹಿಮಾಲಯದ ಮೇಲ್ಭಾಗದ ಪ್ರದೇಶಗಳಿಗೆ ತೆರಳದಂತೆ ಪ್ರವಾಸಿಗರಿಗೆ ಸೂಚನೆ ನೀಡಲಾಗಿದೆ.</p>.<p><strong>ರಸ್ತೆಗಳು ಬಂದ್:</strong> ಹಿಮಾಚಲ ಪ್ರದೇಶದ ಬಿಲಾಸ್ಪುರ್, ಹಮೀರ್ಪುರ್, ಕಾಂಗ್ರಾ, ಕುಲ್ಲು, ಮಂಡಿ, ಶಿಮ್ಲಾ ಹಾಗೂ ಸೋಲಾನ್ ಜಿಲ್ಲೆಗಳಲ್ಲಿ ಶುಕ್ರವಾರದಿಂದಲೂ ವ್ಯಾಪಕ ಮಳೆಯಾಗುತ್ತಿದೆ. </p>.<p>‘ಮಳೆ ಅನಾಹುತದಿಂದ ರಾಜ್ಯದಲ್ಲಿ 141 ರಸ್ತೆಗಳು ಮುಚ್ಚಿದ್ದು, 58 ನೀರು ಪೂರೈಕೆ ಯೋಜನೆ ಹಾಗೂ 28 ವಿದ್ಯುತ್ ವಿತರಣಾ ಘಟಕಗಳಿಗೆ ತೀವ್ರ ಹಾನಿಯುಂಟಾಗಿದೆ’ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>