<p><strong>ಮುಂಬೈ (ಪಿಟಿಐ)</strong>: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಸಂವಾದ ಕಾರ್ಯಕ್ರಮಕ್ಕೆ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಆಹ್ವಾನಿಸಿದ್ದರಲ್ಲಿ ತಪ್ಪೇನಿದೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ಪ್ರಶ್ನಿಸಿದ್ದಾರೆ.</p>.<p>ಆರ್ಎಸ್ಎಸ್ ನಿಲುವನ್ನು ಸಮರ್ಥಿಸಿಕೊಂಡಿರುವ ಅವರು, ‘ಸಲ್ಮಾನ್ ಖಾನ್ ಒಬ್ಬ ಭಾರತೀಯ ಪ್ರಜೆಯಾಗಿದ್ದು, ದೇಶದ ಸಂಸ್ಕೃತಿ, ಪರಂಪರೆಗಳ ಮೇಲೆ ನಂಬಿಕೆ ಹೊಂದಿದ್ದಾರೆ’ ಎಂದೂ ಪ್ರತಿಪಾದಿಸಿದ್ದಾರೆ.</p>.<p>ಆರ್ಎಸ್ಎಸ್ ಶತಮಾನೋತ್ಸವದ ಅಂಗವಾಗಿ ಮುಂಬೈನಲ್ಲಿ ಭಾಗವತ್ ಅವರೊಂದಿಗಿನ ಸಂವಾದ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು. ಸಲ್ಮಾನ್ ಖಾನ್ ಸೇರಿದಂತೆ ಹಲವು ಬಾಲಿವುಡ್ ತಾರೆಗಳು ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. </p>.<p>ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ್ದ ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್, ‘ಇದು ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ನೀಡುತ್ತಿರುವ ಸ್ವಾಗತವೋ ಅಥವಾ ಸಂಘ ಮತ್ತು ಅದರ ಶಾಖೆಗಳಿಗೆ ಮುಸ್ಲಿಮರನ್ನೂ ಸ್ವಾಗತಿಸಲು ನೀಡುತ್ತಿರುವ ಸಂದೇಶವೋ’ ಎಂದು ಪ್ರಶ್ನಿಸಿದ್ದರು. </p>.<p>ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಶಿಂದೆ, ಸಲ್ಮಾನ್ ಅವರನ್ನು ಆಹ್ವಾನಿಸಿದ್ದರಲ್ಲಿ ತಪ್ಪೇನಿದೆ ಎಂದಿದ್ದಾರೆ. ಜತೆಗೆ ‘ಆರ್ಎಸ್ಎಸ್ ಒಂದು ದೇಶಭಕ್ತ ಸಂಘಟನೆಯಾಗಿದ್ದು, ಅದರ ಕಾರ್ಯಕರ್ತರ ಕಣ ಕಣದಲ್ಲಿಯೂ ದೇಶಭಕ್ತಿ ಇದೆ’ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ (ಪಿಟಿಐ)</strong>: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಸಂವಾದ ಕಾರ್ಯಕ್ರಮಕ್ಕೆ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಆಹ್ವಾನಿಸಿದ್ದರಲ್ಲಿ ತಪ್ಪೇನಿದೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ಪ್ರಶ್ನಿಸಿದ್ದಾರೆ.</p>.<p>ಆರ್ಎಸ್ಎಸ್ ನಿಲುವನ್ನು ಸಮರ್ಥಿಸಿಕೊಂಡಿರುವ ಅವರು, ‘ಸಲ್ಮಾನ್ ಖಾನ್ ಒಬ್ಬ ಭಾರತೀಯ ಪ್ರಜೆಯಾಗಿದ್ದು, ದೇಶದ ಸಂಸ್ಕೃತಿ, ಪರಂಪರೆಗಳ ಮೇಲೆ ನಂಬಿಕೆ ಹೊಂದಿದ್ದಾರೆ’ ಎಂದೂ ಪ್ರತಿಪಾದಿಸಿದ್ದಾರೆ.</p>.<p>ಆರ್ಎಸ್ಎಸ್ ಶತಮಾನೋತ್ಸವದ ಅಂಗವಾಗಿ ಮುಂಬೈನಲ್ಲಿ ಭಾಗವತ್ ಅವರೊಂದಿಗಿನ ಸಂವಾದ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು. ಸಲ್ಮಾನ್ ಖಾನ್ ಸೇರಿದಂತೆ ಹಲವು ಬಾಲಿವುಡ್ ತಾರೆಗಳು ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. </p>.<p>ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ್ದ ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್, ‘ಇದು ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ನೀಡುತ್ತಿರುವ ಸ್ವಾಗತವೋ ಅಥವಾ ಸಂಘ ಮತ್ತು ಅದರ ಶಾಖೆಗಳಿಗೆ ಮುಸ್ಲಿಮರನ್ನೂ ಸ್ವಾಗತಿಸಲು ನೀಡುತ್ತಿರುವ ಸಂದೇಶವೋ’ ಎಂದು ಪ್ರಶ್ನಿಸಿದ್ದರು. </p>.<p>ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಶಿಂದೆ, ಸಲ್ಮಾನ್ ಅವರನ್ನು ಆಹ್ವಾನಿಸಿದ್ದರಲ್ಲಿ ತಪ್ಪೇನಿದೆ ಎಂದಿದ್ದಾರೆ. ಜತೆಗೆ ‘ಆರ್ಎಸ್ಎಸ್ ಒಂದು ದೇಶಭಕ್ತ ಸಂಘಟನೆಯಾಗಿದ್ದು, ಅದರ ಕಾರ್ಯಕರ್ತರ ಕಣ ಕಣದಲ್ಲಿಯೂ ದೇಶಭಕ್ತಿ ಇದೆ’ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>