<p><strong>ಬೆಂಗಳೂರು</strong>: ಮಹಾರಾಷ್ಟ್ರದ ಎಂವಿಎ ಸರ್ಕಾರದ ವಿರುದ್ಧ ಬಂಡಾಯ ಎದ್ದು ದೂರದ ಗುವಾಹಟಿಯಲ್ಲಿ ಹೋಗಿ ಕುಳಿತಿರುವ ಶಿವಸೇನಾ ಶಾಸಕರಿಗೆ ಸಿಎಂ ಉದ್ಧವ್ ಠಾಕ್ರೆ ಅವರು ಒಂದೊಂದಾಗಿ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ.</p>.<p>ಬಂಡಾಯ ಎದ್ದಿರುವ ಶಿವಸೇನಾದ ಎಲ್ಲ ಶಾಸಕರ ಕುಟುಂಬಗಳಿಗೆ ನೀಡಿರುವ ವಿವಿಧ ರೀತಿಯ ಭದ್ರತೆಯನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ.</p>.<p>ಈ ವಿಧ್ಯಮಾನ ಬಂಡಾಯ ಶಾಸಕರನ್ನು ಕೆರಳುವಂತೆ ಮಾಡಿದ್ದು, ಬಂಡಾಯ ಶಾಸಕರ ನಾಯಕ ಏಕನಾಥ ಶಿಂಧೆ ಅವರು, ಸಿಎಂ ಠಾಕ್ರೆ ಅವರಿಗೆ ಪತ್ರ ಬರೆದು ನಮ್ಮ ಕುಟುಂಬಗಳಿಗೆ ಏನಾದರೂ ಆದರೆ ಅದಕ್ಕೆ ಸಂಪೂರ್ಣ ನೀವೇ ಹೊಣೆ ಎಂದು ಎಚ್ಚರಿಸಿದ್ದಾರೆ.</p>.<p>ಶಿವಸೇನಾದ 38 ಶಾಸಕರ ಕುಟುಂಬಗಳಿಗೆ ನೀಡಿರುವ ಭದ್ರತೆಯನ್ನು ಹಿಂದಕ್ಕೆ ಪಡೆಯಲಾಗಿದೆ. ಶಿಂಧೆ ಅವರು ತಮ್ಮ ಪತ್ರವನ್ನು ಡಿಜಿಪಿ ಅವರಿಗೂ ಕಳಿಸಿದ್ದಾರೆ.</p>.<p>ಈ ಬಗ್ಗೆ ಮಾತನಾಡಿರುವ ಶಿವಸೇನಾದ ಸಂಸದ ಸಂಜಯ್ ರಾವುತ್ ಅವರು, ಶಾಸಕರಿಗೆ ಮಾತ್ರ ಭದ್ರತೆ ನೀಡಲಾಗುತ್ತದೆ. ಅವರ ಕುಟುಂಬದ ಭದ್ರತೆ ಸರ್ಕಾರಕ್ಕೆ ಬಿಟ್ಟ ವಿಷಯ ಎಂದು ಹೇಳಿದ್ದಾರೆ.</p>.<p>ಆದರೆ, ಶಿವಸೇನಾದ ಶಾಸಕರ ಕುಟುಂಬಗಳಿಗೆ ನೀಡಲಾದ ಭದ್ರತೆಯನ್ನು ಹಿಂದಕ್ಕೆ ತೆಗೆದುಕೊಳ್ಳಲಾಗಿಲ್ಲ. ಇದೊಂದು ಸುಳ್ಳು ಸುದ್ದಿ ಎಂದು ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ಪಾಟೀಲ್ ಹೇಳಿದ್ದಾರೆ.</p>.<p>ಇನ್ನೊಂದೆಡೆ ಇಂದು ಮಧ್ಯಾಹ್ನ ಸಿಎಂ ಠಾಕ್ರೆ ಅವರು ಶಿವಸೇನಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.</p>.<p><a href="https://www.prajavani.net/india-news/shiv-sena-leader-sanjay-raut-said-taking-action-to-disqualify-the-rebel-mlas-948436.html" itemprop="url">ಬಂಡಾಯ ಶಾಸಕರ ಅನರ್ಹತೆಗೆ ಕ್ರಮ: ಶಿವಸೇನಾ ನಾಯಕ ಸಂಜಯ್ ರಾವುತ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಹಾರಾಷ್ಟ್ರದ ಎಂವಿಎ ಸರ್ಕಾರದ ವಿರುದ್ಧ ಬಂಡಾಯ ಎದ್ದು ದೂರದ ಗುವಾಹಟಿಯಲ್ಲಿ ಹೋಗಿ ಕುಳಿತಿರುವ ಶಿವಸೇನಾ ಶಾಸಕರಿಗೆ ಸಿಎಂ ಉದ್ಧವ್ ಠಾಕ್ರೆ ಅವರು ಒಂದೊಂದಾಗಿ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ.</p>.<p>ಬಂಡಾಯ ಎದ್ದಿರುವ ಶಿವಸೇನಾದ ಎಲ್ಲ ಶಾಸಕರ ಕುಟುಂಬಗಳಿಗೆ ನೀಡಿರುವ ವಿವಿಧ ರೀತಿಯ ಭದ್ರತೆಯನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ.</p>.<p>ಈ ವಿಧ್ಯಮಾನ ಬಂಡಾಯ ಶಾಸಕರನ್ನು ಕೆರಳುವಂತೆ ಮಾಡಿದ್ದು, ಬಂಡಾಯ ಶಾಸಕರ ನಾಯಕ ಏಕನಾಥ ಶಿಂಧೆ ಅವರು, ಸಿಎಂ ಠಾಕ್ರೆ ಅವರಿಗೆ ಪತ್ರ ಬರೆದು ನಮ್ಮ ಕುಟುಂಬಗಳಿಗೆ ಏನಾದರೂ ಆದರೆ ಅದಕ್ಕೆ ಸಂಪೂರ್ಣ ನೀವೇ ಹೊಣೆ ಎಂದು ಎಚ್ಚರಿಸಿದ್ದಾರೆ.</p>.<p>ಶಿವಸೇನಾದ 38 ಶಾಸಕರ ಕುಟುಂಬಗಳಿಗೆ ನೀಡಿರುವ ಭದ್ರತೆಯನ್ನು ಹಿಂದಕ್ಕೆ ಪಡೆಯಲಾಗಿದೆ. ಶಿಂಧೆ ಅವರು ತಮ್ಮ ಪತ್ರವನ್ನು ಡಿಜಿಪಿ ಅವರಿಗೂ ಕಳಿಸಿದ್ದಾರೆ.</p>.<p>ಈ ಬಗ್ಗೆ ಮಾತನಾಡಿರುವ ಶಿವಸೇನಾದ ಸಂಸದ ಸಂಜಯ್ ರಾವುತ್ ಅವರು, ಶಾಸಕರಿಗೆ ಮಾತ್ರ ಭದ್ರತೆ ನೀಡಲಾಗುತ್ತದೆ. ಅವರ ಕುಟುಂಬದ ಭದ್ರತೆ ಸರ್ಕಾರಕ್ಕೆ ಬಿಟ್ಟ ವಿಷಯ ಎಂದು ಹೇಳಿದ್ದಾರೆ.</p>.<p>ಆದರೆ, ಶಿವಸೇನಾದ ಶಾಸಕರ ಕುಟುಂಬಗಳಿಗೆ ನೀಡಲಾದ ಭದ್ರತೆಯನ್ನು ಹಿಂದಕ್ಕೆ ತೆಗೆದುಕೊಳ್ಳಲಾಗಿಲ್ಲ. ಇದೊಂದು ಸುಳ್ಳು ಸುದ್ದಿ ಎಂದು ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ಪಾಟೀಲ್ ಹೇಳಿದ್ದಾರೆ.</p>.<p>ಇನ್ನೊಂದೆಡೆ ಇಂದು ಮಧ್ಯಾಹ್ನ ಸಿಎಂ ಠಾಕ್ರೆ ಅವರು ಶಿವಸೇನಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.</p>.<p><a href="https://www.prajavani.net/india-news/shiv-sena-leader-sanjay-raut-said-taking-action-to-disqualify-the-rebel-mlas-948436.html" itemprop="url">ಬಂಡಾಯ ಶಾಸಕರ ಅನರ್ಹತೆಗೆ ಕ್ರಮ: ಶಿವಸೇನಾ ನಾಯಕ ಸಂಜಯ್ ರಾವುತ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>