<p><strong>ನವದೆಹಲಿ</strong>: ರಾಜಕೀಯ ಪಕ್ಷಗಳಿಗೆ ಚುನಾವಣಾ ಬಾಂಡ್ ರೂಪದಲ್ಲಿ ಸಂದಾಯವಾದ ₹16,518 ಕೋಟಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಕೋರಿ ಸಲ್ಲಿಕೆಯಾದ ಅರ್ಜಿಯ ಮರುಪರಿಶೀಲನೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ</p><p>2024ರ ಆಗಸ್ಟ್ 2ರ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಖೇಮ್ ಸಿಂಗ್ ಭಾಟಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು ವಜಾಗೊಳಿಸಿದೆ.</p><p> ಯೋಜನೆಯಡಿಯಲ್ಲಿ ಪಡೆದ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಈ ಹಿಂದೆಯೂ ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು.</p><p>ಪರಿಶೀಲನಾ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ಮಾರ್ಚ್ 26ರ ತೀರ್ಪಿನಲ್ಲಿ ತಿಳಿಸಲಾಗಿದೆ. ಸುಪ್ರೀಂ ಕೋರ್ಟ್ ಆದೇಶ ಪ್ರತಿ ಇದೀಗ ಲಭ್ಯವಾಗಿದ್ದು, ಭಾಟಿ ಮನವಿಯನ್ನು ಪುರಸ್ಕರಿಸಲು ಕೋರ್ಟ್ ತಿರಸ್ಕರಿಸಿದೆ.</p><p>ಕಳೆದ ವರ್ಷ ಫೆಬ್ರುವರಿ 15ರಂದು ಮಾಜಿ ಸಿಜೆಐ ಡಿ ವೈ ಚಂದ್ರಚೂಡ್ ನೇತೃತ್ವದ ಐದು ನ್ಯಾಯಊರ್ತಿಗಳನ್ಗೊಳಗೊಂಡ ಸಂವಿಧಾನ ಪೀಠವು ಬಿಜೆಪಿ ಸರ್ಕಾರ ಪರಿಚಯಿಸಿದ್ದ ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿತ್ತು.</p><p>ಸುಪ್ರೀಂ ಕೋರ್ಟ್ನ ತೀರ್ಪಿನ ನಂತರ, ಈ ಯೋಜನೆಯಡಿಯಲ್ಲಿ ಅಧಿಕೃತ ಹಣಕಾಸು ಸಂಸ್ಥೆಯಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಚುನಾವಣಾ ಆಯೋಗದೊಂದಿಗೆ ಡೇಟಾವನ್ನು ಹಂಚಿಕೊಂಡಿತ್ತು. ಬಳಿಕ, ಅದನ್ನು ಸಾರ್ವಜನಿಕಗೊಳಿಸಲಾಗಿತ್ತು.</p><p>ರಾಜಕೀಯ ನಿಧಿಯಲ್ಲಿ ಪಾರದರ್ಶಕತೆಯನ್ನು ತರುವ ಪ್ರಯತ್ನಗಳ ಭಾಗವಾಗಿ ನಗದು ದೇಣಿಗೆಗೆ ಪರ್ಯಾಯವಾಗಿ 2018ರ ಜನವರಿ 2ರಂದು ಸರ್ಕಾರವು ಅಧಿಸೂಚನೆ ಮೂಲಕ ಚುನಾವಣಾ ಬಾಂಡ್ ಯೋಜನೆಯನ್ನು ಜಾರಿಗೆ ತಂದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಜಕೀಯ ಪಕ್ಷಗಳಿಗೆ ಚುನಾವಣಾ ಬಾಂಡ್ ರೂಪದಲ್ಲಿ ಸಂದಾಯವಾದ ₹16,518 ಕೋಟಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಕೋರಿ ಸಲ್ಲಿಕೆಯಾದ ಅರ್ಜಿಯ ಮರುಪರಿಶೀಲನೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ</p><p>2024ರ ಆಗಸ್ಟ್ 2ರ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಖೇಮ್ ಸಿಂಗ್ ಭಾಟಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು ವಜಾಗೊಳಿಸಿದೆ.</p><p> ಯೋಜನೆಯಡಿಯಲ್ಲಿ ಪಡೆದ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಈ ಹಿಂದೆಯೂ ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು.</p><p>ಪರಿಶೀಲನಾ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ಮಾರ್ಚ್ 26ರ ತೀರ್ಪಿನಲ್ಲಿ ತಿಳಿಸಲಾಗಿದೆ. ಸುಪ್ರೀಂ ಕೋರ್ಟ್ ಆದೇಶ ಪ್ರತಿ ಇದೀಗ ಲಭ್ಯವಾಗಿದ್ದು, ಭಾಟಿ ಮನವಿಯನ್ನು ಪುರಸ್ಕರಿಸಲು ಕೋರ್ಟ್ ತಿರಸ್ಕರಿಸಿದೆ.</p><p>ಕಳೆದ ವರ್ಷ ಫೆಬ್ರುವರಿ 15ರಂದು ಮಾಜಿ ಸಿಜೆಐ ಡಿ ವೈ ಚಂದ್ರಚೂಡ್ ನೇತೃತ್ವದ ಐದು ನ್ಯಾಯಊರ್ತಿಗಳನ್ಗೊಳಗೊಂಡ ಸಂವಿಧಾನ ಪೀಠವು ಬಿಜೆಪಿ ಸರ್ಕಾರ ಪರಿಚಯಿಸಿದ್ದ ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿತ್ತು.</p><p>ಸುಪ್ರೀಂ ಕೋರ್ಟ್ನ ತೀರ್ಪಿನ ನಂತರ, ಈ ಯೋಜನೆಯಡಿಯಲ್ಲಿ ಅಧಿಕೃತ ಹಣಕಾಸು ಸಂಸ್ಥೆಯಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಚುನಾವಣಾ ಆಯೋಗದೊಂದಿಗೆ ಡೇಟಾವನ್ನು ಹಂಚಿಕೊಂಡಿತ್ತು. ಬಳಿಕ, ಅದನ್ನು ಸಾರ್ವಜನಿಕಗೊಳಿಸಲಾಗಿತ್ತು.</p><p>ರಾಜಕೀಯ ನಿಧಿಯಲ್ಲಿ ಪಾರದರ್ಶಕತೆಯನ್ನು ತರುವ ಪ್ರಯತ್ನಗಳ ಭಾಗವಾಗಿ ನಗದು ದೇಣಿಗೆಗೆ ಪರ್ಯಾಯವಾಗಿ 2018ರ ಜನವರಿ 2ರಂದು ಸರ್ಕಾರವು ಅಧಿಸೂಚನೆ ಮೂಲಕ ಚುನಾವಣಾ ಬಾಂಡ್ ಯೋಜನೆಯನ್ನು ಜಾರಿಗೆ ತಂದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>