<p><strong>ನವದೆಹಲಿ:</strong> ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಿಗೆ ಸಂಬಂಧಿಸಿದ ಕಾನೂನುಗಳೊಂದಿಗೆ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಸಂಬಂಧಿಸಿದ ಕಾನೂನುಗಳನ್ನು ಸಮನ್ವಯಗೊಳಿಸುವ ಸಂಬಂಧ ಜತೆಯಾಗಿ ಕೆಲಸ ಮಾಡಲು ಚುನಾವಣಾ ಆಯೋಗ (ಇ.ಸಿ) ಹಾಗೂ ವಿವಿಧ ರಾಜ್ಯಗಳ ಚುನಾವಣಾ ಆಯೋಗಗಳು (ಎಸ್ಇಸಿ) ನಿರ್ಧರಿಸಿವೆ.</p>.<p>ಮಂಗಳವಾರ ಇಲ್ಲಿ ನಡೆದ ಮುಖ್ಯ ಚುನಾವಣಾ ಆಯುಕ್ತರ ಮತ್ತು ವಿವಿಧ ರಾಜ್ಯಗಳ ಚುನಾವಣಾ ಆಯುಕ್ತರ ದುಂಡು ಮೇಜಿನ ಸಮ್ಮೇಳನದಲ್ಲಿ ಈ ಕುರಿತ ಘೋಷಣೆಯನ್ನು ಅಂಗೀಕರಿಸಲಾಯಿತು.</p>.<p>‘ರಾಷ್ಟ್ರೀಯ ಮತ್ತು ಸಾಂವಿಧಾನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ದೇಶದಾದ್ಯಂತ ಎಲ್ಲಾ ರಾಜ್ಯಗಳ ಚುನಾವಣಾ ಆಯೋಗಗಳ ಜತೆ ಸಮನ್ವಯದಿಂದ ಕೆಲಸ ಮಾಡಲು ನಿರ್ಧರಿಸಲಾಗಿದೆ. ಇಸಿಐನೆಟ್, ಇವಿಎಂಗಳು ಮತ್ತು ಮತದಾರರ ಪಟ್ಟಿಗಳ ಹಂಚಿಕೆಯೂ ಇದರಲ್ಲಿ ಸೇರಿವೆ’ ಎಂದು ಘೋಷಣೆಯಲ್ಲಿ ಹೇಳಲಾಗಿದೆ.</p>.<p>‘ಪಂಚಾಯತ್ಗಳು ಮತ್ತು ಇತರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಂಬಂಧಿಸಿದ ಕಾನೂನುಗಳನ್ನು ಸಂಸತ್ತು ಮತ್ತು ರಾಜ್ಯ ಶಾಸಕಾಂಗಗಳ ಚುನಾವಣೆಗಳಿಗೆ ಸಂಬಂಧಿಸಿದ ಕಾನೂನುಗಳೊಂದಿಗೆ ‘ಸಮನ್ವಯಗೊಳಿಸಲು’ ಇ.ಸಿ ಮತ್ತು ಎಸ್ಇಸಿಗಳು ಒಟ್ಟಾಗಿ ಕೆಲಸ ಮಾಡುತ್ತವೆ’ ಎಂದು ಹೇಳಿದೆ.</p>.<p>ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ಪ್ರಜಾಪ್ರಭುತ್ವದ ಮೂಲಾಧಾರವಾಗಿದೆ ಮತ್ತು ಎಲ್ಲ ಚುನಾವಣೆಗಳನ್ನು ಪಾರದರ್ಶಕವಾಗಿ ನಡೆಸುವುದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುತ್ತದೆ ಎಂಬುದನ್ನು ಸಮ್ಮೇಳನದಲ್ಲಿ ಪಾಲ್ಗೊಂಡ ಎಲ್ಲರೂ ಒಪ್ಪಿಕೊಂಡರು.</p>.<p>27 ವರ್ಷಗಳ ಬಿಡುವಿನ ಬಳಿಕ ನಡೆದ ದುಂಡು ಮೇಜಿನ ಸಮ್ಮೇಳನದಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ‘ಚುನಾವಣಾ ಆಯೋಗ ಮತ್ತು ರಾಜ್ಯ ಚುನಾವಣಾ ಆಯೋಗಗಳು ಮತದಾರರನ್ನು ಗಮನದಲ್ಲಿಟ್ಟುಕೊಂಡು ಒಟ್ಟಾಗಿ ಕೆಲಸ ಮಾಡಬೇಕು’ ಎಂದು ಹೇಳಿದರು.</p>.<p>ರಾಷ್ಟ್ರಪತಿ, ಉಪರಾಷ್ಟ್ರಪತಿ, ಲೋಕಸಭೆ, ರಾಜ್ಯಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಚುನಾವಣೆ ನಡೆಸುವ ಜವಾಬ್ದಾರಿಯು ಚುನಾವಣಾ ಅಯೋಗದ್ದಾಗಿದ್ದರೆ, ರಾಜ್ಯ ಚುನಾವಣಾ ಆಯೋಗಗಳು ಪಂಚಾಯತ್ ಮತ್ತು ಇತರ ಸ್ಥಳೀಯ ಸಂಸ್ಥೆಗಳಿಗೆ ನಡೆಸುತ್ತವೆ.</p>.<p> <strong>‘ಪ್ರತಿ ವರ್ಷ ಸಮ್ಮೇಳನ</strong>’ </p><p>ಚುನಾವಣಾ ಆಯೋಗವು ಪಾಲ್ಗೊಳ್ಳುವ ಅಂತರರಾಷ್ಟ್ರೀಯ ಸಮ್ಮೇಳನಗಳಲ್ಲಿ ಎಸ್ಇಸಿಗಳೂ ಪಾಲ್ಗೊಳ್ಳಬೇಕು ಎಂದು ಮುಖ್ಯ ಚುನಾವಣಾ ಆಯುಕ್ತರು ಮನವಿ ಮಾಡಿದರು. ಇಂತಹ ರಾಷ್ಟ್ರೀಯ ದುಂಡುಮೇಜಿನ ಸಮ್ಮೇಳನವನ್ನು ಪ್ರತಿ ವರ್ಷ ನಡೆಸುವ ಪ್ರಸ್ತಾಪವನ್ನೂ ಅವರು ಮುಂದಿಟ್ಟರು. ಈ ಸಮ್ಮೇಳನದಲ್ಲಿ ಎಸ್ಇಸಿಗಳು ನೀಡಿರುವ ಎಲ್ಲಾ ಸಲಹೆಗಳನ್ನು ಆಯೋಗದ ಕಾನೂನು ಮತ್ತು ತಾಂತ್ರಿಕ ಅಧಿಕಾರಿಗಳ ಜಂಟಿ ತಂಡವು ವಿವರವಾಗಿ ಅಧ್ಯಯನ ನಡೆಸಲಿದೆ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಿಗೆ ಸಂಬಂಧಿಸಿದ ಕಾನೂನುಗಳೊಂದಿಗೆ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಸಂಬಂಧಿಸಿದ ಕಾನೂನುಗಳನ್ನು ಸಮನ್ವಯಗೊಳಿಸುವ ಸಂಬಂಧ ಜತೆಯಾಗಿ ಕೆಲಸ ಮಾಡಲು ಚುನಾವಣಾ ಆಯೋಗ (ಇ.ಸಿ) ಹಾಗೂ ವಿವಿಧ ರಾಜ್ಯಗಳ ಚುನಾವಣಾ ಆಯೋಗಗಳು (ಎಸ್ಇಸಿ) ನಿರ್ಧರಿಸಿವೆ.</p>.<p>ಮಂಗಳವಾರ ಇಲ್ಲಿ ನಡೆದ ಮುಖ್ಯ ಚುನಾವಣಾ ಆಯುಕ್ತರ ಮತ್ತು ವಿವಿಧ ರಾಜ್ಯಗಳ ಚುನಾವಣಾ ಆಯುಕ್ತರ ದುಂಡು ಮೇಜಿನ ಸಮ್ಮೇಳನದಲ್ಲಿ ಈ ಕುರಿತ ಘೋಷಣೆಯನ್ನು ಅಂಗೀಕರಿಸಲಾಯಿತು.</p>.<p>‘ರಾಷ್ಟ್ರೀಯ ಮತ್ತು ಸಾಂವಿಧಾನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ದೇಶದಾದ್ಯಂತ ಎಲ್ಲಾ ರಾಜ್ಯಗಳ ಚುನಾವಣಾ ಆಯೋಗಗಳ ಜತೆ ಸಮನ್ವಯದಿಂದ ಕೆಲಸ ಮಾಡಲು ನಿರ್ಧರಿಸಲಾಗಿದೆ. ಇಸಿಐನೆಟ್, ಇವಿಎಂಗಳು ಮತ್ತು ಮತದಾರರ ಪಟ್ಟಿಗಳ ಹಂಚಿಕೆಯೂ ಇದರಲ್ಲಿ ಸೇರಿವೆ’ ಎಂದು ಘೋಷಣೆಯಲ್ಲಿ ಹೇಳಲಾಗಿದೆ.</p>.<p>‘ಪಂಚಾಯತ್ಗಳು ಮತ್ತು ಇತರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಂಬಂಧಿಸಿದ ಕಾನೂನುಗಳನ್ನು ಸಂಸತ್ತು ಮತ್ತು ರಾಜ್ಯ ಶಾಸಕಾಂಗಗಳ ಚುನಾವಣೆಗಳಿಗೆ ಸಂಬಂಧಿಸಿದ ಕಾನೂನುಗಳೊಂದಿಗೆ ‘ಸಮನ್ವಯಗೊಳಿಸಲು’ ಇ.ಸಿ ಮತ್ತು ಎಸ್ಇಸಿಗಳು ಒಟ್ಟಾಗಿ ಕೆಲಸ ಮಾಡುತ್ತವೆ’ ಎಂದು ಹೇಳಿದೆ.</p>.<p>ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ಪ್ರಜಾಪ್ರಭುತ್ವದ ಮೂಲಾಧಾರವಾಗಿದೆ ಮತ್ತು ಎಲ್ಲ ಚುನಾವಣೆಗಳನ್ನು ಪಾರದರ್ಶಕವಾಗಿ ನಡೆಸುವುದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುತ್ತದೆ ಎಂಬುದನ್ನು ಸಮ್ಮೇಳನದಲ್ಲಿ ಪಾಲ್ಗೊಂಡ ಎಲ್ಲರೂ ಒಪ್ಪಿಕೊಂಡರು.</p>.<p>27 ವರ್ಷಗಳ ಬಿಡುವಿನ ಬಳಿಕ ನಡೆದ ದುಂಡು ಮೇಜಿನ ಸಮ್ಮೇಳನದಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ‘ಚುನಾವಣಾ ಆಯೋಗ ಮತ್ತು ರಾಜ್ಯ ಚುನಾವಣಾ ಆಯೋಗಗಳು ಮತದಾರರನ್ನು ಗಮನದಲ್ಲಿಟ್ಟುಕೊಂಡು ಒಟ್ಟಾಗಿ ಕೆಲಸ ಮಾಡಬೇಕು’ ಎಂದು ಹೇಳಿದರು.</p>.<p>ರಾಷ್ಟ್ರಪತಿ, ಉಪರಾಷ್ಟ್ರಪತಿ, ಲೋಕಸಭೆ, ರಾಜ್ಯಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಚುನಾವಣೆ ನಡೆಸುವ ಜವಾಬ್ದಾರಿಯು ಚುನಾವಣಾ ಅಯೋಗದ್ದಾಗಿದ್ದರೆ, ರಾಜ್ಯ ಚುನಾವಣಾ ಆಯೋಗಗಳು ಪಂಚಾಯತ್ ಮತ್ತು ಇತರ ಸ್ಥಳೀಯ ಸಂಸ್ಥೆಗಳಿಗೆ ನಡೆಸುತ್ತವೆ.</p>.<p> <strong>‘ಪ್ರತಿ ವರ್ಷ ಸಮ್ಮೇಳನ</strong>’ </p><p>ಚುನಾವಣಾ ಆಯೋಗವು ಪಾಲ್ಗೊಳ್ಳುವ ಅಂತರರಾಷ್ಟ್ರೀಯ ಸಮ್ಮೇಳನಗಳಲ್ಲಿ ಎಸ್ಇಸಿಗಳೂ ಪಾಲ್ಗೊಳ್ಳಬೇಕು ಎಂದು ಮುಖ್ಯ ಚುನಾವಣಾ ಆಯುಕ್ತರು ಮನವಿ ಮಾಡಿದರು. ಇಂತಹ ರಾಷ್ಟ್ರೀಯ ದುಂಡುಮೇಜಿನ ಸಮ್ಮೇಳನವನ್ನು ಪ್ರತಿ ವರ್ಷ ನಡೆಸುವ ಪ್ರಸ್ತಾಪವನ್ನೂ ಅವರು ಮುಂದಿಟ್ಟರು. ಈ ಸಮ್ಮೇಳನದಲ್ಲಿ ಎಸ್ಇಸಿಗಳು ನೀಡಿರುವ ಎಲ್ಲಾ ಸಲಹೆಗಳನ್ನು ಆಯೋಗದ ಕಾನೂನು ಮತ್ತು ತಾಂತ್ರಿಕ ಅಧಿಕಾರಿಗಳ ಜಂಟಿ ತಂಡವು ವಿವರವಾಗಿ ಅಧ್ಯಯನ ನಡೆಸಲಿದೆ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>