<p><strong>ನವದೆಹಲಿ:</strong> ಈ ತಿಂಗಳು ನಡೆಯುವ ಐದು ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಏಪ್ರಿಲ್ 9ರ ಬೆಳಿಗ್ಗೆ 7ಗಂಟೆಯಿಂದ ಏಪ್ರಿಲ್ 29ರ ಸಂಜೆ 6.30ರ ವರೆಗೆ ಮತಗಟ್ಟೆ ಸಮೀಕ್ಷೆಗಳನ್ನು ನಡೆಸುವಂತಿಲ್ಲ, ಪ್ರಸಾರ ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.</p>.Kerala Election:ಪೋಲ್ ಟ್ರ್ಯಾಕರ್ ಸಮೀಕ್ಷೆ ಪ್ರಕಾರ ಕೇರಳದಲ್ಲಿ ಗೆಲುವು ಯಾರಿಗೆ?.<p>ಈ ಅವಧಿಯಲ್ಲಿ ಮತಗಟ್ಟೆ ಸಮೀಕ್ಷೆಗಳನ್ನು ನಡೆಸಿ, ಪ್ರಸಾರ ಮಾಡುವುದು 1951ರ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 126ಎ ಉಲ್ಲಂಘನೆ ಎಂದು ಎಚ್ಚರಿಸಿರುವ ಅದು, ದಂಡ ಹಾಗೂ ಎರಡು ವರ್ಷಗಳ ಜೈಲು ಶಿಕ್ಷೆ ಎದುರಿಸಬೇಕಾದ ಪ್ರಕರಣ ಎಂದಿದೆ.</p><p>ಕೇರಳ, ಅಸ್ಸಾಂ ಹಾಗೂ ಪುದುಚೇರಿಯಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ತಮಿಳುನಾಡಿನಲ್ಲಿ ಮತದಾನ ದಿನಾಂಕ ಏಪ್ರಿಲ್ 23ರಂದು ನಿಗದಿಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಹಾಗೂ 29ರಂದು ಮತದಾನ ನಡೆಯಲಿದೆ.</p><p>ಇಂದು (ಮಂಗಳವಾರ) ಸಂಜೆ 6 ಗಂಟೆಗೆ ಕೇರಳ ಹಾಗೂ ಅಸ್ಸಾಂನಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಅಸ್ಸಾಂನಲ್ಲಿ ಸಂಜೆ 5ಕ್ಕೆ ಬಹಿರಂಗ ಪ್ರಚಾರ ಮುಗಿಸಬೇಕು.</p> .ನಂಜನಗೂಡು–ನಿಲಂಬೂರು ಮಾರ್ಗಕ್ಕೆ ಅಂತಿಮ ಸ್ಥಳ ಸಮೀಕ್ಷೆ: ವೈಷ್ಣವ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಈ ತಿಂಗಳು ನಡೆಯುವ ಐದು ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಏಪ್ರಿಲ್ 9ರ ಬೆಳಿಗ್ಗೆ 7ಗಂಟೆಯಿಂದ ಏಪ್ರಿಲ್ 29ರ ಸಂಜೆ 6.30ರ ವರೆಗೆ ಮತಗಟ್ಟೆ ಸಮೀಕ್ಷೆಗಳನ್ನು ನಡೆಸುವಂತಿಲ್ಲ, ಪ್ರಸಾರ ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.</p>.Kerala Election:ಪೋಲ್ ಟ್ರ್ಯಾಕರ್ ಸಮೀಕ್ಷೆ ಪ್ರಕಾರ ಕೇರಳದಲ್ಲಿ ಗೆಲುವು ಯಾರಿಗೆ?.<p>ಈ ಅವಧಿಯಲ್ಲಿ ಮತಗಟ್ಟೆ ಸಮೀಕ್ಷೆಗಳನ್ನು ನಡೆಸಿ, ಪ್ರಸಾರ ಮಾಡುವುದು 1951ರ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 126ಎ ಉಲ್ಲಂಘನೆ ಎಂದು ಎಚ್ಚರಿಸಿರುವ ಅದು, ದಂಡ ಹಾಗೂ ಎರಡು ವರ್ಷಗಳ ಜೈಲು ಶಿಕ್ಷೆ ಎದುರಿಸಬೇಕಾದ ಪ್ರಕರಣ ಎಂದಿದೆ.</p><p>ಕೇರಳ, ಅಸ್ಸಾಂ ಹಾಗೂ ಪುದುಚೇರಿಯಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ತಮಿಳುನಾಡಿನಲ್ಲಿ ಮತದಾನ ದಿನಾಂಕ ಏಪ್ರಿಲ್ 23ರಂದು ನಿಗದಿಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಹಾಗೂ 29ರಂದು ಮತದಾನ ನಡೆಯಲಿದೆ.</p><p>ಇಂದು (ಮಂಗಳವಾರ) ಸಂಜೆ 6 ಗಂಟೆಗೆ ಕೇರಳ ಹಾಗೂ ಅಸ್ಸಾಂನಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಅಸ್ಸಾಂನಲ್ಲಿ ಸಂಜೆ 5ಕ್ಕೆ ಬಹಿರಂಗ ಪ್ರಚಾರ ಮುಗಿಸಬೇಕು.</p> .ನಂಜನಗೂಡು–ನಿಲಂಬೂರು ಮಾರ್ಗಕ್ಕೆ ಅಂತಿಮ ಸ್ಥಳ ಸಮೀಕ್ಷೆ: ವೈಷ್ಣವ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>