<p><strong>ನವದೆಹಲಿ</strong>: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಹಲವು ಮಂದಿ ಮೃತಪಟ್ಟಿದ್ದು, 'ಚುನಾವಣಾ ಆಯೋಗದ ಮುಖ್ಯಸ್ಥರ ಕೈಗಳಿಗೆ ರಕ್ತದ ಕಲೆ ಅಂಟಿದೆ' ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆರೋಪಿಸಿದೆ.</p><p>ರಾಜ್ಯಸಭಾ ಸದಸ್ಯ ಡೆರೆಕ್ ಒಬ್ರಯಾನ್ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಿಯೋಗವು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ ) ಜ್ಞಾನೇಶ್ ಕುಮಾರ್ ಅವರನ್ನು ಭೇಟಿ ಮಾಡಿದೆ.</p>.ಜಿಎಸ್ಟಿ ಸಿನಿಮಾ ವಿಮರ್ಶೆ: ಅನ್ಲಕ್ಕಿ ‘ಲಕ್ಕಿ’ಯ ಆತ್ಮಕಥೆ.ಗಾಳಿ, ನೀರು ಶುದ್ಧೀಕರಣ ಯಂತ್ರಗಳ ಶೇ18ರಷ್ಟು ಜಿಎಸ್ಟಿ ತೆಗೆಯಿರಿ: ಕೇಜ್ರಿವಾಲ್ .<p>ಒಬ್ರಯಾನ್ ಮಾತನಾಡಿ, ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಅಧಿಕಾರಿಗಳು ಸೇರಿದಂತೆ 40 ಮಂದಿ ಬಿಎಲ್ಒಗಳು ಮೃತಪಟ್ಟಿದ್ದಾರೆ. ಈ ಸಂಬಂಧ ಜ್ಞಾನೇಶ್ ಕುಮಾರ್ ಅವರಿಗೆ ಪ್ರಮುಖವಾಗಿ ಐದು ಪ್ರಶ್ನೆಗಳನ್ನು ಕೇಳಿದ್ದೇವೆ. ಆದರೆ ಅವರು ಯಾವುದೇ ಉತ್ತರ ಕೊಡಲಿಲ್ಲ. ನಿಮ್ಮ ಕೈಗಳಿಗೆ ರಕ್ತದ ಕಲೆ ಅಂಟಿದೆ ಎನ್ನುವ ಮೂಲಕ ನಾವು ಚರ್ಚೆ ಪ್ರಾರಂಭಿಸಿದ್ದೆವು. ಆ ಬಳಿಕ ನಮ್ಮ ಬೇಡಿಕೆಗಳನ್ನು ತಿಳಿಸಿದ್ದೇವೆ ಎಂದು ಹೇಳಿದ್ದಾರೆ.</p><p>ಟಿಎಂಸಿಯು ಎಸ್ಐಆರ್ ಪರಿಕಲ್ಪನೆಯನ್ನು ವಿರೋಧಿಸುತ್ತಿಲ್ಲ. ಆದರೆ ಸಿಇಸಿ ಮತ್ತು ಇಸಿ ಕೈಗೊಂಡ ಕಾರ್ಯ ವಿಧಾನವನ್ನು ಬಲವಾಗಿ ವಿರೋಧಿಸುತ್ತದೆ ಎಂದು ಒಬ್ರಯಾನ್ ತಿಳಿಸಿದ್ದಾರೆ.</p>.ಚಿರತೆ ಸೆರೆ ಹಿಡಿಯಲು ಹಾಕಿದ್ದ ಬೋನಿನಲ್ಲಿ ಸಿಕ್ಕಿಬಿದ್ದ ವ್ಯಕ್ತಿ! .ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ. <p>ಎಸ್ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮೃತಪಟ್ಟ 40 ಮಂದಿಯ ಪಟ್ಟಿಯನ್ನು ಆಯುಕ್ತರಿಗೆ ನೀಡಲಾಗಿದೆ. ಆದರೆ ಆಯೋಗವು ಈ ಆರೋಪಗಳನ್ನು ತಳ್ಳಿಹಾಕಿದೆ ಎಂದು ಮಹುವಾ ಮೊಯಿತ್ರಾ ಹೇಳಿದ್ದಾರೆ.</p><p>ಪಶ್ಚಿಮ ಬಂಗಾಳ ಸೇರಿದಂತೆ 9 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್ಐಆರ್ ಪ್ರಕ್ರಿಯೆ ನಡೆಯುತ್ತಿದೆ. </p> .ವಿಷವಾಗುತ್ತಿದೆ ಎದೆಹಾಲು: ಇದಕ್ಕೆ ಕಾರಣಗಳೇನು? ಇಲ್ಲಿದೆ ಮಾಹಿತಿ.ಚಿನ್ನದ ವ್ಯಾಪಾರಿಗೆ ₹ 5 ಕೋಟಿ ಬೇಡಿಕೆ: ಆರೋಪಿ ಬಂಧನ.Modi in Udupi: ಮೋದಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ ಸನ್ಮಾನ.666 ಆಪರೇಷನ್ ಡ್ರೀಮ್ ಥಿಯೇಟರ್: ಚಿತ್ರೀಕರಣದ ಹಿಂದಿನ ಟಾಪ್ ಚಿತ್ರಗಳು ಇಲ್ಲಿವೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಹಲವು ಮಂದಿ ಮೃತಪಟ್ಟಿದ್ದು, 'ಚುನಾವಣಾ ಆಯೋಗದ ಮುಖ್ಯಸ್ಥರ ಕೈಗಳಿಗೆ ರಕ್ತದ ಕಲೆ ಅಂಟಿದೆ' ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆರೋಪಿಸಿದೆ.</p><p>ರಾಜ್ಯಸಭಾ ಸದಸ್ಯ ಡೆರೆಕ್ ಒಬ್ರಯಾನ್ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಿಯೋಗವು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ ) ಜ್ಞಾನೇಶ್ ಕುಮಾರ್ ಅವರನ್ನು ಭೇಟಿ ಮಾಡಿದೆ.</p>.ಜಿಎಸ್ಟಿ ಸಿನಿಮಾ ವಿಮರ್ಶೆ: ಅನ್ಲಕ್ಕಿ ‘ಲಕ್ಕಿ’ಯ ಆತ್ಮಕಥೆ.ಗಾಳಿ, ನೀರು ಶುದ್ಧೀಕರಣ ಯಂತ್ರಗಳ ಶೇ18ರಷ್ಟು ಜಿಎಸ್ಟಿ ತೆಗೆಯಿರಿ: ಕೇಜ್ರಿವಾಲ್ .<p>ಒಬ್ರಯಾನ್ ಮಾತನಾಡಿ, ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಅಧಿಕಾರಿಗಳು ಸೇರಿದಂತೆ 40 ಮಂದಿ ಬಿಎಲ್ಒಗಳು ಮೃತಪಟ್ಟಿದ್ದಾರೆ. ಈ ಸಂಬಂಧ ಜ್ಞಾನೇಶ್ ಕುಮಾರ್ ಅವರಿಗೆ ಪ್ರಮುಖವಾಗಿ ಐದು ಪ್ರಶ್ನೆಗಳನ್ನು ಕೇಳಿದ್ದೇವೆ. ಆದರೆ ಅವರು ಯಾವುದೇ ಉತ್ತರ ಕೊಡಲಿಲ್ಲ. ನಿಮ್ಮ ಕೈಗಳಿಗೆ ರಕ್ತದ ಕಲೆ ಅಂಟಿದೆ ಎನ್ನುವ ಮೂಲಕ ನಾವು ಚರ್ಚೆ ಪ್ರಾರಂಭಿಸಿದ್ದೆವು. ಆ ಬಳಿಕ ನಮ್ಮ ಬೇಡಿಕೆಗಳನ್ನು ತಿಳಿಸಿದ್ದೇವೆ ಎಂದು ಹೇಳಿದ್ದಾರೆ.</p><p>ಟಿಎಂಸಿಯು ಎಸ್ಐಆರ್ ಪರಿಕಲ್ಪನೆಯನ್ನು ವಿರೋಧಿಸುತ್ತಿಲ್ಲ. ಆದರೆ ಸಿಇಸಿ ಮತ್ತು ಇಸಿ ಕೈಗೊಂಡ ಕಾರ್ಯ ವಿಧಾನವನ್ನು ಬಲವಾಗಿ ವಿರೋಧಿಸುತ್ತದೆ ಎಂದು ಒಬ್ರಯಾನ್ ತಿಳಿಸಿದ್ದಾರೆ.</p>.ಚಿರತೆ ಸೆರೆ ಹಿಡಿಯಲು ಹಾಕಿದ್ದ ಬೋನಿನಲ್ಲಿ ಸಿಕ್ಕಿಬಿದ್ದ ವ್ಯಕ್ತಿ! .ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ. <p>ಎಸ್ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮೃತಪಟ್ಟ 40 ಮಂದಿಯ ಪಟ್ಟಿಯನ್ನು ಆಯುಕ್ತರಿಗೆ ನೀಡಲಾಗಿದೆ. ಆದರೆ ಆಯೋಗವು ಈ ಆರೋಪಗಳನ್ನು ತಳ್ಳಿಹಾಕಿದೆ ಎಂದು ಮಹುವಾ ಮೊಯಿತ್ರಾ ಹೇಳಿದ್ದಾರೆ.</p><p>ಪಶ್ಚಿಮ ಬಂಗಾಳ ಸೇರಿದಂತೆ 9 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್ಐಆರ್ ಪ್ರಕ್ರಿಯೆ ನಡೆಯುತ್ತಿದೆ. </p> .ವಿಷವಾಗುತ್ತಿದೆ ಎದೆಹಾಲು: ಇದಕ್ಕೆ ಕಾರಣಗಳೇನು? ಇಲ್ಲಿದೆ ಮಾಹಿತಿ.ಚಿನ್ನದ ವ್ಯಾಪಾರಿಗೆ ₹ 5 ಕೋಟಿ ಬೇಡಿಕೆ: ಆರೋಪಿ ಬಂಧನ.Modi in Udupi: ಮೋದಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ ಸನ್ಮಾನ.666 ಆಪರೇಷನ್ ಡ್ರೀಮ್ ಥಿಯೇಟರ್: ಚಿತ್ರೀಕರಣದ ಹಿಂದಿನ ಟಾಪ್ ಚಿತ್ರಗಳು ಇಲ್ಲಿವೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>