<p><strong>ನವದೆಹಲಿ (ಪಿಟಿಐ</strong>): ‘ಮತದಾರರನ್ನು ನೋಂದಣಿ ಮಾಡುವ ಉದ್ದೇಶದಿಂದ ಮಾತ್ರ ಅವರ ಪೌರತ್ವವನ್ನು ನಿರ್ಧರಿಸಬಹುದು. ಯಾರನ್ನಾದರೂ ಗಡಿಪಾರು ಮಾಡಬಹುದೇ ಎಂಬುದನ್ನು ನಾವು ನಿರ್ಧರಿಸಲು ಸಾಧ್ಯವಿಲ್ಲ’ ಎಂದು ಚುನಾವಣಾ ಆಯೋಗವು (ಇ.ಸಿ) ಗುರುವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.</p>.<p>ಚುನಾವಣಾ ಆಯೋಗದ ಪರ ಹಾಜರಾದ ಹಿರಿಯ ವಕೀಲ ರಾಕೇಶ್ ದ್ವಿವೇದಿ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರ ಪೀಠಕ್ಕೆ ಈ ವಿಷಯ ತಿಳಿಸಿದರು.</p>.<p>ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಅಧಿಕಾರದ ವ್ಯಾಪ್ತಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ಅಂತಿಮ ವಿಚಾರಣೆಯನ್ನು ಪೀಠವು ಗುರುವಾರ ಪುನರಾರಂಭಿಸಿದೆ.</p>.<p>ಆಯೋಗ ನಡೆಸುತ್ತಿರುವ ಎಸ್ಐಆರ್ ಪ್ರಕ್ರಿಯೆಯನ್ನು ಸಮರ್ಥಿಸಲು ದ್ವಿವೇದಿ ಅವರು ವಿಚಾರಣೆಯ ಆರಂಭದಲ್ಲಿ ಸಂವಿಧಾನದ 326ನೇ ವಿಧಿಯನ್ನು ಉಲ್ಲೇಖಿಸಿದರು. ಚುನಾವಣೆಯು ವಯಸ್ಕರ ಮತಾಧಿಕಾರವನ್ನು ಆಧರಿಸಿರಬೇಕು ಎಂಬುದನ್ನು 326ನೇ ವಿಧಿಯು ಸಾರುತ್ತದೆ ಎಂದರು.</p>.<p>‘ವಯಸ್ಕರ ಮತದಾನದ ಹಕ್ಕು ಮೂರು ವಿಭಿನ್ನ ಅಂಶಗಳನ್ನು ಒಳಗೊಂಡಿದೆ. ಮತದಾರರ ನೋಂದಣಿ ಹಂತದಲ್ಲಿ ಇವೆಲ್ಲವನ್ನೂ ದೃಢಪಡಿಸಬೇಕು. ಈ ಮೂರೂ ಷರತ್ತುಗಳನ್ನು ಪೂರೈಸದ ಹೊರತು, ಒಬ್ಬರು ಮತದಾರರಾಗಿ ನೋಂದಾಯಿಸಲು ಅರ್ಹರಾಗಿರುವುದಿಲ್ಲ’ ಎಂದು ದ್ವಿವೇದಿ ವಾದಿಸಿದರು.</p>.<p>ಒಬ್ಬ ವ್ಯಕ್ತಿಯ ಪೌರತ್ವ ದೃಢಪಡದಿದ್ದರೂ ಆತನನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿದರೆ, ಅದು ಸಂವಿಧಾನದ ಆಶಯಕ್ಕೆ ವಿರುದ್ಧವಾಗುತ್ತದೆ ಎಂದು ಹೇಳಿದರು. </p>.<p>ಅರ್ಜಿದಾರರಲ್ಲಿ ಒಬ್ಬರಾದ ‘ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್’ (ಎಡಿಆರ್) ಪರ ಹಾಜರಾದ ವಕೀಲ ಪ್ರಶಾಂತ್ ಭೂಷಣ್, ‘ಮತದಾನಕ್ಕೆ ಪೌರತ್ವವು ಪೂರ್ವಭಾವಿ ಷರತ್ತು ಎಂಬುದು ನಿರ್ವಿವಾದ. ಆದರೆ, ಪೌರತ್ವವನ್ನು ನಿರ್ಧರಿಸುವ ಅಧಿಕಾರ ಚುನಾವಣಾ ಆಯೋಗಕ್ಕೆ ಇದೆಯೇ ಎಂಬುದು ಪ್ರಮುಖ ಪ್ರಶ್ನೆಯಾಗಿದೆ’ ಎಂದರು.</p>.<p>ಅದಕ್ಕೆ ಸಿಜೆಐ, ‘ನಾಗರಿಕರನ್ನು ಗುರುತಿಸುವುದಷ್ಟೇ ಆಯೋಗದ ಕೆಲಸ; ಪೌರತ್ವವನ್ನು ಅದರ ವಿಶಾಲ ಅರ್ಥದಲ್ಲಿ ನಿರ್ಣಯಿಸುವುದು ಅಲ್ಲ’ ಎಂದರು. </p>.<p>‘ಈ ವಿಚಾರದಲ್ಲಿ ಚುನಾವಣಾ ಆಯೋಗವು ಸೀಮಿತ ಅಧಿಕಾರವನ್ನು ಹೊಂದಿದೆ. ಮತದಾರರಾಗಿ ನೋಂದಣಿ ಮಾಡಿಕೊಳ್ಳಲು ಮಾತ್ರ ಆಯೋಗವು ಪೌರತ್ವವನ್ನು ನಿರ್ಧರಿಸುತ್ತದೆ. ನಾವು ಯಾರನ್ನೂ ಗಡಿಪಾರು ಮಾಡಲು ಸಾಧ್ಯವಿಲ್ಲ ಅಥವಾ ಭಾರತದಲ್ಲಿ ನೆಲಸಲು ವ್ಯಕ್ತಿಗೆ ವೀಸಾ ಇದೆಯೇ ಎಂಬುದನ್ನು ನಿರ್ಧರಿಸಲು ಸಾಧ್ಯವಿಲ್ಲ. ಆ ವಿಷಯ ನಮ್ಮ ವ್ಯಾಪ್ತಿಗೆ ಬರುವುದಿಲ್ಲ’ ಎಂದು ದ್ವಿವೇದಿ ಸ್ಪಷ್ಟಪಡಿಸಿದರು.</p>.<p>ಚುನಾವಣಾ ಆಯೋಗವು ಪೌರತ್ವವನ್ನು ನೀಡುವ ಪ್ರಾಧಿಕಾರವಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲದಿದ್ದರೂ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಕೊಳ್ಳುವ ವ್ಯಕ್ತಿ ನಿಜವಾಗಿಯೂ ಈ ದೇಶದ ಪ್ರಜೆಯೇ ಎಂಬುದನ್ನು ಪರಿಶೀಲಿಸುವ ಅಧಿಕಾರ ಹೊಂದಿದೆ ಎಂದು ಹೇಳಿದ ಪೀಠ, ವಿಚಾರಣೆಯನ್ನು ಜನವರಿ 20ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ</strong>): ‘ಮತದಾರರನ್ನು ನೋಂದಣಿ ಮಾಡುವ ಉದ್ದೇಶದಿಂದ ಮಾತ್ರ ಅವರ ಪೌರತ್ವವನ್ನು ನಿರ್ಧರಿಸಬಹುದು. ಯಾರನ್ನಾದರೂ ಗಡಿಪಾರು ಮಾಡಬಹುದೇ ಎಂಬುದನ್ನು ನಾವು ನಿರ್ಧರಿಸಲು ಸಾಧ್ಯವಿಲ್ಲ’ ಎಂದು ಚುನಾವಣಾ ಆಯೋಗವು (ಇ.ಸಿ) ಗುರುವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.</p>.<p>ಚುನಾವಣಾ ಆಯೋಗದ ಪರ ಹಾಜರಾದ ಹಿರಿಯ ವಕೀಲ ರಾಕೇಶ್ ದ್ವಿವೇದಿ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರ ಪೀಠಕ್ಕೆ ಈ ವಿಷಯ ತಿಳಿಸಿದರು.</p>.<p>ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಅಧಿಕಾರದ ವ್ಯಾಪ್ತಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ಅಂತಿಮ ವಿಚಾರಣೆಯನ್ನು ಪೀಠವು ಗುರುವಾರ ಪುನರಾರಂಭಿಸಿದೆ.</p>.<p>ಆಯೋಗ ನಡೆಸುತ್ತಿರುವ ಎಸ್ಐಆರ್ ಪ್ರಕ್ರಿಯೆಯನ್ನು ಸಮರ್ಥಿಸಲು ದ್ವಿವೇದಿ ಅವರು ವಿಚಾರಣೆಯ ಆರಂಭದಲ್ಲಿ ಸಂವಿಧಾನದ 326ನೇ ವಿಧಿಯನ್ನು ಉಲ್ಲೇಖಿಸಿದರು. ಚುನಾವಣೆಯು ವಯಸ್ಕರ ಮತಾಧಿಕಾರವನ್ನು ಆಧರಿಸಿರಬೇಕು ಎಂಬುದನ್ನು 326ನೇ ವಿಧಿಯು ಸಾರುತ್ತದೆ ಎಂದರು.</p>.<p>‘ವಯಸ್ಕರ ಮತದಾನದ ಹಕ್ಕು ಮೂರು ವಿಭಿನ್ನ ಅಂಶಗಳನ್ನು ಒಳಗೊಂಡಿದೆ. ಮತದಾರರ ನೋಂದಣಿ ಹಂತದಲ್ಲಿ ಇವೆಲ್ಲವನ್ನೂ ದೃಢಪಡಿಸಬೇಕು. ಈ ಮೂರೂ ಷರತ್ತುಗಳನ್ನು ಪೂರೈಸದ ಹೊರತು, ಒಬ್ಬರು ಮತದಾರರಾಗಿ ನೋಂದಾಯಿಸಲು ಅರ್ಹರಾಗಿರುವುದಿಲ್ಲ’ ಎಂದು ದ್ವಿವೇದಿ ವಾದಿಸಿದರು.</p>.<p>ಒಬ್ಬ ವ್ಯಕ್ತಿಯ ಪೌರತ್ವ ದೃಢಪಡದಿದ್ದರೂ ಆತನನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿದರೆ, ಅದು ಸಂವಿಧಾನದ ಆಶಯಕ್ಕೆ ವಿರುದ್ಧವಾಗುತ್ತದೆ ಎಂದು ಹೇಳಿದರು. </p>.<p>ಅರ್ಜಿದಾರರಲ್ಲಿ ಒಬ್ಬರಾದ ‘ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್’ (ಎಡಿಆರ್) ಪರ ಹಾಜರಾದ ವಕೀಲ ಪ್ರಶಾಂತ್ ಭೂಷಣ್, ‘ಮತದಾನಕ್ಕೆ ಪೌರತ್ವವು ಪೂರ್ವಭಾವಿ ಷರತ್ತು ಎಂಬುದು ನಿರ್ವಿವಾದ. ಆದರೆ, ಪೌರತ್ವವನ್ನು ನಿರ್ಧರಿಸುವ ಅಧಿಕಾರ ಚುನಾವಣಾ ಆಯೋಗಕ್ಕೆ ಇದೆಯೇ ಎಂಬುದು ಪ್ರಮುಖ ಪ್ರಶ್ನೆಯಾಗಿದೆ’ ಎಂದರು.</p>.<p>ಅದಕ್ಕೆ ಸಿಜೆಐ, ‘ನಾಗರಿಕರನ್ನು ಗುರುತಿಸುವುದಷ್ಟೇ ಆಯೋಗದ ಕೆಲಸ; ಪೌರತ್ವವನ್ನು ಅದರ ವಿಶಾಲ ಅರ್ಥದಲ್ಲಿ ನಿರ್ಣಯಿಸುವುದು ಅಲ್ಲ’ ಎಂದರು. </p>.<p>‘ಈ ವಿಚಾರದಲ್ಲಿ ಚುನಾವಣಾ ಆಯೋಗವು ಸೀಮಿತ ಅಧಿಕಾರವನ್ನು ಹೊಂದಿದೆ. ಮತದಾರರಾಗಿ ನೋಂದಣಿ ಮಾಡಿಕೊಳ್ಳಲು ಮಾತ್ರ ಆಯೋಗವು ಪೌರತ್ವವನ್ನು ನಿರ್ಧರಿಸುತ್ತದೆ. ನಾವು ಯಾರನ್ನೂ ಗಡಿಪಾರು ಮಾಡಲು ಸಾಧ್ಯವಿಲ್ಲ ಅಥವಾ ಭಾರತದಲ್ಲಿ ನೆಲಸಲು ವ್ಯಕ್ತಿಗೆ ವೀಸಾ ಇದೆಯೇ ಎಂಬುದನ್ನು ನಿರ್ಧರಿಸಲು ಸಾಧ್ಯವಿಲ್ಲ. ಆ ವಿಷಯ ನಮ್ಮ ವ್ಯಾಪ್ತಿಗೆ ಬರುವುದಿಲ್ಲ’ ಎಂದು ದ್ವಿವೇದಿ ಸ್ಪಷ್ಟಪಡಿಸಿದರು.</p>.<p>ಚುನಾವಣಾ ಆಯೋಗವು ಪೌರತ್ವವನ್ನು ನೀಡುವ ಪ್ರಾಧಿಕಾರವಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲದಿದ್ದರೂ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಕೊಳ್ಳುವ ವ್ಯಕ್ತಿ ನಿಜವಾಗಿಯೂ ಈ ದೇಶದ ಪ್ರಜೆಯೇ ಎಂಬುದನ್ನು ಪರಿಶೀಲಿಸುವ ಅಧಿಕಾರ ಹೊಂದಿದೆ ಎಂದು ಹೇಳಿದ ಪೀಠ, ವಿಚಾರಣೆಯನ್ನು ಜನವರಿ 20ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>