<p><strong>ನವದೆಹಲಿ</strong>: ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯಿಂದ ಅಪಾರ ಸಂಖ್ಯೆಯಲ್ಲಿ ಮತದಾರರ ಹೆಸರನ್ನು ತೆಗೆದುಹಾಕಲು ಪ್ರಯತ್ನಿಸುತ್ತಿರುವ ಕುರಿತು ವಾಗ್ದಾಳಿ ನಡೆಸಿರುವ ಎಎಪಿ ನಾಯಕ ಸಂಜಯ್ ಸಿಂಗ್, ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಸೇರಿ ಒಳಸಂಚು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.</p><p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆರ್.ಕೆ ಪುರಂ ಕ್ಷೇತ್ರದಲ್ಲಿ 3,800 ಮತದಾರರ ಹೆಸರು ಅಳಿಸಲು ಅರ್ಜಿ ಸಲ್ಲಿಸಿರುವುದು ನಮ್ಮ ಗಮನಕ್ಕೆ ಬಂದಿತ್ತು. ಪಕ್ಷದ ಕಾರ್ಯಕರ್ತರು ಮತ್ತು ಸ್ಥಳೀಯ ಶಾಸಕರು ಈ ಮತದಾರರ ಹೆಸರನ್ನು ಪರಿಶೀಲಿಸಿದಾಗ ಅವರಲ್ಲಿ 1,800 ಜನರು ಅರ್ಹ ಮತದಾರರಾಗಿದ್ದು, ಇನ್ನೂ ಒಂದೇ ಸ್ಥಳದಲ್ಲಿ ವಾಸಿಸುತ್ತಿರುವುದು ಕಂಡುಬಂದಿದೆ. ಅರ್ಜಿಯಲ್ಲಿ ಹೆಸರಿಸಲಾದ ಮತದಾರರು ಈ ಹಿಂದೆ ಚುನಾವಣೆಯಲ್ಲಿ ಎಎಪಿ ಗೆದ್ದಿರುವ ಬೂತ್ಗಳಿಗೆ ಸೇರಿದವರು’ ಎಂದು ಸಿಂಗ್ ಹೇಳಿದ್ದಾರೆ.</p><p>ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಸೇರಿ ಕುತಂತ್ರ ನಡೆಸುತ್ತಿದೆ ಎಂದು ಆರೋಪಿಸಿದ ಸಿಂಗ್, ಅರ್ಜಿಯಲ್ಲಿ ಹೆಸರಿರುವ ಮತದಾರರನ್ನು ಭೇಟಿಯಾಗಿ ಅವರು ಅರ್ಹ ಮತದಾರರೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಮುಖ್ಯ ಚುನಾವಣಾ ಆಯುಕ್ತರನ್ನು ಒತ್ತಾಯಿಸಿದ್ದಾರೆ.</p><p>ಮುಂದಿನ ವರ್ಷ ನಡೆಯಲಿರುವ ದೆಹಲಿ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯಿಂದ ಅನೇಕ ಮತದಾರರ ಹೆಸರನ್ನು ಅಳಿಸಲಾಗಿದೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಮತ್ತು ಪಕ್ಷದ ಇತರ ನಾಯಕರು ಆರೋಪಿಸಿದ್ದರು.</p><p>ಕಳೆದ ವಾರ, ಬಿಜೆಪಿ ನಾಯಕರೊಬ್ಬರು ಶಾಹದಾರ ಕ್ಷೇತ್ರದಲ್ಲಿ 11,000ಕ್ಕೂ ಹೆಚ್ಚು ಮತದಾರರ ಹೆಸರನ್ನು ಅಳಿಸಲು ದೆಹಲಿಯ ಚುನಾವಣಾ ಸಮಿತಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದರು. </p><p>70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿಯಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ.</p>.ಮತದಾರರ ಪಟ್ಟಿಯಿಂದ ಹಲವರ ಹೆಸರು ಅಳಿಸಲಾಗಿದೆ: ಆರೋಪ.ದೆಹಲಿ | ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಕೇಜ್ರಿವಾಲ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯಿಂದ ಅಪಾರ ಸಂಖ್ಯೆಯಲ್ಲಿ ಮತದಾರರ ಹೆಸರನ್ನು ತೆಗೆದುಹಾಕಲು ಪ್ರಯತ್ನಿಸುತ್ತಿರುವ ಕುರಿತು ವಾಗ್ದಾಳಿ ನಡೆಸಿರುವ ಎಎಪಿ ನಾಯಕ ಸಂಜಯ್ ಸಿಂಗ್, ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಸೇರಿ ಒಳಸಂಚು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.</p><p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆರ್.ಕೆ ಪುರಂ ಕ್ಷೇತ್ರದಲ್ಲಿ 3,800 ಮತದಾರರ ಹೆಸರು ಅಳಿಸಲು ಅರ್ಜಿ ಸಲ್ಲಿಸಿರುವುದು ನಮ್ಮ ಗಮನಕ್ಕೆ ಬಂದಿತ್ತು. ಪಕ್ಷದ ಕಾರ್ಯಕರ್ತರು ಮತ್ತು ಸ್ಥಳೀಯ ಶಾಸಕರು ಈ ಮತದಾರರ ಹೆಸರನ್ನು ಪರಿಶೀಲಿಸಿದಾಗ ಅವರಲ್ಲಿ 1,800 ಜನರು ಅರ್ಹ ಮತದಾರರಾಗಿದ್ದು, ಇನ್ನೂ ಒಂದೇ ಸ್ಥಳದಲ್ಲಿ ವಾಸಿಸುತ್ತಿರುವುದು ಕಂಡುಬಂದಿದೆ. ಅರ್ಜಿಯಲ್ಲಿ ಹೆಸರಿಸಲಾದ ಮತದಾರರು ಈ ಹಿಂದೆ ಚುನಾವಣೆಯಲ್ಲಿ ಎಎಪಿ ಗೆದ್ದಿರುವ ಬೂತ್ಗಳಿಗೆ ಸೇರಿದವರು’ ಎಂದು ಸಿಂಗ್ ಹೇಳಿದ್ದಾರೆ.</p><p>ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಸೇರಿ ಕುತಂತ್ರ ನಡೆಸುತ್ತಿದೆ ಎಂದು ಆರೋಪಿಸಿದ ಸಿಂಗ್, ಅರ್ಜಿಯಲ್ಲಿ ಹೆಸರಿರುವ ಮತದಾರರನ್ನು ಭೇಟಿಯಾಗಿ ಅವರು ಅರ್ಹ ಮತದಾರರೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಮುಖ್ಯ ಚುನಾವಣಾ ಆಯುಕ್ತರನ್ನು ಒತ್ತಾಯಿಸಿದ್ದಾರೆ.</p><p>ಮುಂದಿನ ವರ್ಷ ನಡೆಯಲಿರುವ ದೆಹಲಿ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯಿಂದ ಅನೇಕ ಮತದಾರರ ಹೆಸರನ್ನು ಅಳಿಸಲಾಗಿದೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಮತ್ತು ಪಕ್ಷದ ಇತರ ನಾಯಕರು ಆರೋಪಿಸಿದ್ದರು.</p><p>ಕಳೆದ ವಾರ, ಬಿಜೆಪಿ ನಾಯಕರೊಬ್ಬರು ಶಾಹದಾರ ಕ್ಷೇತ್ರದಲ್ಲಿ 11,000ಕ್ಕೂ ಹೆಚ್ಚು ಮತದಾರರ ಹೆಸರನ್ನು ಅಳಿಸಲು ದೆಹಲಿಯ ಚುನಾವಣಾ ಸಮಿತಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದರು. </p><p>70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿಯಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ.</p>.ಮತದಾರರ ಪಟ್ಟಿಯಿಂದ ಹಲವರ ಹೆಸರು ಅಳಿಸಲಾಗಿದೆ: ಆರೋಪ.ದೆಹಲಿ | ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಕೇಜ್ರಿವಾಲ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>