<p><strong>ನವದೆಹಲಿ:</strong> ‘ನನಗೆ ಜೀವನದಲ್ಲಿ ಅನೇಕ ಆಸಕ್ತಿದಾಯಕ ಅನುಭವಗಳಾಗಿವೆ. ಆದರೆ, ಸತ್ತವರ ಜೊತೆ ಟೀ ಕುಡಿಯುವ ಅನುಭವವಾಗಿರಲಿಲ್ಲ. ಈ ವಿಶೇಷ ಘಟನೆಗೆ ಕಾರಣವಾದ ಚುನಾವಣಾ ಆಯೋಗಕ್ಕೆ ಧನ್ಯವಾದಗಳು ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ತಿಳಿಸಿದ್ದಾರೆ. </p><p>ಬಿಹಾರದ ಮೂಲದ ಏಳು ಮತದಾರರು ರಾಹುಲ್ ಗಾಂಧಿ ಅವರ ಮನೆಗೆ ಭೇಟಿ ನೀಡಿದ್ದರು. ಈ ವೇಳೆ, ‘ಮೃತಪಟ್ಟಿದ್ದಾರೆ’ ಎಂದು ತಮ್ಮನ್ನು ಮತದಾರರ ಪಟ್ಟಿಯಿಂದ ತೆಗೆಯಲಾಗಿದೆ ಎಂದು ಅವರು ರಾಹುಲ್ ಅವರ ಬಳಿ ಹೇಳಿಕೊಂಡಿದ್ದಾರೆ. ಇದನ್ನು ರಾಹುಲ್ ಗಾಂಧಿ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. ಅವರ ಜೊತೆಗಿನ ವಿಡಿಯೊವನ್ನು ಕೂಡ ಹಂಚಿಕೊಂಡಿದ್ದಾರೆ.</p>.<p>ವಿಡಿಯೊದಲ್ಲಿ ವ್ಯಕ್ತಿಯೊಬ್ಬ ‘ಎಸ್ಐಆರ್ ವೇಳೆ ನಾವು ‘ಮೃತಪಟ್ಟಿದ್ದೇವೆ’ ಎಂದು ಚುನಾವಣಾ ಆಯೋಗ ನಿರ್ಧರಿಸಿರುವುದು ಗೊತ್ತಾಗಿದೆ. ಬಿಹಾರದ 65 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆಯಲಾಗಿದೆ’ ಎಂದಿದ್ದಾರೆ.</p><p>‘ನಮ್ಮ ಮತ ಚಲಾಯಿಸುವ ಹಕ್ಕನ್ನು ಮರಳಿ ಪಡೆದುಕೊಳ್ಳಲು ನಾವು ಸುಪ್ರೀಂ ಕೋರ್ಟಿನ ಮೆಟ್ಟಿಲೇರಿದ್ದೇವೆ. ಬಿಹಾರದಲ್ಲಿನ ಎಸ್ಐಆರ್ ವಿರುದ್ಧದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಆಲಿಸಿದೆ’ ಎಂದು ಆ ಗುಂಪು ರಾಹುಲ್ಗೆ ವಿವರಿಸಿದೆ. </p><p>ಏಳು ಜನರು ಬಿಹಾರದ ರಾಘೋಪುರ ಮೂಲದವರಾಗಿದ್ದಾರೆ. ತೇಜಸ್ವಿ ಯಾದವ್ ಅವರು ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ. </p><p>ಚುನಾವಣಾ ಆಯೋಗದ ಎಸ್ಐಆರ್ ಕೂಡ ಅವರನ್ನು ಮೃತಪಟ್ಟಿದೆ ಎಂದು ಮತದಾರರ ಪಟ್ಟಿಯಲ್ಲಿ ನಮೂದಿಸಿದೆ. ಇದು ತಾಂತ್ರಿಕವಾಗಿ ಆಗಿರುವ ತಪ್ಪಲ್ಲ. ಬದಲಾಗಿ ಇದರಲ್ಲಿ ರಾಜಕೀಯ ಹಕ್ಕು ನಿರಾಕರಣೆ ಕಣ್ಣಿಗೆ ಕಾಣುತ್ತಿದೆ ಎಂದು ಕಾಂಗ್ರೆಸ್ ವಕ್ತಾರರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ನನಗೆ ಜೀವನದಲ್ಲಿ ಅನೇಕ ಆಸಕ್ತಿದಾಯಕ ಅನುಭವಗಳಾಗಿವೆ. ಆದರೆ, ಸತ್ತವರ ಜೊತೆ ಟೀ ಕುಡಿಯುವ ಅನುಭವವಾಗಿರಲಿಲ್ಲ. ಈ ವಿಶೇಷ ಘಟನೆಗೆ ಕಾರಣವಾದ ಚುನಾವಣಾ ಆಯೋಗಕ್ಕೆ ಧನ್ಯವಾದಗಳು ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ತಿಳಿಸಿದ್ದಾರೆ. </p><p>ಬಿಹಾರದ ಮೂಲದ ಏಳು ಮತದಾರರು ರಾಹುಲ್ ಗಾಂಧಿ ಅವರ ಮನೆಗೆ ಭೇಟಿ ನೀಡಿದ್ದರು. ಈ ವೇಳೆ, ‘ಮೃತಪಟ್ಟಿದ್ದಾರೆ’ ಎಂದು ತಮ್ಮನ್ನು ಮತದಾರರ ಪಟ್ಟಿಯಿಂದ ತೆಗೆಯಲಾಗಿದೆ ಎಂದು ಅವರು ರಾಹುಲ್ ಅವರ ಬಳಿ ಹೇಳಿಕೊಂಡಿದ್ದಾರೆ. ಇದನ್ನು ರಾಹುಲ್ ಗಾಂಧಿ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. ಅವರ ಜೊತೆಗಿನ ವಿಡಿಯೊವನ್ನು ಕೂಡ ಹಂಚಿಕೊಂಡಿದ್ದಾರೆ.</p>.<p>ವಿಡಿಯೊದಲ್ಲಿ ವ್ಯಕ್ತಿಯೊಬ್ಬ ‘ಎಸ್ಐಆರ್ ವೇಳೆ ನಾವು ‘ಮೃತಪಟ್ಟಿದ್ದೇವೆ’ ಎಂದು ಚುನಾವಣಾ ಆಯೋಗ ನಿರ್ಧರಿಸಿರುವುದು ಗೊತ್ತಾಗಿದೆ. ಬಿಹಾರದ 65 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆಯಲಾಗಿದೆ’ ಎಂದಿದ್ದಾರೆ.</p><p>‘ನಮ್ಮ ಮತ ಚಲಾಯಿಸುವ ಹಕ್ಕನ್ನು ಮರಳಿ ಪಡೆದುಕೊಳ್ಳಲು ನಾವು ಸುಪ್ರೀಂ ಕೋರ್ಟಿನ ಮೆಟ್ಟಿಲೇರಿದ್ದೇವೆ. ಬಿಹಾರದಲ್ಲಿನ ಎಸ್ಐಆರ್ ವಿರುದ್ಧದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಆಲಿಸಿದೆ’ ಎಂದು ಆ ಗುಂಪು ರಾಹುಲ್ಗೆ ವಿವರಿಸಿದೆ. </p><p>ಏಳು ಜನರು ಬಿಹಾರದ ರಾಘೋಪುರ ಮೂಲದವರಾಗಿದ್ದಾರೆ. ತೇಜಸ್ವಿ ಯಾದವ್ ಅವರು ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ. </p><p>ಚುನಾವಣಾ ಆಯೋಗದ ಎಸ್ಐಆರ್ ಕೂಡ ಅವರನ್ನು ಮೃತಪಟ್ಟಿದೆ ಎಂದು ಮತದಾರರ ಪಟ್ಟಿಯಲ್ಲಿ ನಮೂದಿಸಿದೆ. ಇದು ತಾಂತ್ರಿಕವಾಗಿ ಆಗಿರುವ ತಪ್ಪಲ್ಲ. ಬದಲಾಗಿ ಇದರಲ್ಲಿ ರಾಜಕೀಯ ಹಕ್ಕು ನಿರಾಕರಣೆ ಕಣ್ಣಿಗೆ ಕಾಣುತ್ತಿದೆ ಎಂದು ಕಾಂಗ್ರೆಸ್ ವಕ್ತಾರರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>