<p><strong>ನವದೆಹಲಿ</strong>: ಚುನಾವಣಾ ಆಯೋಗವು ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಶೀಲನೆಗೆ (ಎಸ್ಐಆರ್) ನಿರ್ದೇಶನ ನೀಡಿರುವುದನ್ನು ಪ್ರಶ್ನಿಸಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಸಂಸ್ಥೆಯು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ.</p>.<p>ಅನರ್ಹ ಮತದಾರರ ಹೆಸರುಗಳನ್ನು ಕೈಬಿಡಲು ಮತ್ತು ಅರ್ಹರನ್ನು ಮಾತ್ರ ಮತದಾರರ ಪಟ್ಟಿಯಲ್ಲಿ ಸೇರಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಶೀಲನೆಗೆ ಚುನಾವಣಾ ಆಯೋಗವು ಜೂನ್ 24ರಂದು ಸೂಚನೆ ನೀಡಿತ್ತು. ಬಿಹಾರ ವಿಧಾನಸಭೆಗೆ ಈ ವರ್ಷದ ಕೊನೆಯಲ್ಲಿ ಚುನಾವಣೆ ನಡೆಯಲಿದೆ.</p>.<p>ಚುನಾವಣಾ ಆಯೋಗದ ಆದೇಶವು ಸಂವಿಧಾನದ 14, 19, 21, 325 ಮತ್ತು 326ನೇ ವಿಧಿಗಳು ಹಾಗೂ 1950ರ ಪ್ರಜಾ ಪ್ರಾತಿನಿಧ್ಯ ಕಾಯ್ದೆ ಮತ್ತು 1960ರ ಮತದಾರರ ನೋಂದಣಿ ನಿಯಮಗಳ ನಿಯಮ 21ಎ ನಿಬಂಧನೆಯನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿಯಲ್ಲಿ ವಾದಿಸಿದೆ.</p>.<p>ಎಡಿಆರ್ ಪರ ಅರ್ಜಿ ಸಲ್ಲಿಸಿರುವ ವಕೀಲ ಪ್ರಶಾಂತ್ ಭೂಷಣ್, ‘ಚುನಾವಣಾ ಆಯೋಗದ ಆದೇಶವು ಲಕ್ಷಾಂತರ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳಬಹುದು ಮತ್ತು ಮುಕ್ತ ಮತ್ತು ನ್ಯಾಯಯುತ ಚುನಾವಣೆಗೆ ಅಡ್ಡಿಯಾಗಿ ಪರಿಣಮಿಸಬಹುದು’ ಎಂದು ಹೇಳಿದ್ದಾರೆ.</p>.<p>ನಗರಗಳು ತ್ವರಿತವಾಗಿ ಬೆಳವಣಿಗೆ ಆಗಿರುವುದು, ವಲಸೆ ಹೆಚ್ಚಿರುವುದು, ಯುವ ಜನರು ಮತದಾನಕ್ಕೆ ಅರ್ಹರಾಗಿರುವುದು ಮತ್ತು ವಿದೇಶಿ ಅಕ್ರಮ ವಲಸಿಗರ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವುದರಿಂದ ಪರಿಶೀಲನೆ ಪ್ರಕ್ರಿಯೆ ಅಗತ್ಯವಾಗಿತ್ತು ಎಂದು ಚುನಾವಣಾ ಆಯೋಗ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಚುನಾವಣಾ ಆಯೋಗವು ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಶೀಲನೆಗೆ (ಎಸ್ಐಆರ್) ನಿರ್ದೇಶನ ನೀಡಿರುವುದನ್ನು ಪ್ರಶ್ನಿಸಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಸಂಸ್ಥೆಯು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ.</p>.<p>ಅನರ್ಹ ಮತದಾರರ ಹೆಸರುಗಳನ್ನು ಕೈಬಿಡಲು ಮತ್ತು ಅರ್ಹರನ್ನು ಮಾತ್ರ ಮತದಾರರ ಪಟ್ಟಿಯಲ್ಲಿ ಸೇರಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಶೀಲನೆಗೆ ಚುನಾವಣಾ ಆಯೋಗವು ಜೂನ್ 24ರಂದು ಸೂಚನೆ ನೀಡಿತ್ತು. ಬಿಹಾರ ವಿಧಾನಸಭೆಗೆ ಈ ವರ್ಷದ ಕೊನೆಯಲ್ಲಿ ಚುನಾವಣೆ ನಡೆಯಲಿದೆ.</p>.<p>ಚುನಾವಣಾ ಆಯೋಗದ ಆದೇಶವು ಸಂವಿಧಾನದ 14, 19, 21, 325 ಮತ್ತು 326ನೇ ವಿಧಿಗಳು ಹಾಗೂ 1950ರ ಪ್ರಜಾ ಪ್ರಾತಿನಿಧ್ಯ ಕಾಯ್ದೆ ಮತ್ತು 1960ರ ಮತದಾರರ ನೋಂದಣಿ ನಿಯಮಗಳ ನಿಯಮ 21ಎ ನಿಬಂಧನೆಯನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿಯಲ್ಲಿ ವಾದಿಸಿದೆ.</p>.<p>ಎಡಿಆರ್ ಪರ ಅರ್ಜಿ ಸಲ್ಲಿಸಿರುವ ವಕೀಲ ಪ್ರಶಾಂತ್ ಭೂಷಣ್, ‘ಚುನಾವಣಾ ಆಯೋಗದ ಆದೇಶವು ಲಕ್ಷಾಂತರ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳಬಹುದು ಮತ್ತು ಮುಕ್ತ ಮತ್ತು ನ್ಯಾಯಯುತ ಚುನಾವಣೆಗೆ ಅಡ್ಡಿಯಾಗಿ ಪರಿಣಮಿಸಬಹುದು’ ಎಂದು ಹೇಳಿದ್ದಾರೆ.</p>.<p>ನಗರಗಳು ತ್ವರಿತವಾಗಿ ಬೆಳವಣಿಗೆ ಆಗಿರುವುದು, ವಲಸೆ ಹೆಚ್ಚಿರುವುದು, ಯುವ ಜನರು ಮತದಾನಕ್ಕೆ ಅರ್ಹರಾಗಿರುವುದು ಮತ್ತು ವಿದೇಶಿ ಅಕ್ರಮ ವಲಸಿಗರ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವುದರಿಂದ ಪರಿಶೀಲನೆ ಪ್ರಕ್ರಿಯೆ ಅಗತ್ಯವಾಗಿತ್ತು ಎಂದು ಚುನಾವಣಾ ಆಯೋಗ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>