<p><strong>ನವದೆಹಲಿ:</strong> ಸಂಸತ್ತಿನಲ್ಲಿ ‘ಆಪರೇಷನ್ ಸಿಂಧೂರ’ದ ಬಗ್ಗೆ ಸೋಮವಾರ ಚರ್ಚೆ ಆರಂಭಗೊಳ್ಳುವ ಮುನ್ನವೇ, ಸಂಸತ್ತಿನ ‘ಮಕರ ದ್ವಾರ’ದ ಎದುರು ಇಂಡಿಯಾ ಕೂಟದ ಸಂಸದರು, ಚುನಾವಣಾ ಆಯೋಗದ (ಇ.ಸಿ) ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. </p>.<p>ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯನ್ನು (ಎಸ್ಐಆರ್) ಖಂಡಿಸಿರುವ ಇಂಡಿಯಾ ಕೂಟವು, ಇದರ ವಿರುದ್ಧ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಹೇಳಿದೆ. </p>.<p>ಇಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್ಜೆಡಿ, ಕಾಂಗ್ರೆಸ್, ಸಿಪಿಎಂ ಪಕ್ಷದ ಮುಖಂಡರು ಇ.ಸಿ ವಿರುದ್ಧ ವಾಗ್ದಾಳಿ ನಡೆಸಿದರು. ಪೌರತ್ವ ಪರಿಶೀಲನೆ ಕಡ್ಡಾಯವಲ್ಲದ ಸಂದರ್ಭದಲ್ಲಿ ಆಯೋಗವು ‘ಎಸ್ಐಆರ್’ ಮೂಲಕ ದೊಡ್ಡ ಸಂಖ್ಯೆಯ ಮತದಾರರನ್ನು ಹೊರಗಿಡಲು ಕಸರತ್ತು ನಡೆಸುತ್ತಿದೆ ಎಂದು ದೂರಿದರು. </p>.<p>‘ಮತದಾರರ ಪಟ್ಟಿಯಲ್ಲಿ ಕಳೆದ 6 ತಿಂಗಳಲ್ಲಿ ದೊಡ್ಡ ಮಟ್ಟದ ವ್ಯತ್ಯಾಸವಾಗಿದೆ. ಇದರ ಅರ್ಥ 22 ಲಕ್ಷಕ್ಕೂ ಹೆಚ್ಚು ಮತದಾರರು ನಿಧನರಾಗಿದ್ದಾರೆ ಎನ್ನುವುದೇ? ಹಾಗಾದರೆ ಚುನಾವಣಾ ಆಯೋಗದ ಮತದಾರರ ಪರಿಷ್ಕರಣೆ ವಿಫಲವಾಗಿದೆಯಲ್ಲವೇ’ ಎಂದು ಸಿಪಿಎಂಎಲ್ ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ಪ್ರಶ್ನಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಂಸತ್ತಿನಲ್ಲಿ ‘ಆಪರೇಷನ್ ಸಿಂಧೂರ’ದ ಬಗ್ಗೆ ಸೋಮವಾರ ಚರ್ಚೆ ಆರಂಭಗೊಳ್ಳುವ ಮುನ್ನವೇ, ಸಂಸತ್ತಿನ ‘ಮಕರ ದ್ವಾರ’ದ ಎದುರು ಇಂಡಿಯಾ ಕೂಟದ ಸಂಸದರು, ಚುನಾವಣಾ ಆಯೋಗದ (ಇ.ಸಿ) ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. </p>.<p>ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯನ್ನು (ಎಸ್ಐಆರ್) ಖಂಡಿಸಿರುವ ಇಂಡಿಯಾ ಕೂಟವು, ಇದರ ವಿರುದ್ಧ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಹೇಳಿದೆ. </p>.<p>ಇಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್ಜೆಡಿ, ಕಾಂಗ್ರೆಸ್, ಸಿಪಿಎಂ ಪಕ್ಷದ ಮುಖಂಡರು ಇ.ಸಿ ವಿರುದ್ಧ ವಾಗ್ದಾಳಿ ನಡೆಸಿದರು. ಪೌರತ್ವ ಪರಿಶೀಲನೆ ಕಡ್ಡಾಯವಲ್ಲದ ಸಂದರ್ಭದಲ್ಲಿ ಆಯೋಗವು ‘ಎಸ್ಐಆರ್’ ಮೂಲಕ ದೊಡ್ಡ ಸಂಖ್ಯೆಯ ಮತದಾರರನ್ನು ಹೊರಗಿಡಲು ಕಸರತ್ತು ನಡೆಸುತ್ತಿದೆ ಎಂದು ದೂರಿದರು. </p>.<p>‘ಮತದಾರರ ಪಟ್ಟಿಯಲ್ಲಿ ಕಳೆದ 6 ತಿಂಗಳಲ್ಲಿ ದೊಡ್ಡ ಮಟ್ಟದ ವ್ಯತ್ಯಾಸವಾಗಿದೆ. ಇದರ ಅರ್ಥ 22 ಲಕ್ಷಕ್ಕೂ ಹೆಚ್ಚು ಮತದಾರರು ನಿಧನರಾಗಿದ್ದಾರೆ ಎನ್ನುವುದೇ? ಹಾಗಾದರೆ ಚುನಾವಣಾ ಆಯೋಗದ ಮತದಾರರ ಪರಿಷ್ಕರಣೆ ವಿಫಲವಾಗಿದೆಯಲ್ಲವೇ’ ಎಂದು ಸಿಪಿಎಂಎಲ್ ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ಪ್ರಶ್ನಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>