ಬುಧವಾರ ಸಂಜೆ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಪ್ರಚಾರ ನಡೆಸುತ್ತಿದ್ದಾಗ ಅಪರಿಚಿತರಿಂದ ತಳ್ಳಲ್ಪಟ್ಟ ಮಮತಾ ಬ್ಯಾನರ್ಜಿ ಕೆಳಗೆ ಬಿದ್ದು ಎಡಗಾಲಿಗೆ ಮತ್ತು ಸೊಂಟಕ್ಕೆ ಗಾಯಗಳಾಗಿವೆ ಎಂಬ ವರದಿಗಳು ಬಂದಿದ್ದವು. ಬಳಿಕ ಟಿಎಂಸಿ ವರಿಷ್ಠೆ, ಪೂರ್ವ ಮೇದಿನಿಪುರ್ ಜಿಲ್ಲೆಯಿಂದ ಗ್ರೀನ್ ಕಾರಿಡಾರ್ ಮೂಲಕ ತೆರಳಿ ಕೋಲ್ಕತ್ತಾದ ಎಸ್ಎಸ್ಕೆಎಂ ಆಸ್ಪತ್ರೆಗೆ ದಾಖಲಾಗಿದ್ದರು.