<p><strong>ಚಂಡೀಗಢ:</strong> ಚುನಾವಣಾ ಆಯೋಗವು ಸಾಕ್ಷಿ ಕೇಳುವುದನ್ನು ಬಿಟ್ಟು, ಮತದಾರರ ವಿಶೇಷ ತೀವ್ರ ಪರಿಷ್ಕರಣೆ(ಎಸ್ಐಆರ್) ಕುರಿತು ದೇಶದಾದ್ಯಂತ ವ್ಯಕ್ತವಾಗುತ್ತಿರುವ ಆಕ್ಷೇಪಗಳಿಗೆ ಉತ್ತರಿಸಲಿ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಅವರು ಶುಕ್ರವಾರ ಹೇಳಿದ್ದಾರೆ. </p><p>ಚುನಾವಣಾ ಆಯೋಗವು ಸಾಕ್ಷಿ ಕೇಳುತ್ತಿದೆ. ಜನರು ಆಕ್ಷೇಪ ವ್ಯಕ್ತಪಡಿಸಿದಾಗ ಅದರ ಕುರಿತು ಕ್ರಮ ತೆಗೆದುಕೊಳ್ಳುವುದು ಅವರ ಕರ್ತವ್ಯ. ಆದರೆ, ಇವರು ಏಕೆ ಸಾಕ್ಷಿಗಾಗಿ ಒತ್ತಾಯಿಸುತ್ತಿದ್ದಾರೆ ಎಂದು ಮಾನ್ ಅವರು ಪ್ರಶ್ನಿಸಿದ್ದಾರೆ. </p><p>ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳು ಎಸ್ಐಆರ್ ಕುರಿತು ಆತಂಕ ವ್ಯಕ್ತಪಡಿಸುತ್ತಿವೆ. </p><p>2026ರಲ್ಲಿ ವಿಧಾನಸಭಾ ಚುನಾವಣೆಗಳು ಜರುಗಲಿರುವ 9 ರಾಜ್ಯ ಹಾಗೂ 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್ಐಆರ್ ನಡೆಯುತ್ತಿದೆ. ಅದು ಇನ್ನೂ ಕೆಲವೇ ದಿನಗಳಲ್ಲಿ ಮುಕ್ತಾಯವಾಗಲಿದೆ. 50.97 ಕೋಟಿ ಮತದಾರರಲ್ಲಿ 50.40 ಕೋಟಿ ಮಂದಿ ಎಸ್ಐಆರ್ ಫಾರ್ಮ್ಗಳನ್ನು ನೀಡಿದ್ದಾರೆ ಎಂದು ಚುನಾವಣಾ ಆಯೋಗವು ಗುರುವಾರ ಮಾಹಿತಿ ನೀಡಿತ್ತು. </p><p>ನವೆಂಬರ್ 4ರಂದು ಎರಡನೇ ಹಂತದ ಎಸ್ಐಆರ್ ಆರಂಭಗೊಂಡಿತ್ತು. ಡಿ.4ರಂದು ಮುಕ್ತಾಯಗೊಳ್ಳಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> ಚುನಾವಣಾ ಆಯೋಗವು ಸಾಕ್ಷಿ ಕೇಳುವುದನ್ನು ಬಿಟ್ಟು, ಮತದಾರರ ವಿಶೇಷ ತೀವ್ರ ಪರಿಷ್ಕರಣೆ(ಎಸ್ಐಆರ್) ಕುರಿತು ದೇಶದಾದ್ಯಂತ ವ್ಯಕ್ತವಾಗುತ್ತಿರುವ ಆಕ್ಷೇಪಗಳಿಗೆ ಉತ್ತರಿಸಲಿ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಅವರು ಶುಕ್ರವಾರ ಹೇಳಿದ್ದಾರೆ. </p><p>ಚುನಾವಣಾ ಆಯೋಗವು ಸಾಕ್ಷಿ ಕೇಳುತ್ತಿದೆ. ಜನರು ಆಕ್ಷೇಪ ವ್ಯಕ್ತಪಡಿಸಿದಾಗ ಅದರ ಕುರಿತು ಕ್ರಮ ತೆಗೆದುಕೊಳ್ಳುವುದು ಅವರ ಕರ್ತವ್ಯ. ಆದರೆ, ಇವರು ಏಕೆ ಸಾಕ್ಷಿಗಾಗಿ ಒತ್ತಾಯಿಸುತ್ತಿದ್ದಾರೆ ಎಂದು ಮಾನ್ ಅವರು ಪ್ರಶ್ನಿಸಿದ್ದಾರೆ. </p><p>ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳು ಎಸ್ಐಆರ್ ಕುರಿತು ಆತಂಕ ವ್ಯಕ್ತಪಡಿಸುತ್ತಿವೆ. </p><p>2026ರಲ್ಲಿ ವಿಧಾನಸಭಾ ಚುನಾವಣೆಗಳು ಜರುಗಲಿರುವ 9 ರಾಜ್ಯ ಹಾಗೂ 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್ಐಆರ್ ನಡೆಯುತ್ತಿದೆ. ಅದು ಇನ್ನೂ ಕೆಲವೇ ದಿನಗಳಲ್ಲಿ ಮುಕ್ತಾಯವಾಗಲಿದೆ. 50.97 ಕೋಟಿ ಮತದಾರರಲ್ಲಿ 50.40 ಕೋಟಿ ಮಂದಿ ಎಸ್ಐಆರ್ ಫಾರ್ಮ್ಗಳನ್ನು ನೀಡಿದ್ದಾರೆ ಎಂದು ಚುನಾವಣಾ ಆಯೋಗವು ಗುರುವಾರ ಮಾಹಿತಿ ನೀಡಿತ್ತು. </p><p>ನವೆಂಬರ್ 4ರಂದು ಎರಡನೇ ಹಂತದ ಎಸ್ಐಆರ್ ಆರಂಭಗೊಂಡಿತ್ತು. ಡಿ.4ರಂದು ಮುಕ್ತಾಯಗೊಳ್ಳಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>