<p><strong>ನವದೆಹಲಿ</strong>: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ (ಎಸ್ಐಆರ್) ವಿರೋಧ ವ್ಯಕ್ತವಾಗಿರುವಾಗಲೇ, ದೇಶದಾದ್ಯಂತ ‘ಎಸ್ಐಆರ್’ ಜಾರಿಗೊಳಿಸಲು ಕೇಂದ್ರ ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ. </p>.<p>ದೇಶವ್ಯಾಪಿ ‘ಎಸ್ಐಆರ್’ ಜಾರಿಗೆ ಕೈಗೊಳ್ಳಬೇಕಿರುವ ಸಿದ್ಧತೆಗಳ ಕುರಿತು ಚರ್ಚಿಸಲು ಆಯೋಗದ ಉನ್ನತ ಅಧಿಕಾರಿಗಳು ಸೆಪ್ಟೆಂಬರ್ 10ರಂದು ವಿವಿಧ ರಾಜ್ಯಗಳ ಚುನಾವಣಾ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. </p>.<p>ಮುಖ್ಯ ಚುನಾವಣಾ ಆಯುಕ್ತರಾಗಿ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ, ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳೊಂದಿಗೆ ನಡೆಸುತ್ತಿರುವ ಮೂರನೆಯ ಸಭೆ ಇದಾಗಿದೆ. </p>.<p>ಬಿಹಾರದ ನಂತರ ದೇಶದ ಉಳಿದ ರಾಜ್ಯಗಳಲ್ಲೂ ‘ಎಸ್ಐಆರ್’ ಜಾರಿಗೊಳಿಸುವುದಾಗಿ ಚುನಾವಣಾ ಆಯೋಗ ಈ ಹಿಂದೆಯೇ ಹೇಳಿತ್ತು. 2026ರಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಇದಕ್ಕೂ ಮುನ್ನ ಅಂದರೆ, ಈ ವರ್ಷಾಂತ್ಯದಿಂದಲೇ ಈ ರಾಜ್ಯಗಳಲ್ಲಿ ‘ಎಸ್ಐಆರ್’ ಪ್ರಕ್ರಿಯೆಗಳು ಆರಂಭಗೊಳ್ಳುವ ಸಾಧ್ಯತೆ ಇದೆ. </p>.<h2>‘ಎಸ್ಐಆರ್’ ಉದ್ದೇಶ</h2>.<p>*ಜನ್ಮಸ್ಥಳ ಪರಿಶೀಲನೆಯ ಮೂಲಕ ವಿದೇಶಿ ಅಕ್ರಮ ವಲಸಿಗರನ್ನು ಮತದಾರರ ಪಟ್ಟಿಯಿಂದ ಹೊರಗಿಡುವುದು</p>.<p>*ಬಾಂಗ್ಲಾದೇಶ, ಮ್ಯಾನ್ಮಾರ್ ಸೇರಿ ದೇಶದಲ್ಲಿ ನುಸುಳಿರುವ ವಿದೇಶಿ ಅಕ್ರಮ ವಲಸಿಗರನ್ನು ಗುರುತಿಸುವುದು</p>.<p>* ಮತದಾರರ ಪಟ್ಟಿಯ ಸಮಗ್ರತೆ ರಕ್ಷಿಸಲು, ಸಾಂವಿಧಾನಿಕ ಆದೇಶ ನಿರ್ವಹಿಸಲು ಮುಂದಾದ ಆಯೋಗ </p>.<p>* ಮತಗಟ್ಟೆ ಅಧಿಕಾರಿಗಳು ಬೂತ್ ಮಟ್ಟದಲ್ಲಿ ಪ್ರತಿ ಮನೆಗೆ ಭೇಟಿ ನೀಡಿ, ಮತದಾರರ ವಿವರವನ್ನು ಸಂಗ್ರಹಿಸಿ, ಖಚಿತಪಡಿಸಿಕೊಳ್ಳುವುದು </p>.<h2>ವಿರೋಧ ಪಕ್ಷಗಳ ಆರೋಪ </h2>.<p>* ಬಿಹಾರದಲ್ಲಿ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿಗೆ ಸಹಾಯ ಮಾಡಲು ಆಯೋಗವು ‘ಎಸ್ಐಆರ್’ ಜಾರಿಗೊಳಿಸಿದೆ</p>.<p>* ಅರ್ಹ ಮತದಾರರು ದಾಖಲೆಗಳ ಕೊರತೆ ಕಾರಣದಿಂದ ಅಮೂಲ್ಯವಾದ ಮತದಾನದ ಹಕ್ಕಿನಿಂದ ವಂಚಿತರಾಗುತ್ತಾರೆ</p>.<p><strong>ಘೋಷಣಾ ಪತ್ರ– ಹೊಸ ನಮೂನೆ</strong></p><p> ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ ಮಾಡಲು ಬಯಸುವವರಿಗೆ ಮತ್ತು ಹೊರ ರಾಜ್ಯಗಳಿಗೆ ಸ್ಥಳಾಂತರಗೊಂಡವರಿಗೆ ‘ಎಸ್ಐಆರ್’ನಲ್ಲಿ ‘ಘೋಷಣಾ ಪತ್ರ’ ಎಂಬ ಹೊಸ ನಮೂನೆಯನ್ನು ಪರಿಚಯಿಸಲಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವವರು 1987ರ ಜುಲೈ 1ರ ಮೊದಲು ಜನಿಸಿದವರಾಗಿದ್ದರೆ ಭಾರತದಲ್ಲಿ ಜನಿಸಿದ್ದೇವೆ ಎನ್ನುವುದಕ್ಕೆ ಜನ್ಮ ದಿನಾಂಕ ಮತ್ತು ಜನ್ಮಸ್ಥಳದ ದಾಖಲೆ ಒದಗಿಸಬೇಕು. 1987ರ ಜುಲೈ 1ರಿಂದ 2004ರ ಡಿಸೆಂಬರ್ 2ರ ಒಳಗೆ ಜನಿಸಿದವರು ತಮ್ಮ ಪೋಷಕರ ಜನ್ಮದಿನಾಂಕ ಜನ್ಮಸ್ಥಳದ ದಾಖಲೆಯನ್ನೂ ಒದಗಿಸಬೇಕು.</p>.<p> <strong>ಸುಪ್ರೀಂಕೋರ್ಟ್ ಸೂಚನೆ</strong> </p><p>ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಮತ್ತು ಮತದಾನದ ಹಕ್ಕಿನಿಂದ ವಂಚಿತರಾಗುತ್ತಿಲ್ಲ ಎನ್ನುವುದನ್ನು ಖಚಿತಪಡಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ. ಕೆಲವು ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳು ಈಗಾಗಲೇ ತಮ್ಮ ರಾಜ್ಯಗಳಲ್ಲಿ ಕೊನೆಯ ಬಾರಿ ಪರಿಷ್ಕರಣೆ ಆಗಿರುವ ಮತದಾರರ ಪಟ್ಟಿಯನ್ನು ಆಯೋಗದ ವೆಬ್ಸೈಟ್ನಲ್ಲಿ ಪ್ರಕಟಿಸುತ್ತಿದ್ದಾರೆ. ಹೆಚ್ಚಿನ ರಾಜ್ಯಗಳು 2002–2004ರ ಅವಧಿಯಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಿದ್ದವು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ (ಎಸ್ಐಆರ್) ವಿರೋಧ ವ್ಯಕ್ತವಾಗಿರುವಾಗಲೇ, ದೇಶದಾದ್ಯಂತ ‘ಎಸ್ಐಆರ್’ ಜಾರಿಗೊಳಿಸಲು ಕೇಂದ್ರ ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ. </p>.<p>ದೇಶವ್ಯಾಪಿ ‘ಎಸ್ಐಆರ್’ ಜಾರಿಗೆ ಕೈಗೊಳ್ಳಬೇಕಿರುವ ಸಿದ್ಧತೆಗಳ ಕುರಿತು ಚರ್ಚಿಸಲು ಆಯೋಗದ ಉನ್ನತ ಅಧಿಕಾರಿಗಳು ಸೆಪ್ಟೆಂಬರ್ 10ರಂದು ವಿವಿಧ ರಾಜ್ಯಗಳ ಚುನಾವಣಾ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. </p>.<p>ಮುಖ್ಯ ಚುನಾವಣಾ ಆಯುಕ್ತರಾಗಿ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ, ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳೊಂದಿಗೆ ನಡೆಸುತ್ತಿರುವ ಮೂರನೆಯ ಸಭೆ ಇದಾಗಿದೆ. </p>.<p>ಬಿಹಾರದ ನಂತರ ದೇಶದ ಉಳಿದ ರಾಜ್ಯಗಳಲ್ಲೂ ‘ಎಸ್ಐಆರ್’ ಜಾರಿಗೊಳಿಸುವುದಾಗಿ ಚುನಾವಣಾ ಆಯೋಗ ಈ ಹಿಂದೆಯೇ ಹೇಳಿತ್ತು. 2026ರಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಇದಕ್ಕೂ ಮುನ್ನ ಅಂದರೆ, ಈ ವರ್ಷಾಂತ್ಯದಿಂದಲೇ ಈ ರಾಜ್ಯಗಳಲ್ಲಿ ‘ಎಸ್ಐಆರ್’ ಪ್ರಕ್ರಿಯೆಗಳು ಆರಂಭಗೊಳ್ಳುವ ಸಾಧ್ಯತೆ ಇದೆ. </p>.<h2>‘ಎಸ್ಐಆರ್’ ಉದ್ದೇಶ</h2>.<p>*ಜನ್ಮಸ್ಥಳ ಪರಿಶೀಲನೆಯ ಮೂಲಕ ವಿದೇಶಿ ಅಕ್ರಮ ವಲಸಿಗರನ್ನು ಮತದಾರರ ಪಟ್ಟಿಯಿಂದ ಹೊರಗಿಡುವುದು</p>.<p>*ಬಾಂಗ್ಲಾದೇಶ, ಮ್ಯಾನ್ಮಾರ್ ಸೇರಿ ದೇಶದಲ್ಲಿ ನುಸುಳಿರುವ ವಿದೇಶಿ ಅಕ್ರಮ ವಲಸಿಗರನ್ನು ಗುರುತಿಸುವುದು</p>.<p>* ಮತದಾರರ ಪಟ್ಟಿಯ ಸಮಗ್ರತೆ ರಕ್ಷಿಸಲು, ಸಾಂವಿಧಾನಿಕ ಆದೇಶ ನಿರ್ವಹಿಸಲು ಮುಂದಾದ ಆಯೋಗ </p>.<p>* ಮತಗಟ್ಟೆ ಅಧಿಕಾರಿಗಳು ಬೂತ್ ಮಟ್ಟದಲ್ಲಿ ಪ್ರತಿ ಮನೆಗೆ ಭೇಟಿ ನೀಡಿ, ಮತದಾರರ ವಿವರವನ್ನು ಸಂಗ್ರಹಿಸಿ, ಖಚಿತಪಡಿಸಿಕೊಳ್ಳುವುದು </p>.<h2>ವಿರೋಧ ಪಕ್ಷಗಳ ಆರೋಪ </h2>.<p>* ಬಿಹಾರದಲ್ಲಿ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿಗೆ ಸಹಾಯ ಮಾಡಲು ಆಯೋಗವು ‘ಎಸ್ಐಆರ್’ ಜಾರಿಗೊಳಿಸಿದೆ</p>.<p>* ಅರ್ಹ ಮತದಾರರು ದಾಖಲೆಗಳ ಕೊರತೆ ಕಾರಣದಿಂದ ಅಮೂಲ್ಯವಾದ ಮತದಾನದ ಹಕ್ಕಿನಿಂದ ವಂಚಿತರಾಗುತ್ತಾರೆ</p>.<p><strong>ಘೋಷಣಾ ಪತ್ರ– ಹೊಸ ನಮೂನೆ</strong></p><p> ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ ಮಾಡಲು ಬಯಸುವವರಿಗೆ ಮತ್ತು ಹೊರ ರಾಜ್ಯಗಳಿಗೆ ಸ್ಥಳಾಂತರಗೊಂಡವರಿಗೆ ‘ಎಸ್ಐಆರ್’ನಲ್ಲಿ ‘ಘೋಷಣಾ ಪತ್ರ’ ಎಂಬ ಹೊಸ ನಮೂನೆಯನ್ನು ಪರಿಚಯಿಸಲಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವವರು 1987ರ ಜುಲೈ 1ರ ಮೊದಲು ಜನಿಸಿದವರಾಗಿದ್ದರೆ ಭಾರತದಲ್ಲಿ ಜನಿಸಿದ್ದೇವೆ ಎನ್ನುವುದಕ್ಕೆ ಜನ್ಮ ದಿನಾಂಕ ಮತ್ತು ಜನ್ಮಸ್ಥಳದ ದಾಖಲೆ ಒದಗಿಸಬೇಕು. 1987ರ ಜುಲೈ 1ರಿಂದ 2004ರ ಡಿಸೆಂಬರ್ 2ರ ಒಳಗೆ ಜನಿಸಿದವರು ತಮ್ಮ ಪೋಷಕರ ಜನ್ಮದಿನಾಂಕ ಜನ್ಮಸ್ಥಳದ ದಾಖಲೆಯನ್ನೂ ಒದಗಿಸಬೇಕು.</p>.<p> <strong>ಸುಪ್ರೀಂಕೋರ್ಟ್ ಸೂಚನೆ</strong> </p><p>ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಮತ್ತು ಮತದಾನದ ಹಕ್ಕಿನಿಂದ ವಂಚಿತರಾಗುತ್ತಿಲ್ಲ ಎನ್ನುವುದನ್ನು ಖಚಿತಪಡಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ. ಕೆಲವು ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳು ಈಗಾಗಲೇ ತಮ್ಮ ರಾಜ್ಯಗಳಲ್ಲಿ ಕೊನೆಯ ಬಾರಿ ಪರಿಷ್ಕರಣೆ ಆಗಿರುವ ಮತದಾರರ ಪಟ್ಟಿಯನ್ನು ಆಯೋಗದ ವೆಬ್ಸೈಟ್ನಲ್ಲಿ ಪ್ರಕಟಿಸುತ್ತಿದ್ದಾರೆ. ಹೆಚ್ಚಿನ ರಾಜ್ಯಗಳು 2002–2004ರ ಅವಧಿಯಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಿದ್ದವು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>