<p><strong>ನವದೆಹಲಿ</strong>: ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ಪ್ರಕ್ರಿಯೆಯ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದ ಬೆನ್ನಲ್ಲೇ, ‘ಚುನಾವಣಾ ಆಯೋಗವು ಮತದಾರರೊಂದಿಗೆ ಯಾವಾಗಲೂ ಇರಲಿದೆ’ ಎಂಬ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಹೇಳಿಕೆಯನ್ನು ಆಯೋಗವು ಪುನರುಚ್ಛರಿಸಿದೆ. </p><p>ಇದೇ ವರ್ಷ ರಾಷ್ಟ್ರೀಯ ಮತದಾರರ ದಿನದಂದು ಮಾತನಾಡಿದ್ದ ಜ್ಞಾನೇಶ್ ಕುಮಾರ್, ಚುನಾವಣಾ ಆಯೋಗವು ಹಿಂದೆಯೂ ಮತದಾರರ ಪರವಾಗಿ ಇತ್ತು, ಈಗಲೂ ಇದೆ ಮತ್ತು ಮುಂದೆಯೂ ಇರಲಿದೆ’ ಎಂದು ಹೇಳಿದ್ದರು.</p><p>ಎಸ್ಐಆರ್ ನಡೆಸುವ ಚುನಾವಣಾ ಆಯೋಗದ ಅಧಿಕಾರವನ್ನು ಸುಪ್ರೀಂ ಕೋರ್ಟ್ ಬುಧವಾರ ಎತ್ತಿಹಿಡಿದಿದೆ. ಅಷ್ಟೇ ಅಲ್ಲದೆ, ಈ ಪ್ರಕ್ರಿಯೆಯು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳ ಸಾಂವಿಧಾನಿಕ ಆದೇಶಕ್ಕೆ ಜೀವ ತುಂಬುತ್ತದೆ ಎಂದು ನ್ಯಾಯಾಲಯ ಹೇಳಿದೆ.</p><p>'ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳು ಕೇವಲ ಮತದಾನದ ತಾಂತ್ರಿಕ ಪ್ರಕ್ರಿಯೆಯನ್ನು ಮಾತ್ರ ಅವಲಂಬಿಸಿರುವುದಿಲ್ಲ, ಬದಲಿಗೆ ಪ್ರಜಾಪ್ರಭುತ್ವ ಪ್ರಕ್ರಿಯೆಯ ತಳಹದಿಯಾಗಿರುವ ಮತದಾರರ ಪಟ್ಟಿಯ ಸಮಗ್ರತೆ, ನಿಖರತೆ ಮತ್ತು ಪವಿತ್ರತೆಯನ್ನು ಅಷ್ಟೇ ಪ್ರಮಾಣದಲ್ಲಿ ಅವಲಂಬಿಸಿರುತ್ತವೆ ಎಂದು ಅಭಿಪ್ರಾಯಪಟ್ಟಿದೆ.</p><p>ದೇಶದ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಮೂಲಕ ಚುನಾವಣಾ ಆಯೋಗವು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ, ಹಲವು ವಿರೋಧ ಪಕ್ಷಗಳು ಎಸ್ಐಆರ್ ಪ್ರಕ್ರಿಯೆಯ ಕುರಿತು ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ಪ್ರಕ್ರಿಯೆಯ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದ ಬೆನ್ನಲ್ಲೇ, ‘ಚುನಾವಣಾ ಆಯೋಗವು ಮತದಾರರೊಂದಿಗೆ ಯಾವಾಗಲೂ ಇರಲಿದೆ’ ಎಂಬ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಹೇಳಿಕೆಯನ್ನು ಆಯೋಗವು ಪುನರುಚ್ಛರಿಸಿದೆ. </p><p>ಇದೇ ವರ್ಷ ರಾಷ್ಟ್ರೀಯ ಮತದಾರರ ದಿನದಂದು ಮಾತನಾಡಿದ್ದ ಜ್ಞಾನೇಶ್ ಕುಮಾರ್, ಚುನಾವಣಾ ಆಯೋಗವು ಹಿಂದೆಯೂ ಮತದಾರರ ಪರವಾಗಿ ಇತ್ತು, ಈಗಲೂ ಇದೆ ಮತ್ತು ಮುಂದೆಯೂ ಇರಲಿದೆ’ ಎಂದು ಹೇಳಿದ್ದರು.</p><p>ಎಸ್ಐಆರ್ ನಡೆಸುವ ಚುನಾವಣಾ ಆಯೋಗದ ಅಧಿಕಾರವನ್ನು ಸುಪ್ರೀಂ ಕೋರ್ಟ್ ಬುಧವಾರ ಎತ್ತಿಹಿಡಿದಿದೆ. ಅಷ್ಟೇ ಅಲ್ಲದೆ, ಈ ಪ್ರಕ್ರಿಯೆಯು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳ ಸಾಂವಿಧಾನಿಕ ಆದೇಶಕ್ಕೆ ಜೀವ ತುಂಬುತ್ತದೆ ಎಂದು ನ್ಯಾಯಾಲಯ ಹೇಳಿದೆ.</p><p>'ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳು ಕೇವಲ ಮತದಾನದ ತಾಂತ್ರಿಕ ಪ್ರಕ್ರಿಯೆಯನ್ನು ಮಾತ್ರ ಅವಲಂಬಿಸಿರುವುದಿಲ್ಲ, ಬದಲಿಗೆ ಪ್ರಜಾಪ್ರಭುತ್ವ ಪ್ರಕ್ರಿಯೆಯ ತಳಹದಿಯಾಗಿರುವ ಮತದಾರರ ಪಟ್ಟಿಯ ಸಮಗ್ರತೆ, ನಿಖರತೆ ಮತ್ತು ಪವಿತ್ರತೆಯನ್ನು ಅಷ್ಟೇ ಪ್ರಮಾಣದಲ್ಲಿ ಅವಲಂಬಿಸಿರುತ್ತವೆ ಎಂದು ಅಭಿಪ್ರಾಯಪಟ್ಟಿದೆ.</p><p>ದೇಶದ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಮೂಲಕ ಚುನಾವಣಾ ಆಯೋಗವು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ, ಹಲವು ವಿರೋಧ ಪಕ್ಷಗಳು ಎಸ್ಐಆರ್ ಪ್ರಕ್ರಿಯೆಯ ಕುರಿತು ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>