ಮೀನು ನಮಗೆ ಶುಭ ಸಂಕೇತ. ರಾಜ್ಯದಲ್ಲಿ ಕಾಂಗ್ರೆಸ್ ಖಂಡಿತವಾಗಿಯೂ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ಕಾರ್ಯಕರ್ತರದ್ದು. ಬಕೆಟ್ನಲ್ಲಿ ನೀರು ತುಂಬಿ ಮೀನನ್ನು ಇಟ್ಟಿರುವ ಅವರು, ಇದು ಇದ್ದರೆ ಸಾಕು ನಮ್ಮ ಗೆಲುವು ಗ್ಯಾರಂಟಿ ಎಂದು ಅವರು ಘೋಷಣೆ ಕೂಗಿ ಸಂಭ್ರಮಿಸಿದರು.
ಮತ್ತೊಂದೆಡೆ ಮತ ಎಣಿಕೆ ಪ್ರಗತಿ ಸಾಧಿಸುತ್ತಿದ್ದಂತೆ ರಾಜ್ಯದಲ್ಲಿ ಬಿಜೆಪಿ ಮುನ್ನೆಡೆ ಕಾಯ್ದುಕೊಂಡಿದೆ. ಹೀಗಾಗಿ ಅದೃಷ್ಟ ಯಾರಿಗೆ ಒಲಿಯಲಿದೆ ಎಂಬುದು ಪೂರ್ಣ ಫಲಿತಾಂಶ ಪ್ರಕಟದ ನಂತರವೇ ತಿಳಿಯಲಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡರು ಹೇಳಿದ್ದಾರೆ.