<p><strong>ನವದೆಹಲಿ:</strong> ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿಯನ್ನು ತೀವ್ರಗೊಳಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ‘ದೇಶ ಚುನಾವಣಾ ವ್ಯವಸ್ಥೆ ಈಗಾಗಲೇ ಸತ್ತಿದೆ ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ’ ಎಂದು ಶನಿವಾರ ಆರೋಪಿಸಿದರು.</p><p><strong>‘ಸಾಂವಿಧಾನಿಕ ಸವಾಲುಗಳು:</strong> ದೃಷ್ಟಿಕೋನ ಮತ್ತು ಮಾರ್ಗಗಳು’ ಕುರಿತ ಸಮಾವೇಶದಲ್ಲಿ ಅವರು ಮಾತನಾಡಿದರು.</p><p>ಪ್ರಧಾನಿ ಅವರು ‘ಅಲ್ಪ ಬಹುಮತ’ದೊಂದಿಗೆ ಅಧಿಕಾರದಲ್ಲಿದ್ದಾರೆ. ಅದರಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಅವರು ಆ ಸ್ಥಾನದಲ್ಲಿ ಮುಂದುವರಿಯುವುದಿಲ್ಲ ಎಂಬುದು ನೆನಪಿರಲಿ ಎಂದು ರಾಹುಲ್ ಆರೋಪಿಸಿದರು.</p>.‘ದೇಶದ ಚುನಾವಣಾ ವ್ಯವಸ್ಥೆ ವಿಶ್ವಕ್ಕೆ ಮಾದರಿ’.ದೇಶದ ಚುನಾವಣಾ ವ್ಯವಸ್ಥೆಯಲ್ಲಿ ಗಂಭೀರ ಸಮಸ್ಯೆ: ರಾಹುಲ್ ಗಾಂಧಿ.<p>ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಮತ ಕಳ್ಳತನ ಆಗಿರುವುದು ಗಮನಕ್ಕೆ ಬಂದಿದೆ. ಅಲ್ಲಿ ಮತದಾರರ ಪಟ್ಟಿಯಲ್ಲಿದ್ದವರ ಭಾವಚಿತ್ರಗಳು ಮತ್ತು ಮತದಾರರನ್ನು ನಮ್ಮ ಪಕ್ಷದವರು ಪರಿಶೀಲಿಸಿದ್ದಾರೆ. ಅಲ್ಲಿ 1.5 ಲಕ್ಷ ಮತದಾರರು ‘ನಕಲಿ’ ಎಂಬುದು ಈ ವೇಳೆ ಗೊತ್ತಾಗಿದೆ ಎಂದು ಅವರು ಮಾಹಿತಿ ನೀಡಿದರು.</p><p>ಈ ದತ್ತಾಂಶವನ್ನು ಬಿಡುಗಡೆಯಾದರೆ ಚುನಾವಣಾ ವ್ಯವಸ್ಥೆ ಬಗ್ಗೆ ಆಘಾತ ಮೂಡಿಸುತ್ತದೆ. ಆ ದಾಖಲೆಗಳನ್ನು ಅಕ್ಷರಷಃ ‘ಆಟಂ ಬಾಂಬ್’ ಎಂದರೆ ತಪ್ಪಾಗದು ಎಂದು ಅವರು ಪ್ರತಿಪಾದಿಸಿದರು.</p><p>‘ನಿಜ ಏನೆಂದರೆ ಭಾರತ ಚುನಾವಣಾ ವ್ಯವಸ್ಥೆ ಈಗಾಗಲೇ ಸತ್ತಿದೆ. ಪ್ರಧಾನಿ ಅವರಂತೂ ಅತ್ಯಂತ ತೆಳುವಾದ ಬಹುಮತದ ಹೊಂದಿದ್ದಾರೆ. ಅದರಲ್ಲಿ 10–15 ಸೀಟುಗಳು ಈ ಅಕ್ರಮದ ಮೂಲಕ ಬಂದಿದ್ದು (ವಾಸ್ತವವಾಗಿ ಅದು 70ರಿಂದ 100 ಇರಬಹುದು ಎಂಬ ಶಂಕೆಯಿದೆ) ಎಂಬುದು ಸ್ಪಷ್ಟವಾದರೆ ಅವರು ಆ ಸ್ಥಾನದಲ್ಲಿ ಮುಂದುವರಿಯುವುದಿಲ್ಲ’ ಎಂದು ಅವರು ಪ್ರತಿಪಾದಿಸಿದರು.</p><p>‘ಲೋಕಸಭಾ ಚುನಾವಣೆಯಲ್ಲಿ ಹೇಗೆ ಅಕ್ರಮ ಎಸಗಲಾಗಿದೆ ಎಂಬುದನ್ನು ಮುಂದಿನ ದಿನಗಳಲ್ಲಿ ಎಳೆ ಎಳೆಯಾಗಿ ತೆರೆದಿಡುತ್ತೇವೆ’ ಎಂದು ಅವರು ವಿವರಿಸಿದರು.</p><p>‘ಈ ಅಕ್ರಮಗಳ ಬಗ್ಗೆ ನನ್ನ ಬಳಿ ಹಿಂದೆ ದಾಖಲೆಗಳು ಇರಲಿಲ್ಲ. ಆದರೆ ಈಗ ಶೇ 100ರಷ್ಟು ಪುರಾವೆಗಳಿದ್ದು, ಅತ್ಯಂತ ವಿಶ್ವಾಸದಿಂದ ಹೇಳುತ್ತಿದ್ದೇನೆ’ ಎಂದರು. </p><p>‘ಚುನಾವಣಾ ವ್ಯವಸ್ಥೆಯಲ್ಲಿ ಏನೋ ತಪ್ಪು ನಡೆಯುತ್ತಿದೆ ಎಂಬ ಸಂಶಯ 2014ರಿಂದಲೂ ಬಂದಿತ್ತು. ಗುಜರಾತ್, ರಾಜಸ್ಥಾನ ಮತ್ತು ಮಧ್ಯಪ್ರದೇಶ ಚುನಾವಣೆಗಳಲ್ಲಿ ಕಾಂಗ್ರೆಸ್ ಒಂದೂ ಕ್ಷೇತ್ರದಲ್ಲಿ ಗೆಲ್ಲದಿದ್ದಾಗಂತೂ ಆಶ್ಚರ್ಯವಾಗಿತ್ತು’ ಎಂದು ಅವರು ಹೇಳಿದರು. </p>.ಚುನಾವಣಾ ಬಾಂಡ್ ದೇಶದ ಇತಿಹಾಸದಲ್ಲೇ ದೊಡ್ಡ ಹಗರಣ: ಕಾಂಗ್ರೆಸ್.ಸಂಪಾದಕೀಯ: ಚುನಾವಣಾ ಬಾಂಡ್ ವ್ಯವಸ್ಥೆ ಸಲ್ಲ– ಇದು ಪ್ರಜಾತಂತ್ರಕ್ಕೆ ಅಪಾಯಕಾರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿಯನ್ನು ತೀವ್ರಗೊಳಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ‘ದೇಶ ಚುನಾವಣಾ ವ್ಯವಸ್ಥೆ ಈಗಾಗಲೇ ಸತ್ತಿದೆ ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ’ ಎಂದು ಶನಿವಾರ ಆರೋಪಿಸಿದರು.</p><p><strong>‘ಸಾಂವಿಧಾನಿಕ ಸವಾಲುಗಳು:</strong> ದೃಷ್ಟಿಕೋನ ಮತ್ತು ಮಾರ್ಗಗಳು’ ಕುರಿತ ಸಮಾವೇಶದಲ್ಲಿ ಅವರು ಮಾತನಾಡಿದರು.</p><p>ಪ್ರಧಾನಿ ಅವರು ‘ಅಲ್ಪ ಬಹುಮತ’ದೊಂದಿಗೆ ಅಧಿಕಾರದಲ್ಲಿದ್ದಾರೆ. ಅದರಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಅವರು ಆ ಸ್ಥಾನದಲ್ಲಿ ಮುಂದುವರಿಯುವುದಿಲ್ಲ ಎಂಬುದು ನೆನಪಿರಲಿ ಎಂದು ರಾಹುಲ್ ಆರೋಪಿಸಿದರು.</p>.‘ದೇಶದ ಚುನಾವಣಾ ವ್ಯವಸ್ಥೆ ವಿಶ್ವಕ್ಕೆ ಮಾದರಿ’.ದೇಶದ ಚುನಾವಣಾ ವ್ಯವಸ್ಥೆಯಲ್ಲಿ ಗಂಭೀರ ಸಮಸ್ಯೆ: ರಾಹುಲ್ ಗಾಂಧಿ.<p>ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಮತ ಕಳ್ಳತನ ಆಗಿರುವುದು ಗಮನಕ್ಕೆ ಬಂದಿದೆ. ಅಲ್ಲಿ ಮತದಾರರ ಪಟ್ಟಿಯಲ್ಲಿದ್ದವರ ಭಾವಚಿತ್ರಗಳು ಮತ್ತು ಮತದಾರರನ್ನು ನಮ್ಮ ಪಕ್ಷದವರು ಪರಿಶೀಲಿಸಿದ್ದಾರೆ. ಅಲ್ಲಿ 1.5 ಲಕ್ಷ ಮತದಾರರು ‘ನಕಲಿ’ ಎಂಬುದು ಈ ವೇಳೆ ಗೊತ್ತಾಗಿದೆ ಎಂದು ಅವರು ಮಾಹಿತಿ ನೀಡಿದರು.</p><p>ಈ ದತ್ತಾಂಶವನ್ನು ಬಿಡುಗಡೆಯಾದರೆ ಚುನಾವಣಾ ವ್ಯವಸ್ಥೆ ಬಗ್ಗೆ ಆಘಾತ ಮೂಡಿಸುತ್ತದೆ. ಆ ದಾಖಲೆಗಳನ್ನು ಅಕ್ಷರಷಃ ‘ಆಟಂ ಬಾಂಬ್’ ಎಂದರೆ ತಪ್ಪಾಗದು ಎಂದು ಅವರು ಪ್ರತಿಪಾದಿಸಿದರು.</p><p>‘ನಿಜ ಏನೆಂದರೆ ಭಾರತ ಚುನಾವಣಾ ವ್ಯವಸ್ಥೆ ಈಗಾಗಲೇ ಸತ್ತಿದೆ. ಪ್ರಧಾನಿ ಅವರಂತೂ ಅತ್ಯಂತ ತೆಳುವಾದ ಬಹುಮತದ ಹೊಂದಿದ್ದಾರೆ. ಅದರಲ್ಲಿ 10–15 ಸೀಟುಗಳು ಈ ಅಕ್ರಮದ ಮೂಲಕ ಬಂದಿದ್ದು (ವಾಸ್ತವವಾಗಿ ಅದು 70ರಿಂದ 100 ಇರಬಹುದು ಎಂಬ ಶಂಕೆಯಿದೆ) ಎಂಬುದು ಸ್ಪಷ್ಟವಾದರೆ ಅವರು ಆ ಸ್ಥಾನದಲ್ಲಿ ಮುಂದುವರಿಯುವುದಿಲ್ಲ’ ಎಂದು ಅವರು ಪ್ರತಿಪಾದಿಸಿದರು.</p><p>‘ಲೋಕಸಭಾ ಚುನಾವಣೆಯಲ್ಲಿ ಹೇಗೆ ಅಕ್ರಮ ಎಸಗಲಾಗಿದೆ ಎಂಬುದನ್ನು ಮುಂದಿನ ದಿನಗಳಲ್ಲಿ ಎಳೆ ಎಳೆಯಾಗಿ ತೆರೆದಿಡುತ್ತೇವೆ’ ಎಂದು ಅವರು ವಿವರಿಸಿದರು.</p><p>‘ಈ ಅಕ್ರಮಗಳ ಬಗ್ಗೆ ನನ್ನ ಬಳಿ ಹಿಂದೆ ದಾಖಲೆಗಳು ಇರಲಿಲ್ಲ. ಆದರೆ ಈಗ ಶೇ 100ರಷ್ಟು ಪುರಾವೆಗಳಿದ್ದು, ಅತ್ಯಂತ ವಿಶ್ವಾಸದಿಂದ ಹೇಳುತ್ತಿದ್ದೇನೆ’ ಎಂದರು. </p><p>‘ಚುನಾವಣಾ ವ್ಯವಸ್ಥೆಯಲ್ಲಿ ಏನೋ ತಪ್ಪು ನಡೆಯುತ್ತಿದೆ ಎಂಬ ಸಂಶಯ 2014ರಿಂದಲೂ ಬಂದಿತ್ತು. ಗುಜರಾತ್, ರಾಜಸ್ಥಾನ ಮತ್ತು ಮಧ್ಯಪ್ರದೇಶ ಚುನಾವಣೆಗಳಲ್ಲಿ ಕಾಂಗ್ರೆಸ್ ಒಂದೂ ಕ್ಷೇತ್ರದಲ್ಲಿ ಗೆಲ್ಲದಿದ್ದಾಗಂತೂ ಆಶ್ಚರ್ಯವಾಗಿತ್ತು’ ಎಂದು ಅವರು ಹೇಳಿದರು. </p>.ಚುನಾವಣಾ ಬಾಂಡ್ ದೇಶದ ಇತಿಹಾಸದಲ್ಲೇ ದೊಡ್ಡ ಹಗರಣ: ಕಾಂಗ್ರೆಸ್.ಸಂಪಾದಕೀಯ: ಚುನಾವಣಾ ಬಾಂಡ್ ವ್ಯವಸ್ಥೆ ಸಲ್ಲ– ಇದು ಪ್ರಜಾತಂತ್ರಕ್ಕೆ ಅಪಾಯಕಾರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>