<p><strong>ನವದೆಹಲಿ</strong>: ಉಪರಾಷ್ಟ್ರಪತಿ ಆಯ್ಕೆಗೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಶುಕ್ರವಾರ ತಿಳಿಸಿದೆ.</p><p>ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ನೂತನ ಅಭ್ಯರ್ಥಿ ಆಯ್ಕೆಗೆ ಸಕಲ ಸಿದ್ಧತೆ ನಡೆಸಿರುವ ಆಯೋಗ, ಗುರುವಾರವಷ್ಟೇ ಮತ ಮೌಲ್ಯಗಳ ಪಟ್ಟಿ (ಮತದಾರರ ಪಟ್ಟಿ) ಅಂತಿಮಗೊಳಿಸಿತ್ತು.</p><p>ಧನಕರ್ ಅವರು ಜುಲೈ 21ರಂದು ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ಅಧಿಕಾರಾವಧಿ ಇನ್ನೂ ಎರಡು ವರ್ಷವಿತ್ತು.</p><ul><li><p><strong>ಅಧಿಸೂಚನೆ ಪ್ರಕಟ</strong>: ಆಗಸ್ಟ್ 7</p></li><li><p><strong>ನಾಮಪತ್ರ ಸಲ್ಲಿಕೆ ಕೊನೇ ದಿನ</strong>: ಆಗಸ್ಟ್ 21</p></li><li><p><strong>ನಾಮಪತ್ರ ಪರಿಶೀಲನೆ</strong>: ಆಗಸ್ಟ್ 22</p></li><li><p><strong>ನಾಮಪತ್ರ ಹಿಂಪಡೆಯಲು ಕೊನೇ ದಿನ</strong>: ಆಗಸ್ಟ್ 25</p></li><li><p><strong>ಮತದಾನ ದಿನಾಂಕ</strong>: ಸೆಪ್ಟೆಂಬರ್ 9 (ಸಮಯ: ಬೆಳಿಗ್ಗೆ 10 – ಸಂಜೆ 5)</p></li><li><p><strong>ಮತ ಎಣಿಕೆ</strong>: ಸೆಪ್ಟೆಂಬರ್ 9</p></li></ul>.ಸಂಪಾದಕೀಯ | ಧನಕರ್ ದಿಢೀರ್ ರಾಜೀನಾಮೆ: ಪ್ರಶ್ನೆಗಳು ಹಲವು, ಕಾರಣ ನಿಗೂಢ.ರಾಜೀನಾಮೆ ಘೋಷಣೆಗೂ ಮುನ್ನ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ್ದ ಧನಕರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಉಪರಾಷ್ಟ್ರಪತಿ ಆಯ್ಕೆಗೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಶುಕ್ರವಾರ ತಿಳಿಸಿದೆ.</p><p>ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ನೂತನ ಅಭ್ಯರ್ಥಿ ಆಯ್ಕೆಗೆ ಸಕಲ ಸಿದ್ಧತೆ ನಡೆಸಿರುವ ಆಯೋಗ, ಗುರುವಾರವಷ್ಟೇ ಮತ ಮೌಲ್ಯಗಳ ಪಟ್ಟಿ (ಮತದಾರರ ಪಟ್ಟಿ) ಅಂತಿಮಗೊಳಿಸಿತ್ತು.</p><p>ಧನಕರ್ ಅವರು ಜುಲೈ 21ರಂದು ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ಅಧಿಕಾರಾವಧಿ ಇನ್ನೂ ಎರಡು ವರ್ಷವಿತ್ತು.</p><ul><li><p><strong>ಅಧಿಸೂಚನೆ ಪ್ರಕಟ</strong>: ಆಗಸ್ಟ್ 7</p></li><li><p><strong>ನಾಮಪತ್ರ ಸಲ್ಲಿಕೆ ಕೊನೇ ದಿನ</strong>: ಆಗಸ್ಟ್ 21</p></li><li><p><strong>ನಾಮಪತ್ರ ಪರಿಶೀಲನೆ</strong>: ಆಗಸ್ಟ್ 22</p></li><li><p><strong>ನಾಮಪತ್ರ ಹಿಂಪಡೆಯಲು ಕೊನೇ ದಿನ</strong>: ಆಗಸ್ಟ್ 25</p></li><li><p><strong>ಮತದಾನ ದಿನಾಂಕ</strong>: ಸೆಪ್ಟೆಂಬರ್ 9 (ಸಮಯ: ಬೆಳಿಗ್ಗೆ 10 – ಸಂಜೆ 5)</p></li><li><p><strong>ಮತ ಎಣಿಕೆ</strong>: ಸೆಪ್ಟೆಂಬರ್ 9</p></li></ul>.ಸಂಪಾದಕೀಯ | ಧನಕರ್ ದಿಢೀರ್ ರಾಜೀನಾಮೆ: ಪ್ರಶ್ನೆಗಳು ಹಲವು, ಕಾರಣ ನಿಗೂಢ.ರಾಜೀನಾಮೆ ಘೋಷಣೆಗೂ ಮುನ್ನ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ್ದ ಧನಕರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>