<p><strong>ಲಖನೌ(ಉತ್ತರ ಪ್ರದೇಶ):</strong> ‘ವಿದ್ಯುನ್ಮಾನ ಮತಯಂತ್ರಗಳ(ಇವಿಎಂ) ಬದಲು ಮತ ಪತ್ರಗಳ(ಬ್ಯಾಲೆಟ್ ಪೇಪರ್) ಮೂಲಕ ಚುನಾವಣೆ ನಡೆದರೆ ಬಿಎಸ್ಪಿಯು ಕಳೆದುಹೋದ ತನ್ನ ರಾಜಕೀಯ ನೆಲೆಯನ್ನು ಮತ್ತೆ ಪಡೆಯಲಿದೆ’ ಎಂದು ಬಹುಜನ ಸಮಾಜ ಪಕ್ಷದ(ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಹೇಳಿದರು.</p><p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎಸ್ಪಿ ಅಭ್ಯರ್ಥಿಗಳು ಗೆಲ್ಲದಂತೆ ತಡೆಯಲು ಇವಿಎಂಗಳನ್ನು ತಿರುಚಲಾಗುತ್ತಿದೆ ಎಂದು ಆರೋಪಿಸಿದರು.</p><p>‘ಚುನಾವಣೆಗಳು ದೊಡ್ಡದಾಗಿರಲಿ, ಚಿಕ್ಕದಾಗಿರಲಿ ಹಿಂದಿನಂತೆ ಬ್ಯಾಲೆಟ್ ಪೇಪರ್ಗಳ ಮೂಲಕವೇ ಮತದಾನ ನಡೆಸುವಂತೆ ಬಿಎಸ್ಪಿ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ’ ಎಂದು ಹೇಳಿದರು.</p><p>‘ಇವಿಎಂಗಳನ್ನು ಬಳಸಿಕೊಂಡು ಬಿಎಸ್ಪಿ ಅಭ್ಯರ್ಥಿಗಳನ್ನು ಸೋಲಿಸಲಾಗುತ್ತಿದೆ. ಆ ಮೂಲಕ ಬಿಎಸ್ಪಿ ಪಕ್ಷದ ಮೇಲೆ ದಲಿತ ಮತ್ತು ವಂಚಿತ ವರ್ಗದ ಮತದಾರರಲ್ಲಿ ನಂಬಿಕೆ ಮುರಿಯುವ ಕೆಲಸ ನಡೆಯುತ್ತಿದೆ’ ಎಂದರು.</p><p>‘ಈಗಿನ ಸರ್ಕಾರ ಈ ಕೆಲಸ ಮಾಡದಿದ್ದರೂ, ಮುಂದೆ ಅಧಿಕಾರಕ್ಕೆ ಬರುವ ಸರ್ಕಾರ(ಬಿಜೆಪಿಯೇತರ) ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲಿದೆ ಎಂದು ಭಾವಿಸುತ್ತೇನೆ’ ಎಂದು ಹೇಳಿದರು.</p><p>‘ಚುನಾವಣಾ ಪ್ರಕ್ರಿಯೆಯು ಮತ್ತೆ ಬ್ಯಾಲೆಟ್ ಪೇಪರ್ಗಳಿಗೆ ಬದಲಾದರೆ ಬಿಎಸ್ಪಿ ತನ್ನ ಕಳೆದುಹೋದ ರಾಜಕೀಯ ನೆಲೆಯನ್ನು ಮರಳಿ ಪಡೆಯುತ್ತದೆ ಮತ್ತು ಅದರ ಒಳ್ಳೆಯ ದಿನಗಳು ಮರಳುತ್ತವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ(ಉತ್ತರ ಪ್ರದೇಶ):</strong> ‘ವಿದ್ಯುನ್ಮಾನ ಮತಯಂತ್ರಗಳ(ಇವಿಎಂ) ಬದಲು ಮತ ಪತ್ರಗಳ(ಬ್ಯಾಲೆಟ್ ಪೇಪರ್) ಮೂಲಕ ಚುನಾವಣೆ ನಡೆದರೆ ಬಿಎಸ್ಪಿಯು ಕಳೆದುಹೋದ ತನ್ನ ರಾಜಕೀಯ ನೆಲೆಯನ್ನು ಮತ್ತೆ ಪಡೆಯಲಿದೆ’ ಎಂದು ಬಹುಜನ ಸಮಾಜ ಪಕ್ಷದ(ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಹೇಳಿದರು.</p><p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎಸ್ಪಿ ಅಭ್ಯರ್ಥಿಗಳು ಗೆಲ್ಲದಂತೆ ತಡೆಯಲು ಇವಿಎಂಗಳನ್ನು ತಿರುಚಲಾಗುತ್ತಿದೆ ಎಂದು ಆರೋಪಿಸಿದರು.</p><p>‘ಚುನಾವಣೆಗಳು ದೊಡ್ಡದಾಗಿರಲಿ, ಚಿಕ್ಕದಾಗಿರಲಿ ಹಿಂದಿನಂತೆ ಬ್ಯಾಲೆಟ್ ಪೇಪರ್ಗಳ ಮೂಲಕವೇ ಮತದಾನ ನಡೆಸುವಂತೆ ಬಿಎಸ್ಪಿ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ’ ಎಂದು ಹೇಳಿದರು.</p><p>‘ಇವಿಎಂಗಳನ್ನು ಬಳಸಿಕೊಂಡು ಬಿಎಸ್ಪಿ ಅಭ್ಯರ್ಥಿಗಳನ್ನು ಸೋಲಿಸಲಾಗುತ್ತಿದೆ. ಆ ಮೂಲಕ ಬಿಎಸ್ಪಿ ಪಕ್ಷದ ಮೇಲೆ ದಲಿತ ಮತ್ತು ವಂಚಿತ ವರ್ಗದ ಮತದಾರರಲ್ಲಿ ನಂಬಿಕೆ ಮುರಿಯುವ ಕೆಲಸ ನಡೆಯುತ್ತಿದೆ’ ಎಂದರು.</p><p>‘ಈಗಿನ ಸರ್ಕಾರ ಈ ಕೆಲಸ ಮಾಡದಿದ್ದರೂ, ಮುಂದೆ ಅಧಿಕಾರಕ್ಕೆ ಬರುವ ಸರ್ಕಾರ(ಬಿಜೆಪಿಯೇತರ) ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲಿದೆ ಎಂದು ಭಾವಿಸುತ್ತೇನೆ’ ಎಂದು ಹೇಳಿದರು.</p><p>‘ಚುನಾವಣಾ ಪ್ರಕ್ರಿಯೆಯು ಮತ್ತೆ ಬ್ಯಾಲೆಟ್ ಪೇಪರ್ಗಳಿಗೆ ಬದಲಾದರೆ ಬಿಎಸ್ಪಿ ತನ್ನ ಕಳೆದುಹೋದ ರಾಜಕೀಯ ನೆಲೆಯನ್ನು ಮರಳಿ ಪಡೆಯುತ್ತದೆ ಮತ್ತು ಅದರ ಒಳ್ಳೆಯ ದಿನಗಳು ಮರಳುತ್ತವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>