<p><strong>ನವದೆಹಲಿ</strong>: ಚುನಾವಣಾ ಬಾಂಡ್ಗಳಿಗೆ ಸಂಬಂಧಿಸಿ ಪೂರ್ಣ ಮಾಹಿತಿ ಬಹಿರಂಗಪಡಿಸದ್ದಕ್ಕೆ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ಅನ್ನು ಸುಪ್ರೀಂ ಕೋರ್ಟ್ ಮತ್ತೊಮ್ಮೆ ತೀವ್ರ ತರಾಟೆಗೆ ತೆಗೆದುಕೊಂಡಿದೆ. </p><p>‘ಅಲ್ಪ ಸ್ವಲ್ಪ ಮಾಹಿತಿ ನೀಡುವುದನ್ನು ನಿಲ್ಲಿಸಿ. ಮಾರ್ಚ್ 21ರ ಒಳಗಾಗಿ ಸಂಪೂರ್ಣ ಮಾಹಿತಿ ಬಹಿರಂಗಪಡಿಸಿ’ ಎಂದು ಸೋಮವಾರ ತಾಕೀತು ಮಾಡಿತು.</p><p>ಬಾಂಡ್ಗಳಿಗೆ ಇರುವ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಬಹಿರಂಗಪಡಿಸುವಂತೆಯೂ ನಿರ್ದೇಶನ ನೀಡಿದೆ. ಈ ಸಂಖ್ಯೆಯನ್ನು ಬಹಿರಂಗಪಡಿಸಿದರೆ ಬಾಂಡ್ಗಳ ಖರೀದಿದಾರರು ಯಾವ ರಾಜಕೀಯ ಪಕ್ಷಗಳಿಗೆ ಎಷ್ಟು<br>ದೇಣಿಗೆ ನೀಡಿದ್ದಾರೆ ಎಂಬುದು ಬಯಲಾಗುತ್ತದೆ. </p><p>‘ಎಸ್ಬಿಐ ತನ್ನ ಬಳಿಯಿರುವ ಎಲ್ಲ ಮಾಹಿತಿ ಬಹಿರಂಗಪಡಿಸಬೇಕು ಎಂಬುದರಲ್ಲಿ ಯಾವ ಅನುಮಾನವೂ ಬೇಡ’ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐವರು ಸದಸ್ಯರ ಪೀಠ ಹೇಳಿತು.</p><p>ಎಸ್ಬಿಐ ನೀಡುವ ಮಾಹಿತಿಯನ್ನು ಚುನಾವಣಾ ಆಯೋಗವು ವೆಬ್ಸೈಟ್ನಲ್ಲಿ ಪ್ರಕಟಿಸಬೇಕು ಎಂದು ಪೀಠ ಸೂಚಿಸಿತು. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ.ಆರ್. ಗವಾಯಿ, ಜೆ.ಬಿ. ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರು ಪೀಠದ ಇತರ ಸದಸ್ಯರಾಗಿದ್ದಾರೆ.</p><p>‘ಆದೇಶವನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸಲು ಮತ್ತು ಭವಿಷ್ಯದಲ್ಲಿ ಯಾವುದೇ ವಿವಾದ ಉಂಟಾಗುವುದನ್ನು ತಪ್ಪಿಸಲು, ಚುನಾವಣಾ ಬಾಂಡ್ಗಳ ಎಲ್ಲ ವಿವರಗಳನ್ನು ಬಹಿರಂಗಪಡಿಸಿರುವು<br>ದನ್ನು ಸೂಚಿಸುವ ಪ್ರಮಾಣ ಪತ್ರವನ್ನು ಎಸ್ಬಿಐನ ವ್ಯವಸ್ಥಾಪಕ ನಿರ್ದೇಶಕರು ಗುರುವಾರ (ಮಾರ್ಚ್ 21) ಸಂಜೆಯೊಳಗೆ ಸಲ್ಲಿಸಬೇಕು’ ಎಂದು ಪೀಠ ನಿರ್ದೇಶಿಸಿತು.</p><p>‘ನಾವು ಎಲ್ಲ ಮಾಹಿತಿಯನ್ನೂ ನೀಡುತ್ತೇವೆ. ಯಾವುದನ್ನೂ ಮುಚ್ಚಿಡುವುದಿಲ್ಲ’ ಎಂದು ಬ್ಯಾಂಕ್ ಪರ ಹಾಜರಿದ್ದ ಹಿರಿಯ ವಕೀಲ ಹರೀಶ್ ಸಾಳ್ವೆ ಅವರು ಪೀಠಕ್ಕೆ ತಿಳಿಸಿದರು. </p><p><strong>ಎನ್ಜಿಒ ಅರ್ಜಿ ತಿರಸ್ಕಾರ:</strong> ಬಾಂಡ್ ಯೋಜನೆ ಜಾರಿಯಾದಾಗಿನಿಂದ (2018) ಸುಪ್ರೀಂ ಕೋರ್ಟ್ನ ಮಧ್ಯಂತರ ಆದೇಶದವರೆಗಿನ (2019ರ ಏಪ್ರಿಲ್ 12) ಅವಧಿಯಲ್ಲಿ ಖರೀದಿಯಾದ ಬಾಂಡ್ಗಳ ವಿವರ<br>ಗಳನ್ನು ಬಹಿರಂಗ ಪಡಿಸುವಂತೆ ಕೋರಿ ಸಿಟಿಜನ್ಸ್ ರೈಟ್ಸ್ ಟ್ರಸ್ಟ್ ಎಂಬ ಹೆಸರಿನ ಎನ್ಜಿಒ ಸಲ್ಲಿಸಿದ್ದ ಅರ್ಜಿಯನ್ನು ಪೀಠವು ತಿರಸ್ಕರಿಸಿತು.</p>.<p><strong>ಪೀಠ ಹೇಳಿದ್ದು....</strong></p><ul><li><p>ವಿಶಿಷ್ಟ ಗುರುತಿನ ಸಂಖ್ಯೆ ಸೇರಿದಂತೆ ಬಾಂಡ್ಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಬಹಿರಂಗಪಡಿಸುವಂತೆ ನಿರ್ದೇಶಿಸಿದ್ದೆವು. ಅಲ್ಪ ಸ್ವಲ್ಪ ಮಾಹಿತಿ ನೀಡಬಾರದು</p></li><li><p>ಈ ಹಿಂದೆ ನೀಡಿದ ತೀರ್ಪನ್ನು ಎಸ್ಬಿಐ ಪಾಲಿಸಬೇಕು. ಈ ವಿಚಾರದಲ್ಲಿ ಇನ್ನೊಂದು ಆದೇಶಕ್ಕೆ ಕಾಯಬಾರದು</p></li><li><p> ‘ಏನು ಬಹಿರಂಗಪಡಿಸಬೇಕೆಂದು ನೀವೇ ಹೇಳಿ, ನಾವು ಬಹಿರಂಗಪಡಿಸುತ್ತೇವೆ’ ಎಂಬ ಧೋರಣೆಯನ್ನು ಎಸ್ಬಿಐ ತೋರುತ್ತಿದೆ. ಇದು ಸರಿಯಲ್ಲ</p></li></ul><p><strong>ಮೂರನೇ ಬಾರಿ ಹಿನ್ನಡೆ</strong></p><p>ಚುನಾವಣಾ ಬಾಂಡ್ ವಿಚಾರದಲ್ಲಿ ಎಸ್ಬಿಐಗೆ ಸುಪ್ರೀಂ ಕೋರ್ಟ್ನಲ್ಲಿ ಎಂಟು ದಿನಗಳ ಅಂತರದಲ್ಲಿ ಮೂರನೇ ಬಾರಿ ಹಿನ್ನಡೆ ಆಗಿದೆ. </p><ul><li><p>ಬಾಂಡ್ ಕುರಿತ ವಿವರಗಳನ್ನು ಸಲ್ಲಿಸಲು ನೀಡಿದ್ದ ಗಡುವು ವಿಸ್ತರಿಸುವಂತೆ ಕೋರಿ ಬ್ಯಾಂಕ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಾರ್ಚ್ 11ರಂದು ತಳ್ಳಿಹಾಕಿತ್ತು.</p></li><li><p>ಬಾಂಡ್ಗಳಿಗೆ ಸಂಬಂಧಿಸಿದಂತೆ ಅಪೂರ್ಣ ಮಾಹಿತಿ ನೀಡಿದ್ದಕ್ಕಾಗಿ ಮಾರ್ಚ್ 15ರಂದು ಎಸ್ಬಿಐಅನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು.</p></li></ul>.<p><strong>ತುರ್ತು ವಿಚಾರಣೆಗೆ ಒಪ್ಪದ ಪೀಠ</strong></p><p>ಚುನಾವಣಾ ಬಾಂಡ್ ಮಾಹಿತಿ ಬಹಿರಂಗಪಡಿಸದಂತೆ ಕೋರಿ ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟ (ಅಸೋಚಾಮ್) ಹಾಗೂ ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಪೀಠವು ಒಪ್ಪಲಿಲ್ಲ. </p>.<p><strong>‘ಪ್ರಚಾರ ಗಿಟ್ಟಿಸಲು ಕಸರತ್ತು ಬೇಡ’</strong></p><p>ಚುನಾವಣಾ ಬಾಂಡ್ ಮಾಹಿತಿ ಬಹಿರಂಗಪಡಿಸುವಂತೆ ನೀಡಿದ್ದ ತೀರ್ಪನ್ನು ಮರು ಪರಿಶೀಲಿಸುವಂತೆ ಕೋರಿ ಸುಪ್ರೀಂ ಕೋರ್ಟ್ ವಕೀಲರ ಸಂಘದ (ಎಸ್ಸಿಬಿಎ) ಅಧ್ಯಕ್ಷ ಆದಿಶ್ ಸಿ. ಅಗರವಾಲ್ ಬರೆದಿದ್ದ ಪತ್ರವನ್ನು ಪೀಠವು ಇದೇ ವೇಳೆ ತಳ್ಳಿಹಾಕಿತು.</p><p>‘ನೀವು ಹಿರಿಯ ವಕೀಲರು ಮಾತ್ರವಲ್ಲದೆ, ಎಸ್ಸಿಬಿಎ ಅಧ್ಯಕ್ಷರೂ ಆಗಿದ್ದೀರಿ. ಕಾನೂನು ಪ್ರಕ್ರಿಯೆ ಏನೆಂಬುದು ನಿಮಗೆ ತಿಳಿದಿದೆ’ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ಆದಿಶ್ ಅವರನ್ನು ಉದ್ದೇಶಿಸಿ ಹೇಳಿದರು.</p><p>‘ತೀರ್ಪನ್ನು ಸ್ವಯಂಪ್ರೇರಿತರಾಗಿ ಮರು ಪರಿಶೀಲಿಸುವಂತೆ ಕೋರಿ ಪತ್ರ ಬರೆದಿದ್ದೀರಿ. ಇವೆಲ್ಲವೂ, ಪ್ರಚಾರ ಗಿಟ್ಟಿಸಲು ನಡೆಸುವ ಕಸರತ್ತು. ಅದಕ್ಕೆ ನಾವು ಅವಕಾಶ ನೀಡೆವು. ನನಗೆ ಹೆಚ್ಚಿನದ್ದು ಹೇಳುವಂತೆ ಮಾಡಬೇಡಿ. ಇನ್ನೇನಾದರೂ ಹೇಳಿದರೆ ಅದು ನಿಮಗೆ ಇಷ್ಟವಾಗದು’ ಎಂದು<br>ತರಾಟೆಗೆ ತೆಗೆದುಕೊಂಡರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಚುನಾವಣಾ ಬಾಂಡ್ಗಳಿಗೆ ಸಂಬಂಧಿಸಿ ಪೂರ್ಣ ಮಾಹಿತಿ ಬಹಿರಂಗಪಡಿಸದ್ದಕ್ಕೆ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ಅನ್ನು ಸುಪ್ರೀಂ ಕೋರ್ಟ್ ಮತ್ತೊಮ್ಮೆ ತೀವ್ರ ತರಾಟೆಗೆ ತೆಗೆದುಕೊಂಡಿದೆ. </p><p>‘ಅಲ್ಪ ಸ್ವಲ್ಪ ಮಾಹಿತಿ ನೀಡುವುದನ್ನು ನಿಲ್ಲಿಸಿ. ಮಾರ್ಚ್ 21ರ ಒಳಗಾಗಿ ಸಂಪೂರ್ಣ ಮಾಹಿತಿ ಬಹಿರಂಗಪಡಿಸಿ’ ಎಂದು ಸೋಮವಾರ ತಾಕೀತು ಮಾಡಿತು.</p><p>ಬಾಂಡ್ಗಳಿಗೆ ಇರುವ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಬಹಿರಂಗಪಡಿಸುವಂತೆಯೂ ನಿರ್ದೇಶನ ನೀಡಿದೆ. ಈ ಸಂಖ್ಯೆಯನ್ನು ಬಹಿರಂಗಪಡಿಸಿದರೆ ಬಾಂಡ್ಗಳ ಖರೀದಿದಾರರು ಯಾವ ರಾಜಕೀಯ ಪಕ್ಷಗಳಿಗೆ ಎಷ್ಟು<br>ದೇಣಿಗೆ ನೀಡಿದ್ದಾರೆ ಎಂಬುದು ಬಯಲಾಗುತ್ತದೆ. </p><p>‘ಎಸ್ಬಿಐ ತನ್ನ ಬಳಿಯಿರುವ ಎಲ್ಲ ಮಾಹಿತಿ ಬಹಿರಂಗಪಡಿಸಬೇಕು ಎಂಬುದರಲ್ಲಿ ಯಾವ ಅನುಮಾನವೂ ಬೇಡ’ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐವರು ಸದಸ್ಯರ ಪೀಠ ಹೇಳಿತು.</p><p>ಎಸ್ಬಿಐ ನೀಡುವ ಮಾಹಿತಿಯನ್ನು ಚುನಾವಣಾ ಆಯೋಗವು ವೆಬ್ಸೈಟ್ನಲ್ಲಿ ಪ್ರಕಟಿಸಬೇಕು ಎಂದು ಪೀಠ ಸೂಚಿಸಿತು. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ.ಆರ್. ಗವಾಯಿ, ಜೆ.ಬಿ. ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರು ಪೀಠದ ಇತರ ಸದಸ್ಯರಾಗಿದ್ದಾರೆ.</p><p>‘ಆದೇಶವನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸಲು ಮತ್ತು ಭವಿಷ್ಯದಲ್ಲಿ ಯಾವುದೇ ವಿವಾದ ಉಂಟಾಗುವುದನ್ನು ತಪ್ಪಿಸಲು, ಚುನಾವಣಾ ಬಾಂಡ್ಗಳ ಎಲ್ಲ ವಿವರಗಳನ್ನು ಬಹಿರಂಗಪಡಿಸಿರುವು<br>ದನ್ನು ಸೂಚಿಸುವ ಪ್ರಮಾಣ ಪತ್ರವನ್ನು ಎಸ್ಬಿಐನ ವ್ಯವಸ್ಥಾಪಕ ನಿರ್ದೇಶಕರು ಗುರುವಾರ (ಮಾರ್ಚ್ 21) ಸಂಜೆಯೊಳಗೆ ಸಲ್ಲಿಸಬೇಕು’ ಎಂದು ಪೀಠ ನಿರ್ದೇಶಿಸಿತು.</p><p>‘ನಾವು ಎಲ್ಲ ಮಾಹಿತಿಯನ್ನೂ ನೀಡುತ್ತೇವೆ. ಯಾವುದನ್ನೂ ಮುಚ್ಚಿಡುವುದಿಲ್ಲ’ ಎಂದು ಬ್ಯಾಂಕ್ ಪರ ಹಾಜರಿದ್ದ ಹಿರಿಯ ವಕೀಲ ಹರೀಶ್ ಸಾಳ್ವೆ ಅವರು ಪೀಠಕ್ಕೆ ತಿಳಿಸಿದರು. </p><p><strong>ಎನ್ಜಿಒ ಅರ್ಜಿ ತಿರಸ್ಕಾರ:</strong> ಬಾಂಡ್ ಯೋಜನೆ ಜಾರಿಯಾದಾಗಿನಿಂದ (2018) ಸುಪ್ರೀಂ ಕೋರ್ಟ್ನ ಮಧ್ಯಂತರ ಆದೇಶದವರೆಗಿನ (2019ರ ಏಪ್ರಿಲ್ 12) ಅವಧಿಯಲ್ಲಿ ಖರೀದಿಯಾದ ಬಾಂಡ್ಗಳ ವಿವರ<br>ಗಳನ್ನು ಬಹಿರಂಗ ಪಡಿಸುವಂತೆ ಕೋರಿ ಸಿಟಿಜನ್ಸ್ ರೈಟ್ಸ್ ಟ್ರಸ್ಟ್ ಎಂಬ ಹೆಸರಿನ ಎನ್ಜಿಒ ಸಲ್ಲಿಸಿದ್ದ ಅರ್ಜಿಯನ್ನು ಪೀಠವು ತಿರಸ್ಕರಿಸಿತು.</p>.<p><strong>ಪೀಠ ಹೇಳಿದ್ದು....</strong></p><ul><li><p>ವಿಶಿಷ್ಟ ಗುರುತಿನ ಸಂಖ್ಯೆ ಸೇರಿದಂತೆ ಬಾಂಡ್ಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಬಹಿರಂಗಪಡಿಸುವಂತೆ ನಿರ್ದೇಶಿಸಿದ್ದೆವು. ಅಲ್ಪ ಸ್ವಲ್ಪ ಮಾಹಿತಿ ನೀಡಬಾರದು</p></li><li><p>ಈ ಹಿಂದೆ ನೀಡಿದ ತೀರ್ಪನ್ನು ಎಸ್ಬಿಐ ಪಾಲಿಸಬೇಕು. ಈ ವಿಚಾರದಲ್ಲಿ ಇನ್ನೊಂದು ಆದೇಶಕ್ಕೆ ಕಾಯಬಾರದು</p></li><li><p> ‘ಏನು ಬಹಿರಂಗಪಡಿಸಬೇಕೆಂದು ನೀವೇ ಹೇಳಿ, ನಾವು ಬಹಿರಂಗಪಡಿಸುತ್ತೇವೆ’ ಎಂಬ ಧೋರಣೆಯನ್ನು ಎಸ್ಬಿಐ ತೋರುತ್ತಿದೆ. ಇದು ಸರಿಯಲ್ಲ</p></li></ul><p><strong>ಮೂರನೇ ಬಾರಿ ಹಿನ್ನಡೆ</strong></p><p>ಚುನಾವಣಾ ಬಾಂಡ್ ವಿಚಾರದಲ್ಲಿ ಎಸ್ಬಿಐಗೆ ಸುಪ್ರೀಂ ಕೋರ್ಟ್ನಲ್ಲಿ ಎಂಟು ದಿನಗಳ ಅಂತರದಲ್ಲಿ ಮೂರನೇ ಬಾರಿ ಹಿನ್ನಡೆ ಆಗಿದೆ. </p><ul><li><p>ಬಾಂಡ್ ಕುರಿತ ವಿವರಗಳನ್ನು ಸಲ್ಲಿಸಲು ನೀಡಿದ್ದ ಗಡುವು ವಿಸ್ತರಿಸುವಂತೆ ಕೋರಿ ಬ್ಯಾಂಕ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಾರ್ಚ್ 11ರಂದು ತಳ್ಳಿಹಾಕಿತ್ತು.</p></li><li><p>ಬಾಂಡ್ಗಳಿಗೆ ಸಂಬಂಧಿಸಿದಂತೆ ಅಪೂರ್ಣ ಮಾಹಿತಿ ನೀಡಿದ್ದಕ್ಕಾಗಿ ಮಾರ್ಚ್ 15ರಂದು ಎಸ್ಬಿಐಅನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು.</p></li></ul>.<p><strong>ತುರ್ತು ವಿಚಾರಣೆಗೆ ಒಪ್ಪದ ಪೀಠ</strong></p><p>ಚುನಾವಣಾ ಬಾಂಡ್ ಮಾಹಿತಿ ಬಹಿರಂಗಪಡಿಸದಂತೆ ಕೋರಿ ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟ (ಅಸೋಚಾಮ್) ಹಾಗೂ ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಪೀಠವು ಒಪ್ಪಲಿಲ್ಲ. </p>.<p><strong>‘ಪ್ರಚಾರ ಗಿಟ್ಟಿಸಲು ಕಸರತ್ತು ಬೇಡ’</strong></p><p>ಚುನಾವಣಾ ಬಾಂಡ್ ಮಾಹಿತಿ ಬಹಿರಂಗಪಡಿಸುವಂತೆ ನೀಡಿದ್ದ ತೀರ್ಪನ್ನು ಮರು ಪರಿಶೀಲಿಸುವಂತೆ ಕೋರಿ ಸುಪ್ರೀಂ ಕೋರ್ಟ್ ವಕೀಲರ ಸಂಘದ (ಎಸ್ಸಿಬಿಎ) ಅಧ್ಯಕ್ಷ ಆದಿಶ್ ಸಿ. ಅಗರವಾಲ್ ಬರೆದಿದ್ದ ಪತ್ರವನ್ನು ಪೀಠವು ಇದೇ ವೇಳೆ ತಳ್ಳಿಹಾಕಿತು.</p><p>‘ನೀವು ಹಿರಿಯ ವಕೀಲರು ಮಾತ್ರವಲ್ಲದೆ, ಎಸ್ಸಿಬಿಎ ಅಧ್ಯಕ್ಷರೂ ಆಗಿದ್ದೀರಿ. ಕಾನೂನು ಪ್ರಕ್ರಿಯೆ ಏನೆಂಬುದು ನಿಮಗೆ ತಿಳಿದಿದೆ’ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ಆದಿಶ್ ಅವರನ್ನು ಉದ್ದೇಶಿಸಿ ಹೇಳಿದರು.</p><p>‘ತೀರ್ಪನ್ನು ಸ್ವಯಂಪ್ರೇರಿತರಾಗಿ ಮರು ಪರಿಶೀಲಿಸುವಂತೆ ಕೋರಿ ಪತ್ರ ಬರೆದಿದ್ದೀರಿ. ಇವೆಲ್ಲವೂ, ಪ್ರಚಾರ ಗಿಟ್ಟಿಸಲು ನಡೆಸುವ ಕಸರತ್ತು. ಅದಕ್ಕೆ ನಾವು ಅವಕಾಶ ನೀಡೆವು. ನನಗೆ ಹೆಚ್ಚಿನದ್ದು ಹೇಳುವಂತೆ ಮಾಡಬೇಡಿ. ಇನ್ನೇನಾದರೂ ಹೇಳಿದರೆ ಅದು ನಿಮಗೆ ಇಷ್ಟವಾಗದು’ ಎಂದು<br>ತರಾಟೆಗೆ ತೆಗೆದುಕೊಂಡರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>