<p><strong>ನವದೆಹಲಿ</strong>: ‘ಭಾರತದಲ್ಲಿ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ಜಗತ್ತಿನಲ್ಲೇ ಅತ್ಯಂತ ಕಠಿಣ ಮತ್ತು ಪಾರದರ್ಶಕವಾದ ಪ್ರಕ್ರಿಯೆ’ ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಹೇಳಿದರು.</p>.<p>‘ಚುನಾವಣಾ ಸಮಗ್ರತೆ’ ಕುರಿತು ಸ್ಟಾಕ್ಹೋಮ್ನಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಸಮಾವೇಶದಲ್ಲಿ ಬುಧವಾರ ದಿಕ್ಸೂಚಿ ಭಾಷಣ ಮಾಡಿದ ಅವರು, ‘ಪರಿಷ್ಕರಣೆಯ ಸಮಯದಲ್ಲೇ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳೊಂದಿಗೆ ಮತದಾರರ ಪಟ್ಟಿಯನ್ನು ಹಂಚಿಕೊಳ್ಳಲಾಗುವುದು’ ಎಂದು ಹೇಳಿದರು.</p>.<p>50ಕ್ಕೂ ಹೆಚ್ಚು ದೇಶಗಳಲ್ಲಿನ ಚುನಾವಣಾ ಸಂಸ್ಥೆಗಳ 100ಕ್ಕೂ ಹೆಚ್ಚು ಪ್ರತಿನಿಧಿಗಳು ಈ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.</p>.<p>‘1960ರಿಂದಲೂ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಗೆ ಮತದಾರರ ಪಟ್ಟಿಯನ್ನು ನೀಡಲಾಗುತ್ತಿದೆ. ಇದಕ್ಕೆ ಸಂಬಂಧಿಸಿದ ಆಕ್ಷೇಪಣೆ, ಅಹವಾಲುಗಳನ್ನು ಸ್ವೀಕರಿಸಲಾಗುತ್ತಿದೆ’ ಎಂದು ಸಿಇಸಿ ತಿಳಿಸಿದರು.</p>.<p>ಕಾಂಗ್ರೆಸ್ ಸೇರಿದಂತೆ ಪ್ರಮುಖ ವಿರೋಧ ಪಕ್ಷಗಳು ಮತದಾರರ ಪಟ್ಟಿ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಹೊತ್ತಿನಲ್ಲೇ ಚುನಾವಣಾ ಆಯುಕ್ತರು ಈ ಹೇಳಿಕೆ ನೀಡಿದ್ದಾರೆ.</p>.<p>ವಿರೋಧ ಪಕ್ಷದ ಮುಖಂಡರ ಆರೋಪಗಳನ್ನು ಚುನಾವಣಾ ಆಯೋಗವು ತಳ್ಳಿಹಾಕಿದ್ದು, ಅಸಂಬದ್ಧ ಎಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಭಾರತದಲ್ಲಿ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ಜಗತ್ತಿನಲ್ಲೇ ಅತ್ಯಂತ ಕಠಿಣ ಮತ್ತು ಪಾರದರ್ಶಕವಾದ ಪ್ರಕ್ರಿಯೆ’ ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಹೇಳಿದರು.</p>.<p>‘ಚುನಾವಣಾ ಸಮಗ್ರತೆ’ ಕುರಿತು ಸ್ಟಾಕ್ಹೋಮ್ನಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಸಮಾವೇಶದಲ್ಲಿ ಬುಧವಾರ ದಿಕ್ಸೂಚಿ ಭಾಷಣ ಮಾಡಿದ ಅವರು, ‘ಪರಿಷ್ಕರಣೆಯ ಸಮಯದಲ್ಲೇ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳೊಂದಿಗೆ ಮತದಾರರ ಪಟ್ಟಿಯನ್ನು ಹಂಚಿಕೊಳ್ಳಲಾಗುವುದು’ ಎಂದು ಹೇಳಿದರು.</p>.<p>50ಕ್ಕೂ ಹೆಚ್ಚು ದೇಶಗಳಲ್ಲಿನ ಚುನಾವಣಾ ಸಂಸ್ಥೆಗಳ 100ಕ್ಕೂ ಹೆಚ್ಚು ಪ್ರತಿನಿಧಿಗಳು ಈ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.</p>.<p>‘1960ರಿಂದಲೂ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಗೆ ಮತದಾರರ ಪಟ್ಟಿಯನ್ನು ನೀಡಲಾಗುತ್ತಿದೆ. ಇದಕ್ಕೆ ಸಂಬಂಧಿಸಿದ ಆಕ್ಷೇಪಣೆ, ಅಹವಾಲುಗಳನ್ನು ಸ್ವೀಕರಿಸಲಾಗುತ್ತಿದೆ’ ಎಂದು ಸಿಇಸಿ ತಿಳಿಸಿದರು.</p>.<p>ಕಾಂಗ್ರೆಸ್ ಸೇರಿದಂತೆ ಪ್ರಮುಖ ವಿರೋಧ ಪಕ್ಷಗಳು ಮತದಾರರ ಪಟ್ಟಿ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಹೊತ್ತಿನಲ್ಲೇ ಚುನಾವಣಾ ಆಯುಕ್ತರು ಈ ಹೇಳಿಕೆ ನೀಡಿದ್ದಾರೆ.</p>.<p>ವಿರೋಧ ಪಕ್ಷದ ಮುಖಂಡರ ಆರೋಪಗಳನ್ನು ಚುನಾವಣಾ ಆಯೋಗವು ತಳ್ಳಿಹಾಕಿದ್ದು, ಅಸಂಬದ್ಧ ಎಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>